newsics.com/ನ್ಯೂಸಿಕ್ಸ್
ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಇಂದು ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ 4.05ಕ್ಕೆ ಆಯೋಜಿಸಲಾಗಿರುವ ಭವ್ಯ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಹಾಗೂ ಅವರ ಸಂಪುಟದ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಪ್ರಮಾಣವಚನ ಸ್ವೀಕರಿಸುವ ಮುನ್ನ ಡಿ.ಕೆ.ಶಿವಕುಮಾರ್ ಅವರು ತಮ್ಮ ತಾಯಿಯ ಆಶೀರ್ವಾದ ಪಡೆದಿದ್ದಾರೆ. ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಡಿ.ಕೆ.ಶಿವಕುಮಾರ್ ಅವರು ತಾಯಿ ಗೌರಮ್ಮ ಅವರ ಪಾದ ಮುಟ್ಟಿ ನಮಸ್ಕರಿಸಿ, ಆಶೀರ್ವಾದ ಪಡೆದರು.
ಈ ಮೂಲಕ ತಮ್ಮ ರಾಜಕೀಯ ಜೀವನದ ಅತ್ಯಂತ ಮಹತ್ವದ ಮತ್ತು ಐತಿಹಾಸಿಕ ಕ್ಷಣಕ್ಕೂ ಮುನ್ನ ತಾಯಿಯ ಆಶಿರ್ವಾದ, ಹಾರೈಕೆ ಪಡೆದು ಪ್ರಮಾಣವಚನ ಕಾರ್ಯಕ್ರಮಕ್ಕೆ ತೆರಳಿದರು.
ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕ : 230 ಬಸ್ ನಿಲ್ದಾಣಗಳಲ್ಲಿ ನೇರಪ್ರಸಾರ