newsics.com/ನ್ಯೂಸಿಕ್ಸ್
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಲೋಕಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ‘ಟ್ರಬಲ್ ಶೂಟರ್’ ಎಂದೇ ಖ್ಯಾತರಾಗಿರುವ ಡಿ.ಕೆ. ಶಿವಕುಮಾರ್ (DKS) ಅವರು ಕೇವಲ ಒಬ್ಬ ನಾಯಕರಷ್ಟೇ ಅಲ್ಲ, ಕಾಂಗ್ರೆಸ್ ಪಕ್ಷದ ಅತ್ಯಂತ ಶಕ್ತಿಶಾಲಿ ತಂತ್ರಗಾರರಾಗಿದ್ದಾರೆ. ತಮ್ಮ ಬಿಡದ ಛಲ, ಅವಿರತ ಹೋರಾಟ ಮತ್ತು ಕಠಿಣ ಸನ್ನಿವೇಶಗಳನ್ನೂ ರಾಜಕೀಯ ಬಂಡವಾಳವಾಗಿ ಪರಿವರ್ತಿಸುವ ಚಾಣಾಕ್ಷತನದಿಂದ ಇಂದು ಅವರು ರಾಜ್ಯದ ಅತ್ಯುನ್ನತ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದ್ದಾರೆ
2023ರಲ್ಲಿ ಸಿದ್ಧರಾಮಯ್ಯ ಸಂಪುಟದಲ್ಲಿ ಉಪಮುಖ್ಯಮಂತ್ರಿಯಾಗಿ ಹಾಗೂ ಜಲಸಂಪನ್ಮೂಲ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡರು. ತದನಂತರದ ರಾಜಕೀಯ ವಿದ್ಯಮಾನಗಳ ಹಿನ್ನೆಲೆಯಲ್ಲಿ, ಜೂನ್ 3, 2026 ರಂದು ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಗದ್ದುಗೆಗೇರಿದ್ದಾರೆ.
ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕ : 230 ಬಸ್ ನಿಲ್ದಾಣಗಳಲ್ಲಿ ನೇರಪ್ರಸಾರ