Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ
ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

Share
2 Min Read
SHARE

newsics.com/ನ್ಯೂಸಿಕ್ಸ್

ಖಾತೆ ಹಂಚಿಕೆಯ ಬೆನ್ನಲ್ಲೇ ಹಿರಿಯ ನಾಯಕರಾದ ರಾಮಲಿಂಗಾ ರೆಡ್ಡಿ ಹಾಗೂ ಕೆ.ಎಚ್. ಮುನಿಯಪ್ಪ ಅವರು ಬಂಡಾಯದ ಬಾವುಟ ಹಾರಿಸಿರುವುದು ಕಾಂಗ್ರೆಸ್ ಪಾಳಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ಹೈಕಮಾಂಡ್, ನೂತನ ಸರ್ಕಾರಕ್ಕೆ ಎದುರಾಗಿರುವ ಈ ದೊಡ್ಡ ಕಂಟಕವನ್ನು ನಿವಾರಿಸಲು ಹಾಗೂ ‘ಡ್ಯಾಮೇಜ್ ಕಂಟ್ರೋಲ್’ ಮಾಡಲು ಮಹತ್ವದ ಮೀಟಿಂಗ್​ನ್ನು ಮಾಡಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (KIA) ವಿಐಪಿ ಲಾಂಜ್ ಹಾಗೂ ಪಕ್ಕದಲ್ಲೇ ಇರುವ ಐಷಾರಾಮಿ ತಾಜ್ ಹೋಟೆಲ್‌ನಲ್ಲಿ ಈ ಹೈವೋಲ್ಟೇಜ್ ಸಭೆ ನಡೆಸುತ್ತಿದ್ದಾರೆ.

ರಾಜ್ಯ ನಾಯಕರ ಅಸಮಾಧಾನ ಶಮನಗೊಳಿಸಲು ಎಐಸಿಸಿ ಮುಖಂಡ ರಾಹುಲ್ ಗಾಂಧಿ, ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಂಟಿಯಾಗಿ ಸಭೆ ನಡೆಸುತ್ತಿದ್ದಾರೆ. ಈಗಾಗಲೇ ಉಂಟಾಗಿರುವ ಗೊಂದಲದ ತೀವ್ರತೆಯನ್ನು ಅರಿತು ಹೈಕಮಾಂಡ್ ನಾಯಕರು, ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ತುರ್ತಾಗಿ ವಿಮಾನ ನಿಲ್ದಾಣಕ್ಕೆ ಕರೆಸಿಕೊಂಡಿದ್ದಾರೆ.

ಕೆಂಪೇಗೌಡ ಏರ್‌ಪೋರ್ಟ್‌ನ ವಿಐಪಿ ಲಾಂಜ್‌ನಲ್ಲಿ ಸಚಿವ ಕೆ.ಎಚ್. ಮುನಿಯಪ್ಪ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸುರ್ಜೆವಾಲ ಅವರನ್ನು ಭೇಟಿಯಾಗಿ ತಮ್ಮ ಖಾತೆ ಬದಲಾವಣೆ ಕುರಿತು ಮಾತುಕತೆ ನಡೆಸಿದರು. ಇದರ ಬೆನ್ನಲ್ಲೇ, ತಾಜ್ ಹೋಟೆಲ್‌ನಲ್ಲಿ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಸುಮಾರು 40 ನಿಮಿಷಗಳ ಕಾಲ ಹಿರಿಯ ನಾಯಕರ ಮಹತ್ವದ ಸಭೆ ನಿಗದಿಯಾಗಿದೆ. 8 ಬಾರಿ ಗೆದ್ದಿದ್ದರೂ ಹಿರಿತನಕ್ಕೆ ಗೌರವ ಸಿಕ್ಕಿಲ್ಲ ಹಾಗೂ ತಮಗೆ ಕೃಷಿ ಅಥವಾ ಸಮಾಜ ಕಲ್ಯಾಣ ಇಲಾಖೆ ಬೇಕು ಎಂಬ ತಮ್ಮ ಬೇಡಿಕೆಯನ್ನು ಮುನಿಯಪ್ಪ ಅವರು ವರಿಷ್ಠರ ಮುಂದೆ ಇಟ್ಟಿದ್ದಾರೆ ಎನ್ನಲಾಗಿದೆ. ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ನಿರ್ಧಾರ ಹಾಗೂ ಮುನಿಯಪ್ಪ ಅವರ ಅಸಮಾಧಾನ ಎರಡನ್ನೂ ಒಟ್ಟಿಗೆ ಶಮನಗೊಳಿಸಲು ಹೈಕಮಾಂಡ್ ಸೂತ್ರವೊಂದನ್ನು ಸಿದ್ಧಪಡಿಸುತ್ತಿದ್ದು, ಈ ಹೈವೋಲ್ಟೇಜ್ ಸಭೆಯ ನಂತರ ರಾಜ್ಯ ರಾಜಕಾರಣದ ಮುಂದಿನ ಚಿತ್ರಣ ಸ್ಪಷ್ಟವಾಗಲಿದೆ.

‘ನಾನು ಚಾರ್ಜ್ ತೆಗೆದುಕೊಳ್ಳಲ್ಲ’ ಎಂದು ಹಠ ಹಿಡಿದ ಕೆ.ಎಚ್. ಮುನಿಯಪ್ಪ

ರಾಜ್ಯ ರಾಜಕಾರಣದಲ್ಲಿ ಖಾತೆ ಹಂಚಿಕೆಯ ಕಿಚ್ಚು ಈಗ ಮತ್ತಷ್ಟು ಜ್ವಾಲೆಯಾಗಿ ಮಾರ್ಪಟ್ಟಿದೆ. ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆ ಪ್ರಕಟಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಭಾರಿ ಆಘಾತ ಎದುರಾಗಿದ್ದು, ಮತ್ತೊಬ್ಬ ಪ್ರಭಾವಿ ನಾಯಕ ಕೆ.ಎಚ್. ಮುನಿಯಪ್ಪ ಅವರು ಸರ್ಕಾರದ ವಿರುದ್ಧ ನೇರ ಬಂಡಾಯ ಸಾರಿದ್ದಾರೆ. ತಮಗೆ ಹಂಚಿಕೆಯಾಗಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಅವರು, “ನಾನು ಆಹಾರ ಇಲಾಖೆ ಸಚಿವನಾಗಿ ಚಾರ್ಜ್ ತೆಗೆದುಕೊಳ್ಳಲ್ಲ ಎಂದು ಜಿದ್ದಿಗೆ ಬಿದ್ದಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್‌ಗೆ ಮುನಿಯಪ್ಪ ಕೊಟ್ಟ ‘2028’ರ ವಾರ್ನಿಂಗ್

ರಾಜ್ಯ ಕಾಂಗ್ರೆಸ್ ಸಂಪುಟದಲ್ಲಿ ಖಾತೆ ಹಂಚಿಕೆಯ ಕಿಚ್ಚು ಈಗ ಹೈಕಮಾಂಡ್ ನಾಯಕರ ವಿರುದ್ಧದ ಬಹಿರಂಗ ಆಕ್ರೋಶವಾಗಿ ಮಾರ್ಪಟ್ಟಿದೆ. ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆ ಬೆನ್ನಲ್ಲೇ ತೀವ್ರ ಅಸಮಾಧಾನಗೊಂಡಿರುವ ಮತ್ತೊಬ್ಬ ಹಿರಿಯ ನಾಯಕ ಹಾಗೂ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರು, ಪಕ್ಷದ ರಾಷ್ಟ್ರೀಯ ನಾಯಕರ ವಿರುದ್ಧವೇ ನೇರ ವಾಗ್ದಾಳಿ ನಡೆಸಿದ್ದಾರೆ. ನಾನು ಈಗಾಗಲೇ 8 ಬಾರಿ ಗೆದ್ದಿರುವ ಹಿರಿಯ ರಾಜಕಾರಣಿ. ಆದರೆ ಖಾತೆ ಹಂಚಿಕೆ ಮಾಡುವಾಗ ನಮ್ಮ ಸೀನಿಯಾರಿಟಿಯನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಪಕ್ಷದಲ್ಲಿ ಎಲ್ಲ ನಾಯಕರನ್ನೂ ಸಮತೋಲನವಾಗಿ ನೋಡಬೇಕಿತ್ತು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದಲ್ಲಿ ಎಲ್ಲರನ್ನೂ ಒಂದೇ ಕಣ್ಣಿನಿಂದ ನೋಡಬೇಕು” ಎಂದು ಮುನಿಯಪ್ಪ ಅವರು ನೇರವಾಗಿ ಅಸಮಾಧಾನ ಹೊರಹಾಕಿದ್ದಾರೆ.

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

Share This Article
Facebook Twitter Copy Link Print
Previous Article ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?
Next Article ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?