newsics.com/ನ್ಯೂಸಿಕ್ಸ್
ಬೆಂಗಳೂರು: ಸರ್ಕಾರ ರಚನೆಯಾಗಿ 48 ಗಂಟೆ ಕಳೆಯುವಷ್ಟರಲ್ಲೇ ಅಸಮಾಧಾನದ ಬಾಂಬ್ ಸಿಡಿದಿದೆ. ಕೊಟ್ಟ ಮಾತು, Word Power is World Power ಎಂದು ಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದ ಮಾತನ್ನು ಉಲ್ಲೇಖಿಸಿ ರಾಮಲಿಂಗಾರೆಡ್ಡಿ (DK Shivakumar) ಬೆಂಬಲಿಗರು ರಾಂಗ್ ಆಗಿದ್ದರೆ, ಬೆಂಗಳೂರಿನ ಪವರ್ ಫುಲ್ ರಾಜಕಾರಣಿ ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆವಯಾವುದೇ ಕಾರಣಕ್ಕೂ ಖಾತೆ ಬದಲಾವಣೆ ಅಸಾಧ್ಯ ಎಂದು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ.
ಸರ್ಕಾರಕ್ಕೆ ಬಂಗಾರದ ಖಜಾನೆ, ಸರ್ಕಾರದ ಆರ್ಥಿಕತೆಯ ಪವರ್ ಹೌಸ್ ಇದೇ ಪವರ್ ಹೌಸ್ಗಾಗಿ ಡಿಕೆ ಸರ್ಕಾರದಲ್ಲಿ ಹಗ್ಗಜಗ್ಗಾಟ ನಡೀತಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗುತ್ತೆಂಬ ನಿರೀಕ್ಷೆಯಲ್ಲಿದ್ದ ಸೌಮ್ಯ ಸ್ವಭಾದ ರಾಜಕಾರಣಿ, ಬೆಂಗಳೂರಲ್ಲಿ ಹಿಡಿತ ಹೊಂದಿರುವ ನಾಯಕ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದು, ನೀವು ಕೊಟ್ಟ ಜಲಸಂಪನ್ಮೂಲ ಸಚಿವ ಸ್ಥಾನ ನನಗೆ ಬೇಡ. ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಆಗಲ್ಲ ಎಂದು ಮಂತ್ರಿ ಸ್ಥಾನ ತೊರೆದಿದ್ದಾರೆ. ಇದರಿಂದ ಅಲ್ಲೋಲಕಲ್ಲೋಲ ಸೃಷ್ಟಿಸಿದ್ದು, ಸಿಎಂ ಡಿಕೆ ಶಿವಕುಮಾರ್ ಅವರು ರಾಮಲಿಂಗಾರೆಡ್ಡಿ ಮನವೊಲಿಕೆಗೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಆದ್ರೆ, ಹೈಕಮಾಂಡ್ ಮಾತ್ರ ಯಾವುದೇ ಕಾರಣಕ್ಕೂ ಖಾತೆ ಬದಲಾವಣೆ ಇಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದೆ.
ಮಾತುಕತೆ ಮೂಲಕ ರಾಮಲಿಂಗಾರೆಡ್ಡಿ ಮನವೊಲಿಸುವಂತೆ ಸಿಎಂ ಡಿಕೆ ಶಿವಕುಮಾರ್ಗೆ ಸೂಚನೆ ನೀಡಿದೆ. ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಮಾಡಿ ಬೆಂಗಳೂರು ಅಭಿವೃದ್ಧಿ ಖಾತೆ ನೀಡಲು ಹೈಕಮಾಂಡ್ ನಿರಾಕರಿಸಿದೆ. ಯಾಕೆಂದರೆ, ಒಬ್ಬರ ಬೇಡಿಕೆಗೆ ಸ್ಪಂದಿಸಿದರೆ ಇತರೆ ಸಚಿವರು ಸಹ ತಮ್ಮ ಖಾತೆ ಬದಲಾವಣೆ ಮಾಡುವಂತೆ ಒತ್ತಡದ ಹೇರುವ ಸಾಧ್ಯತೆಗಳಿವೆ. ಈಗ ಮಾತ್ರವಲ್ಲ ಮುಂದೆ ಸಂಪುಟ ವಿಸ್ತರಣೆ ವೇಳೆಯೂ ಬೇಡಿಕೆ ಹೆಚ್ಚಾಗುವ ಸಾಧ್ಯತೆಯಿದೆ. ಆದ್ದರಿಂದ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆಗೆ ಹೈಕಮಾಂಡ್ ಒಪ್ಪಿಗೆ ನೀಡುತ್ತಿಲ್ಲ ಎಂದು ತಿಳಿದುಬಂದಿದೆ.