newsics.com/ನ್ಯೂಸಿಕ್ಸ್
ಪ್ರೊಫೆಸರ್ರೊರ್ವರು ಧಾರವಾಡದ ವಿವಿಯಲ್ಲಿ ಪಿಎಚ್ಡಿ (Ph.D) ಸಂಶೋಧನಾ ವಿದ್ಯಾರ್ಥಿನಿಯೊಬ್ಬಳನ್ನು ಪ್ರೀತಿಸುವ ನಾಟಕವಾಡಿ, ಆಕೆಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ ಆರೋಪ ವ್ಯಕ್ತವಾಗಿದೆ.
ವಿಜಯಪುರ ಮೂಲದ ಆ ವಿದ್ಯಾರ್ಥಿನಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ಬಳಿಕ, ಆಕೆಗೆ ಮೂರು ಬಾರಿ ಬಲವಂತವಾಗಿ ಅಥವಾ ಸಮ್ಮತಿಯಿಲ್ಲದೆ ಗರ್ಭಪಾತ ಮಾಡಿಸಲಾಗಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ವಿಷಯ ಕುಟುಂಬದವರಿಗೆ ತಿಳಿದ ಬಳಿಕ ಸಂತ್ರಸ್ತ ವಿದ್ಯಾರ್ಥಿನಿ ತನ್ನ ಸಂಶೋಧನೆಯನ್ನು ಅರ್ಧಕ್ಕೆ ನಿಲ್ಲಿಸಿ ಮನೆಗೆ ಮರಳಿದ್ದಾಳೆ.
ಇನ್ನೊಬ್ಬ ವಿದ್ಯಾರ್ಥಿಯ ಮೇಲೆ ಒತ್ತಡ: ಈ ಪ್ರಕರಣದ ನಂತರ, ಅದೇ ಪ್ರೊಫೆಸರ್ ಬಳಿ ಮಾರ್ಗದರ್ಶನ ಪಡೆಯುತ್ತಿದ್ದ ಮತ್ತೊಬ್ಬ ವಿದ್ಯಾರ್ಥಿ ವೇದವ್ಯಾಸ್ ಚೌಹಾಣ್ ಅವರ ಮೇಲೆ ಪ್ರೊಫೆಸರ್ ಒತ್ತಡ ಹೇರಿದ್ದಾರೆ ಎಂಬ ಆರೋಪವಿದೆ. “ಆ ವಿದ್ಯಾರ್ಥಿನಿಯನ್ನು ಮರಳಿ ಕರೆತಂದರೆ ಮಾತ್ರ ನಿನಗೆ ಪಿಎಚ್ಡಿ ಪೂರ್ಣಗೊಳಿಸಲು ಸಹಕರಿಸುತ್ತೇನೆ, ಇಲ್ಲದಿದ್ದರೆ ಇಲ್ಲ” ಎಂದು ಪ್ರೊಫೆಸರ್ ಬೆದರಿಕೆ ಹಾಕಿದ್ದಾರೆ ಎಂದು ವೇದವ್ಯಾಸ್ ದೂರಿನಲ್ಲಿ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದ ಸಾಕ್ಷ್ಯ: ಪ್ರೊಫೆಸರ್ ಸ್ವತಃ ವಿದ್ಯಾರ್ಥಿನಿಯೊಂದಿಗಿನ ಆಪ್ತ ಫೋಟೋಗಳನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದರು ಎಂಬ ಮಾತುಗಳೂ ಕೇಳಿಬರುತ್ತಿವೆ. ಇದು ಘಟನೆಯ ಗಂಭೀರತೆಯನ್ನು ಹೆಚ್ಚಿಸಿದೆ.
ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ: ಈ ಕೃತ್ಯದ ವಿರುದ್ಧ ಸಂತ್ರಸ್ತ ವಿದ್ಯಾರ್ಥಿ ವೇದವ್ಯಾಸ್ ಅವರು ವಿಶ್ವವಿದ್ಯಾಲಯದ ಕುಲಸಚಿವರಿಗೆ ಮತ್ತು ವಿದ್ಯಾರ್ಥಿ ಸಂಘಟನೆಗಳಿಗೆ ದೂರು ನೀಡಿದ್ದಾರೆ. ಆರೋಪಿ ಪ್ರೊಫೆಸರ್ ದೇವರಾಜ್ ತಂಗುದೊರೈ ಅವರನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಬೇಕು ಮತ್ತು ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ವಿದ್ಯಾರ್ಥಿ ಸಂಘಟನೆಗಳು ಒತ್ತಾಯಿಸಿವೆ.ವಿಶ್ವವಿದ್ಯಾಲಯದಂತಹ ಪವಿತ್ರ ಸ್ಥಳದಲ್ಲಿ ನಡೆದಿರುವ ಈ ಘಟನೆ ವಿದ್ಯಾರ್ಥಿ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆಡಳಿತ ಮಂಡಳಿ ಈ ಬಗ್ಗೆ ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದು ಸದ್ಯದ ಕುತೂಹಲವಾಗಿದೆ.
CJI in London ಲಂಡನ್ನಲ್ಲಿ ಸಿಜೆಐ ಸೂರ್ಯಕಾಂತ್ ಭಾಷಣಕ್ಕೆ ಅಡ್ಡಿ: ಹೈಕಮಿಷನ್ ತೀವ್ರ ಆಕ್ರೋಶ