newsics.com/ನ್ಯೂಸಿಕ್ಸ್
ತಿಪಟೂರು ಕಾಂಗ್ರೆಸ್ ಶಾಸಕರಾದ ಕೆ. ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಸುದ್ದಿ ಒರಬಂದಿದೆ. ಈ ಸುದ್ದಿ ತಿಪಟೂರು ಮತ್ತು ರಾಜ್ಯದ ರಾಜಕೀಯ ವಲಯದಲ್ಲಿ ಆತಂಕ ಮೂಡಿಸಿದೆ. ನವದೆಹಲಿಯಲ್ಲಿ ಇದ್ದಾಗ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿ, ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.
ಶಾಸಕರ ಆರೋಗ್ಯ ಸ್ಥಿತಿ ಗಂಭೀರವಾಗಿದೆ, ಆಸ್ಪತ್ರೆಯಲ್ಲಿ ಡಿಸಿಎಂ ಪರಮೇಶ್ವರ್, ಎಂಎಲ್ಸಿ ರಾಜೇಂದ್ರ ರಾಜಣ್ಣ ಇದ್ದಾರೆ. ಇಬ್ಬರ ಉಪಸ್ಥಿತಿಯಲ್ಲಿ ಷಡಕ್ಷರಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ.
ದೆಹಲಿಯ ಕರ್ನಾಟಕ ಭವನದಲ್ಲಿ ಉಳಿದುಕೊಂಡಿದ್ದ ಶಾಸಕ ಷಡಕ್ಷರಿ, ಇಂದು ಬೆಳಗ್ಗೆ ಡಿಸಿಎಂ ಪರಮೇಶ್ವರ್ ಕೋಣೆಗೆ ಬಂದು ಮಾತಾಡಲು ತೊಂದರೆಯಾಗುತ್ತಿದೆ ಎಂದು ಸಂಜ್ಞೆಯಲ್ಲಿ ಹೇಳಿದ್ದಾರೆ. ಕೂಡಲೇ ಪರಮೇಶ್ವರ್ ಅವರು ಕರ್ನಾಟಕ ಭವನದ ಸಿಬ್ಬಂದಿ ಸಹಾಯದೊಂದಿಗೆ ಶಾಸಕರನ್ನು ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶಾಸಕರು ಈ ಹಿಂದೆ ನರರೋಗಕ್ಕೆ ಸಂಬಂಧಿಸಿದ ಚಿಕಿತ್ಸೆ ಪಡೆದುಕೊಂಡಿದ್ದರು.
Bengaluru Traffic ವಾಹನ ಸವಾರರ ಗಮನಕ್ಕೆ : ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್