newsics.com/ನ್ಯೂಸಿಕ್ಸ್
ಬೆಂಗಳೂರು: ರಾಜ್ಯದ ಜನರಿಗೆ ಐದು ಗ್ಯಾರಂಟಿ ಯೋಜನೆಗಳನ್ನು ಕೊಟ್ಟು ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಆದ್ರೀಗ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳ ಪೈಕಿ ಎರಡು ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಸರ್ಕಾರ ಪ್ರತಿ ಮನೆ ಯಜಮಾನಿಗೆ ತಿಂಗಳಿಗೆ 2,000 ರೂಪಾಯಿಯನ್ನ ಸರ್ಕಾರ ಪಾವತಿ ಮಾಡ್ತಿದೆ. ಆದ್ರೀಗ ಗೃಹಲಕ್ಷ್ಮಿ ಯೋಜನೆ ಸೋರಿಕೆ ತಪ್ಪಿಸಲು ಸರ್ಕಾರ ಮೇಜರ್ ಸರ್ಜರಿಗೆ ಮುಂದಾಗಿದೆ.
ತಾಂತ್ರಿಕ ಕಾರಣಗಳಿಂದಾಗಿ ಅವರ ಬ್ಯಾಂಕ್ ಖಾತೆಗಳಿಗೆ ಸರ್ಕಾರದಿಂದ ಪ್ರತಿ ತಿಂಗಳು 2,000 ರೂಪಾಯಿ ಜಮೆಯಾಗುತ್ತಲೇ ಇದೆ. ಈ ರೀತಿ ಸರ್ಕಾರದ ಬೊಕ್ಕಸಕ್ಕೆ ಆಗುತ್ತಿರುವ ನಷ್ಟವನ್ನು ತಪ್ಪಿಸಲು ಸರ್ಕಾರ ಈಗ ‘ಆಡಿಟಿಂಗ್’ ಮೊರೆ ಹೋಗಿದೆ.
ಸರ್ಕಾರ ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ, ಬೆಳಗಾವಿಯಲ್ಲಿ ಅತಿ ಹೆಚ್ಚು ಅಂದರೆ 15,850 ಮರಣ ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ನಗರದಲ್ಲಿ 14,038, ತುಮಕೂರಿನಲ್ಲಿ 12,139 ಮತ್ತು ಮೈಸೂರಿನಲ್ಲಿ 11,541 ಮೃತ ಫಲಾನುಭವಿಗಳನ್ನು ಗುರುತಿಸಲಾಗಿದೆ. ಈ ಮೃತಪಟ್ಟವರ ಹೆಸರಿನಲ್ಲಿ ಹಣ ದುರುಪಯೋಗವಾಗುವುದನ್ನು ತಡೆಯುವುದು ಸರ್ಕಾರದ ಈಗಿನ ಆದ್ಯತೆಯಾಗಿದೆ.
ಈ ಲೋಪದೋಷಗಳನ್ನು ಸರಿಪಡಿಸಲು ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪ್ರಮುಖ ಸಲಹೆಯೊಂದನ್ನು ನೀಡಿದ್ದಾರೆ. ‘ಅರ್ಹರಿಗೆ ಮಾತ್ರ ಹಣ ತಲುಪಲು ಫಲಾನುಭವಿಗಳಿಗೆ ‘ಜೀವಿತ ಪ್ರಮಾಣ ಪತ್ರ’ (Life Certificate) ಸಲ್ಲಿಕೆಯನ್ನು ಕಡ್ಡಾಯಗೊಳಿಸಬೇಕು. ಇದರಿಂದ ಮೃತಪಟ್ಟವರು ಹಾಗೂ ಅನರ್ಹರನ್ನು ಪತ್ತೆ ಹಚ್ಚುವುದು ಸುಲಭವಾಗುತ್ತದೆ’ ಎಂದು ಅವರು ಮನವಿ ಮಾಡಿದ್ದಾರೆ.
ಯೋಜನೆಯ ಪರಿಷ್ಕರಣೆ ಎಂದರೆ ಯೋಜನೆ ನಿಲ್ಲಿಸುವುದಲ್ಲ. ಪ್ರಸ್ತುತ ಸೌಲಭ್ಯ ಪಡೆಯುತ್ತಿರುವ ಯಾವುದೇ ಒಬ್ಬನೇ ಒಬ್ಬ ಅರ್ಹ ಮಹಿಳೆಗೆ ಇದರಿಂದ ತೊಂದರೆಯಾಗುವುದಿಲ್ಲ. ಸರ್ಕಾರದ ಹಣವು ದುರುಪಯೋಗವಾಗುವುದನ್ನು ತಡೆದು, ನಿಜವಾದ ಬಡ ಕುಟುಂಬಗಳಿಗೆ ನ್ಯಾಯ ಒದಗಿಸುವುದೇ ಈ ಪರಿಷ್ಕರಣೆಯ ಮೂಲ ಉದ್ದೇಶವಾಗಿದೆ.
ಜಮೀರ್ ಅಹ್ಮದ್ ವಿರುದ್ಧ ಸಿಟ್ಟಾದ ಸಿದ್ದರಾಮಯ್ಯ : ಜಮೀರ್ ಬೆಂಬಲಿಗರಿಗೆ ಹೇಳಿದ್ದೇನು?: