newsics.com/ನ್ಯೂಸಿಕ್ಸ್
ಇದೇ ವರ್ಷಾರಂಭದಲ್ಲಿ ಮದುವೆಯಾದ ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವಕರೊಂಡ ಅವರು ದಾಂಪತ್ಯ ಆರಂಭಿಸುವ ಮುನ್ನ ದೇವರಕೊಂಡ ಚಾರಿಟೇಬಲ್ ಟ್ರಸ್ಟ್ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ನೆರವಾಗುವ ಭರವಸೆಯನ್ನು ನೀಡಿದ್ದರು. ಇದೀಗ ಆ ಭರವಸೆಯನ್ನು ಈಡೇರಿಸಿದ್ದಾರೆ.
ನಾಗರ್ ಕರ್ನೂಲ್ ಜಿಲ್ಲೆಯ ಅಚ್ಚಂಪೇಟೆಯ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವಿಜಯ್ ದೇವರಕೊಂಡ-ರಶ್ಮಿಕಾ ದಂಪತಿ ಸ್ಕಾಲರ್ಶಿಪ್ ವಿತರಿಸುತ್ತಿದ್ದಾರೆ. ಈ ವರ್ಷದ ಆರಂಭದಲ್ಲಿ ಅಂದರೆ ಮದುವೆಯಾದ ತಕ್ಷಣವೇ, ವಿಜಯ್ ದೇವರಕೊಂಡ ತಮ್ಮ ಸ್ವಂತ ಊರಾದ ನಾಗರ್ ಕರ್ನೂಲ್ ಜಿಲ್ಲೆಯ ತುಮ್ಮನ್ಪೇಟೆ ಗ್ರಾಮಕ್ಕೆ ಭೇಟಿ ನೀಡಿದ್ದರು.
ಆ ಸಂದರ್ಭದಲ್ಲಿ, ಅಚ್ಚಂಪೇಟೆ ಡಿವಿಷನ್ ವ್ಯಾಪ್ತಿಯ ಸರ್ಕಾರಿ ಶಾಲೆಗಳ ಟಾಪರ್ಸ್ (ಹೆಚ್ಚು ಅಂಕ ಗಳಿಸಿದ) ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡುವುದಾಗಿ ಭರವಸೆ ನೀಡಿದ್ದರು. ಈಗ ಆ ಭರವಸೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ‘ದಿ ದೇವರಕೊಂಡ ಫೌಂಡೇಶನ್’ ಮೂಲಕ, 44 ಸರ್ಕಾರಿ ಶಾಲೆಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಸ್ವತಃ ಸ್ಕಾಲರ್ಶಿಪ್ ವಿತರಿಸುತ್ತಿದ್ದಾರೆ.
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಜಂಟಿಯಾಗಿ ದೇವರಕೊಂಡ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅಚ್ಚಂಪೇಟ್ ಜಿಲ್ಲೆಯ 180 ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡುತ್ತಿದ್ದಾರೆ. ನಟ ವಿಜಯ್ ದೇವರಕೊಂಡ ಅವರು ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದವರ ಪಟ್ಟಿಯನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ. ‘ನಾವು ಅಚ್ಚಂಪೇಟೆ ಮಂಡಲದ 9 ಮತ್ತು 10ನೇ ತರಗತಿಯ ಕಠಿಣ ಪರಿಶ್ರಮಿ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲು ಅಂದುಕೊಂಡಿದ್ದ ಸಣ್ಣ ಕನಸನ್ನು ಈಡೇರಿಸುತ್ತಿದ್ದೇವೆ. ತಮ್ಮ ಹೆತ್ತವರಿಗೆ ಹೆಮ್ಮೆ ತಂದ 180 ಮಕ್ಕಳ ಪಟ್ಟಿ ಇಲ್ಲಿದೆ’ ಎಂದು ಅವರು ಬರೆದುಕೊಂಡಿದ್ದಾರೆ.
ಈ ವಿದ್ಯಾರ್ಥಿವೇತನ ಬಹಳ ಚಿಕ್ಕದಾಗಿರಬಹುದು, ಆದರೆ ಇದು ನಮಗೆ ಮುಖ್ಯ ಎಂದು ನಾನು ಭಾವಿಸುತ್ತೇನೆ. ನಾನು ನಿಮ್ಮ ಜೀವನದ ಭಾಗವಾಗಲು ಬಯಸುತ್ತೇನೆ. ನನ್ನ ಗ್ರಾಮದಿಂದ ಆರಂಭವಾದ ಈ ಪ್ರಯತ್ನ, ಮುಂದಿನ ದಿನಗಳಲ್ಲಿ ಇಡೀ ತೆಲಂಗಾಣದಾದ್ಯಂತ ವಿಸ್ತರಣೆಯಾಗಬೇಕು ಎಂಬುದು ನನ್ನ ಕನಸು’ ಎಂದು ಅವರು ಹೇಳಿಕೊಂಡಿದ್ದಾರೆ.
ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ