Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

Share
2 Min Read
SHARE

ರಾಜ್ಯಾದ್ಯಂತ ಮುಂಗಾರು ಮಳೆ ನಾಪತ್ತೆಯಾಗಿದ್ದು, ತೀವ್ರ ಆತಂಕ ತಂದಿದೆ. ಜೂನ್‌ ಮಧ್ಯಭಾಗದಲ್ಲಿ ಅಬ್ಬರಿಸಿ ಬೀಳಬೇಕಿದ್ದ ಮಾನ್ಸೂನ್‌ ಮಳೆ ಇನ್ನೂ ಚದುರಿದ ರೀತಿಯಲ್ಲೇ ಇದೆ. ರಾಜ್ಯಾದ್ಯಂತ ವ್ಯಾಪಿಸಿಲ್ಲ. ಬೇರೆ ಜಿಲ್ಲೆಗಳಲ್ಲಿ ಅಲ್ಲದೆ ಇದ್ದರೂ, ಕರಾವಳಿ ಭಾಗದಲ್ಲಾದ್ರೂ ಜಾಸ್ತಿ ಮಳೆಯಾಗುತ್ತಿತ್ತು. ಆದರೆ ಕರಾವಳಿ ಕರ್ನಾಟಕದಲ್ಲಿಯೂ ಮುಂಗಾರು ದುರ್ಬಲವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಎಲ್ಲೆಲ್ಲಿ ಮಳೆ?

ಇಂದು ಕೂಡ ಮಳೆಯ ಪ್ರಮಾಣ ಜಾಸ್ತಿ ಇಲ್ಲ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪ್ರತ್ಯೇಕ ಸ್ಥಗಳಲ್ಲಿ ಹಗುರದಿಂದ ಮಧ್ಯಮ ಪ್ರಮಾಣದಲ್ಲಿ ಮಳೆಯಾಗಬಹುದು. ಇನ್ನು ಉಡುಪಿ ಮತ್ತು ಉತ್ತರ ಕನ್ನಡದ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ದಟ್ಟವಾಗಿದೆ.
ಹಾಗೇ, ಕಲಬುರ್ಗಿ, ಬೀದರ್‌, ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದೆ. ವಿಜಯಪುರ, ಕಲಬುರ್ಗಿ, ಬೆಳಗಾವಿ, ಧಾರವಾಡ, ಗದಗ, ರಾಯಚೂರು, ಬೀದರ್‌, ಬಾಗಲಕೋಟೆ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿ ಬೀಸುತ್ತದೆ ಹೊರತು..ಮಳೆಯಾಗುವುದಿಲ್ಲ ಎಂದು IMD ಸೂಚನೆ ನೀಡಿದೆ. ಹಾಗೇ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರ, ಬಳ್ಳಾರಿ, ಶಿವಮೊಗ್ಗ, ಮೈಸೂರು, ದಾವಣಗೆರೆ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗಾಳಿಯ ಪ್ರಮಾಣ ಜಾಸ್ತಿಯಾಗಲಿದೆ.

ಎಲ್ಲಿ ಹೋಯ್ತು ಮುಂಗಾರು?

ಕರ್ನಾಟಕಕ್ಕೆ ಜೂ.4ಕ್ಕೆ ಕಾಲಿಟ್ಟಿರುವ ನೈಋತ್ಯ ಮಾನ್ಸೂನ್‌ ತನ್ನ ಚಲನೆಯನ್ನ ಮುಂದುವರಿಸಿದ್ದರೂ, ಮಳೆಯನ್ನ ತರುತ್ತಿಲ್ಲ. ಜೂ.25ರವರೆಗೂ ವಾತಾವರಣದಲ್ಲಿ ಯಾವುದೇ ದೊಡ್ಡ ಬದಲಾವಣೆಗಳೂ ಇಲ್ಲ. ಹೀಗೆ ರಾಜ್ಯಾದ್ಯಂತ ಕೆಲವೇ ಭಾಗಗಳಲ್ಲಿ ಮಾತ್ರ ಮಳೆ ಮುಂದುವರಿಯಲಿದೆ. ಇಲ್ಲೆಲ್ಲೂ ಭಾರಿ ಮಳೆಯ ಮುನ್ಸೂಚನೆಯಾಗಲೀ, ರೆಡ್‌ ಅಲರ್ಟ್‌ ಆಗಲೀ ಇಲ್ಲವೇ ಇಲ್ಲ. ಇನ್ನು ನೈಋತ್ಯ ಮಾನ್ಸೂನ್‌ ಮುಂದಿನ 4-5 ದಿನಗಳಲ್ಲಿ ಮಧ್ಯ ಅರೇಬಿಯನ್‌ ಸಮುದ್ರ, ತೆಲಂಗಾಣ, ಒಡಿಶಾ, ಜಾರ್ಖಂಡ ಮತ್ತು ಬಿಹಾರ, ಛತ್ತೀಸ್‌ಗಢದ ಕೆಲವು ಭಾಗಗಳಲ್ಲಿ ಮುನ್ನಡೆಯಲಿದೆ. ಮುಂಗಾರು ಮುನ್ನಡೆಯುತ್ತಿದ್ದರೂ, ದೇಶಾದ್ಯಂತ ಮಳೆ ತರುತ್ತಿಲ್ಲ.

ರಾಜ್ಯದಲ್ಲಿ ತಾಪಮಾನದಲ್ಲಿ ಹೆಚ್ಚಳ..

ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗಿರುವ ಮಧ್ಯೆಯೇ ಗರಿಷ್ಠ ತಾಪಮಾನದಲ್ಲಿ ಮತ್ತೆ ಹೆಚ್ಚಳವಾಗುತ್ತಿದೆ. ನಿನ್ನೆ ಕಲಬುರ್ಗಿಯಲ್ಲಿ 38.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು. ಕರ್ನಾಟಕದ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತಲೂ 5 ಡಿಗ್ರಿ ಸೆಲ್ಸಿಯಸ್‌ಗಳಷ್ಟು ಹೆಚ್ಚಾಗಿದೆ. ಕರಾವಳಿ ಭಾಗದ ಕೆಲವು ಸ್ಥಳಗಳಲ್ಲಿ ಕೂಡ ಗರಿಷ್ಠ ತಾಪಮಾನದ ಸಾಮಾನ್ಯಕ್ಕಿಂತಲೂ 3 ರಿಂದ 5 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ರಾಜ್ಯಾದ್ಯಂತ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್‌ನಿಂದ 38.6 ಡಿಗ್ರಿ ಸೆಲ್ಸಿಯಸ್‌ ವ್ಯಾಪ್ತಿಯಲ್ಲಿ ಇತ್ತು. ರಾಯಚೂರು ಮತ್ತು ಮೈಸೂರಲ್ಲಂತೂ ಉಷ್ಣಾಂಶದಲ್ಲಿ ಭಾರಿ ಏರಿಕೆಯಾಗಿದೆ. ಮಳೆಗಾಲ ಶುರುವಾಗಬೇಕಿದ್ದ ತಿಂಗಳಲ್ಲೂ ಬಿರು ಬೇಸಿಗೆಯೇ ಮುಂದುವರಿದಿದೆ. ಇದರ ಮಧ್ಯೆ ನೀರಿನ ಕೊರತೆಯ ಹಾಹಾಕಾರವೂ ಶುರುವಾಗಿದೆ. ಈ ಸಲ ಮುಂಗಾರು ದುರ್ಬಲ ಎಂದು ಈಗಾಗಲೇ IMD ಹೇಳಿತ್ತು. ಹಾಗೇ, ಎಲ್‌ ನಿನೋ ಪರಿಸ್ಥಿತಿಯ ಕಾರಣಕ್ಕೆ ಭೀರಕ ಬರಗಾಲದ ಮುನ್ಸೂಚನೆಯನ್ನೂ ನೀಡಿದೆ. ಅದರ ಪ್ರಭಾವ ಈಗಾಗಲೇ ಗೊತ್ತಾಗುತ್ತಿದೆ.

TAGGED:Storms rage in these districts today; Monsoon rains disappeartemperatures rise sharply again
Share This Article
Facebook Twitter Copy Link Print
Previous Article RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ
Next Article ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?