Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Crime > ದರ್ಶನ್ ಕೇಸ್‌ಗೆ ಹೊಸ ತಿರುವು: ಹೈಕೋರ್ಟ್‌ ವಕಾಲತ್ತಿನಿಂದ ಹಿಂದೆ ಸರಿದ ದರ್ಶನ್ ಪರ ವಕೀಲ
Crime

ದರ್ಶನ್ ಕೇಸ್‌ಗೆ ಹೊಸ ತಿರುವು: ಹೈಕೋರ್ಟ್‌ ವಕಾಲತ್ತಿನಿಂದ ಹಿಂದೆ ಸರಿದ ದರ್ಶನ್ ಪರ ವಕೀಲ

Share
1 Min Read
SHARE

 

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಸಂಬಂಧಿಸಿದ ಕಾನೂನು ಹೋರಾಟಕ್ಕೆ ಹೊಸ ತಿರುವು ಸಿಕ್ಕಿದೆ. ಪ್ರಕರಣದಲ್ಲಿ ದರ್ಶನ್ ಪರವಾಗಿ ವಾದಿಸುತ್ತಿದ್ದ ಹಿರಿಯ ವಕೀಲ ಎಸ್. ಸುನಿಲ್ ಕುಮಾರ್ ಅವರು ಹೈಕೋರ್ಟ್‌ಗೆ ತಾವು ಈ ಪ್ರಕರಣದ ವಕಾಲತ್ತಿನಿಂದ ನಿವೃತ್ತಿ ಪಡೆಯಲು ಬಯಸಿರುವುದಾಗಿ ತಿಳಿಸಿದ್ದಾರೆ.

ರೇಣುಕಸ್ವಾಮಿ ತಾಯಿ ರತ್ನಪ್ರಭಾ ಅವರನ್ನು ಪಾಟಿ ಸವಾಲಿಗೆ ಒಳಪಡಿಸಲು ಅವಕಾಶ ನೀಡದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಈ ಬೆಳವಣಿಗೆ ನಡೆದಿದೆ.

ವಿಚಾರಣೆ ವೇಳೆ ವಿಶೇಷ ಸರ್ಕಾರಿ ಅಭಿಯೋಜಕರು, ಪ್ರಕರಣದ ವಿಚಾರಣೆಯನ್ನು ವಿಳಂಬಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸುನಿಲ್ ಕುಮಾರ್, ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ವಿಳಂಬದ ಕಾರಣ ಜಾಮೀನು ಹಾಗೂ ಮೂಲಭೂತ ಸೌಲಭ್ಯಗಳಿಗಾಗಿ ಆಗಿದ್ದು, ವಿಚಾರಣೆಯನ್ನು ಉದ್ದೇಶಪೂರ್ವಕವಾಗಿ ತಡೆಯುವ ಪ್ರಯತ್ನವಲ್ಲ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ, ಈ ಅರ್ಜಿಗೆ ಸಂಬಂಧಿಸಿದಂತೆ ತಮ್ಮ ಕಕ್ಷಿದಾರರಿಂದ ಯಾವುದೇ ಸೂಚನೆ ದೊರೆತಿಲ್ಲ ಎಂದು ಹೇಳಿದ ಅವರು, ಪ್ರಕರಣದಿಂದ ಹೊರಬರಲು ಬಯಸುವುದಾಗಿ ನ್ಯಾಯಪೀಠಕ್ಕೆ ತಿಳಿಸಿದರು.

ವಕೀಲರ ಮನವಿಯನ್ನು ಪರಿಗಣಿಸಿದ ಹೈಕೋರ್ಟ್, ಪ್ರಕರಣದ ಮೆರಿಟ್ ಕುರಿತು ಯಾವುದೇ ವಿಚಾರಣೆ ನಡೆಸದೆ, ಮುಂದಿನ ವಿಚಾರಣೆಯನ್ನು ಜೂನ್ 23ಕ್ಕೆ ಮುಂದೂಡಿದೆ.

ಇನ್ನೊಂದೆಡೆ, ರೇಣುಕಸ್ವಾಮಿ ತಾಯಿ ರತ್ನಪ್ರಭಾ ತಮ್ಮ ಹಿಂದಿನ ಹೇಳಿಕೆಯಿಂದ ಹಿಂದೆ ಸರಿದಿರುವ ಹಿನ್ನೆಲೆಯಲ್ಲಿ ಅವರನ್ನು ಪಾಟಿ ಸವಾಲಿಗೆ ಒಳಪಡಿಸಲು ಅವಕಾಶ ನೀಡಬೇಕು ಎಂಬುದು ಪ್ರಾಸಿಕ್ಯೂಷನ್‌ನ ಪ್ರಮುಖ ಬೇಡಿಕೆಯಾಗಿದೆ.

TAGGED:#kannadanews #trendingnews #justice #latestnews #bangalorenews #viralnews #newsupdate #headlinenews#news #newsics
Share This Article
Facebook Twitter Copy Link Print
Previous Article ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮುಖ್ಯಶಿಕ್ಷಕ ಪ್ರಕರಣ: 5 ಶಿಕ್ಷಕರು ಸೇರಿದಂತೆ 10 ಮಂದಿಯ ವಿರುದ್ಧ ಎಫ್ಐಆರ್
Next Article ಚಿಕ್ಕಬಳ್ಳಾಪುರದಲ್ಲಿ ಬೆಚ್ಚಿಬೀಳಿಸಿದ ಘಟನೆ: 3 ತಿಂಗಳ ಗರ್ಭಿಣಿಯಾದ ಅಪ್ರಾಪ್ತ ಬಾಲಕಿ; ಪೋಕ್ಸೋ ಪ್ರಕರಣ ದಾಖಲು

Popular Posts

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read

Gold expensive again ಯುದ್ಧ ಅಂತ್ಯ ಹಿನ್ನೆಲೆ: ಮತ್ತೆ ದುಬಾರಿಯಾಗಲಿದೆ ಚಿನ್ನ! ರಿಸರ್ಚ್ ಸಂಸ್ಥೆ ಹೇಳಿದ್ದೇನು?

2 Min Read

ಪ್ರತಿದಿನ 2 ಲವಂಗ ತಿನ್ನಿ ಈ ಆರೋಗ್ಯ ಸಮಸ್ಯೆಯೇ ಬರಲ್ಲ

2 Min Read

You Might Also Like

Crime

“ಭಕ್ತಿ ಹೆಸರಿನಲ್ಲಿ ಭಯಾನಕ ಶೋಷಣೆ!”: ಮಹಿಳೆ ಮೇಲೆ ವರ್ಷಗಳ ಲೈಂಗಿಕ ಶೋಷಣೆ; ಮೂತ್ರ ಕುಡಿಯುವಂತೆ ಬಲವಂತ, ಸ್ವಘೋಷಿತ ‘ದೇವಮಾನವ’ ಸೇರಿ 8 ಮಂದಿ ಬಂಧನ

1 Min Read
Crime

ಚಿಕ್ಕಬಳ್ಳಾಪುರದಲ್ಲಿ ಬೆಚ್ಚಿಬೀಳಿಸಿದ ಘಟನೆ: 3 ತಿಂಗಳ ಗರ್ಭಿಣಿಯಾದ ಅಪ್ರಾಪ್ತ ಬಾಲಕಿ; ಪೋಕ್ಸೋ ಪ್ರಕರಣ ದಾಖಲು

1 Min Read
Crime

ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮುಖ್ಯಶಿಕ್ಷಕ ಪ್ರಕರಣ: 5 ಶಿಕ್ಷಕರು ಸೇರಿದಂತೆ 10 ಮಂದಿಯ ವಿರುದ್ಧ ಎಫ್ಐಆರ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?