Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದಶಕ ಕಳೆದರೂ ಸಿಗದ ರೇಷನ್ ಕಾರ್ಡ್; ಹಸಿವಿನಿಂದ ಕಣ್ಣೀರು ಇಡುತ್ತಿದ್ದಾರೆ ಆನೆ ದಿಂಬ ಹಾಡಿಯ ಆದಿವಾಸಿಗಳು!
ಕರ್ನಾಟಕಪ್ರಮುಖ

ದಶಕ ಕಳೆದರೂ ಸಿಗದ ರೇಷನ್ ಕಾರ್ಡ್; ಹಸಿವಿನಿಂದ ಕಣ್ಣೀರು ಇಡುತ್ತಿದ್ದಾರೆ ಆನೆ ದಿಂಬ ಹಾಡಿಯ ಆದಿವಾಸಿಗಳು!

Share
1 Min Read
SHARE

newsics.com/ನ್ಯೂಸಿಕ್ಸ್

ಕಾಡಿನಲ್ಲಿ ಬೇಟೆಯಾಡುತ್ತಾ, ಗೆಡ್ಡೆ ಗೆಣಸು ತಿಂದು ಸ್ವಚ್ಛಂದವಾಗಿ ಬದುಕುತ್ತಿದ್ದ ಆದಿವಾಸಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವುದಾಗಿ ಸರ್ಕಾರ ಭರವಸೆ ನೀಡಿತ್ತು. ಅದರಂತೆ ಚಾಮರಾಜನಗರ ಜಿಲ್ಲೆಯ  ಮಲೆ ಮಹದೇಶ್ವರ ಬೆಟ್ಟದ ಕೂಗಳತೆ ದೂರದಲ್ಲಿರುವ ಆನೆ ದಿಂಬ ಎಂಬ ಸ್ಥಳದಲ್ಲಿ ಅವರಿಗೆ ಆಶ್ರಯ ಕಲ್ಪಿಸಲಾಯಿತು.

ಆದರೆ, ಕಾಡಿನಿಂದ ನಾಡಿಗೆ ಬಂದ ಈ ಸೋಲಿಗ ಜನಾಂಗದ ಬದುಕು ಈಗ ಬೀದಿಗೆ ಬಿದ್ದಿದೆ. ದಶಕಗಳು ಕಳೆದರೂ ಇಲ್ಲಿನ ಹತ್ತಕ್ಕೂ ಹೆಚ್ಚು ಕುಟುಂಬಗಳಿಗೆ ಮೂಲಭೂತ ಸೌಕರ್ಯಗಳಾಗಲಿ, ಒಂದು ರೇಷನ್ ಕಾರ್ಡ್  ಆಗಲಿ ಸಿಕ್ಕಿಲ್ಲ. ಕೂಲಿ ಕೆಲಸ ಸಿಕ್ಕರೆ ಮಾತ್ರ ಇವರ ಮನೆಯಲ್ಲಿ ಒಲೆ ಉರಿಯುತ್ತದೆ. ಇಲ್ಲದಿದ್ದರೆ ಹಸಿವಿನಿಂದ ಕಣ್ಣೀರು ಇಡುವುದೇ ಇವರ ದಿನಚರಿಯಾಗಿದೆ.

ತಮಗೆ ಪಡಿತರ ಚೀಟಿ ನೀಡುವಂತೆ ಬಡ ಆದಿವಾಸಿಗಳು ಕಳೆದ 10 ವರ್ಷಗಳಿಂದ ಸರ್ಕಾರಿ ಕಚೇರಿಗಳಿಗೆ ಅಲೆಯುತ್ತಿದ್ದಾರೆ. ಅಧಿಕಾರಿಗಳ ಕೈಕಾಲು ಹಿಡಿದು ಬೇಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ. ಅರ್ಜಿ ಸಲ್ಲಿಸಿ ಇವರ ಚಪ್ಪಲಿ ಸವಿದಿದೆಯೇ ಹೊರತು, ಅಧಿಕಾರಿಗಳ ಕಲ್ಲೆದೆಯು ಕರಗಿಲ್ಲ. ಸೋಲಿಗ ಜನಾಂಗದವರೆಂದರೆ ಈ ಅಧಿಕಾರಿ ವರ್ಗಕ್ಕೆ ಯಾಕಿಷ್ಟು ನಿರ್ಲಕ್ಷ್ಯ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಅಧಿಕಾರಿಗಳ ಈ ಬೇಜವಾಬ್ದಾರಿತನ ಹಾಗೂ ಕಳ್ಳಾಟದ ಪರಿಣಾಮವಾಗಿ, ಇಂದಿಗೂ ಸಣ್ಣ ಗುಡಿಸಿಲುಗಳಲ್ಲಿ ವಾಸಿಸುತ್ತಿರುವ ಈ ಕುಟುಂಬಗಳು ಅನ್ನಕ್ಕಾಗಿ ಪರದಾಡುವಂತಾಗಿದೆ.

ಅನ್ನಭಾಗ್ಯ ಯೋಜನೆಯಿಂದ ವಂಚಿತರಾದ ಕಟ್ಟಕಡೆಯ ವರ್ಗ

ರಾಜ್ಯದಲ್ಲಿ ಯಾರೂ ಹಸಿವಿನಿಂದ ಬಳಲಬಾರದು ಎಂದು ಸರ್ಕಾರ ಮಹತ್ವಾಕಾಂಕ್ಷೆಯ ‘ಅನ್ನಭಾಗ್ಯ’ ಯೋಜನೆಯಡಿ ಉಚಿತವಾಗಿ ಅಕ್ಕಿ ವಿತರಣೆ ಮಾಡುತ್ತಿದೆ. ಸಮಾಜದ ಕಟ್ಟಕಡೆಯ ವರ್ಗಕ್ಕೂ ಈ ಸೌಲಭ್ಯ ತಲುಪಬೇಕು ಎಂಬುದು ಸರ್ಕಾರದ ಆಶಯ. ಆದರೆ, ಆನೆ ದಿಂಬ ಹಾಡಿಯ ಆದಿವಾಸಿಗಳಿಗೆ ರೇಷನ್ ಕಾರ್ಡ್ ಇಲ್ಲದ ಕಾರಣ, ಅವರು ಈ ಯೋಜನೆಯಿಂದ ಸಂಪೂರ್ಣವಾಗಿ ವಂಚಿತರಾಗಿದ್ದಾರೆ. ಹಸಿವು ಮುಕ್ತ ರಾಜ್ಯದ ಭರವಸೆಗಳು ಈ ಹಾಡಿಯ ಜನರ ಪಾಲಿಗೆ ಕೇವಲ ಕನಸಾಗಿಯೇ ಉಳಿದಿದೆ.

TAGGED:A decade onration cards not available; tribals of Ane Dimba Hadi are shedding tears of hunger!
Share This Article
Facebook Twitter Copy Link Print
Previous Article ವಿಧಾನಪರಿಷತ್‌ನಲ್ಲಿ ಅಡ್ಡಮತದಾನದ ಪರಿಣಾಮ: ಇನ್ನೊಂದು ಅವಧಿಗೆ ನಾನೇ ರಾಜ್ಯಾಧ್ಯಕ್ಷ ಎಂದುಕೊಂಡಿದ್ದ ವಿಜಯೇಂದ್ರಗೆ ಸಂಕಷ್ಟ
Next Article  tea lovers ಮುಂಬೈ, ಹೈದರಾಬಾದ್‌ನ್ನು ಹಿಂದಿಕ್ಕಿ ಭಾರತದ ‘ಚಹಾ’ ರಾಜಧಾನಿಯಾದ ಬೆಂಗಳೂರು

Popular Posts

ಗೃಹಲಕ್ಷ್ಮಿ ಗೋಲ್‌ಮಾಲ್: 19 ಸಾವಿರ ಫಲಾನುಭವಿಗಳಿಗೆ ಒಂದೇ ಖಾತೆ! ಕೋಟಿಗಟ್ಟಲೆ ಹಣ ಜಮಾ

2 Min Read

ಕಾಡಿದ ಖಿನ್ನತೆ: ಜೀವ ಕಳೆದುಕೊಂಡ ಯುವ ನಿರ್ದೇಶಕ ಮಂಜುನಾಥ್

1 Min Read

AI ಬಳಸಿ ಸ್ಪರ್ಧಿಗಳನ್ನೇ ಅಳಿಸಿದ ಅಭ್ಯರ್ಥಿ! ಸರ್ಕಾರಿ ಉದ್ಯೋಗಕ್ಕಾಗಿ RPSC ಪೋರ್ಟಲ್ ಹ್ಯಾಕ್

1 Min Read

‘ಈಥಾ’ ಟೀಸರ್ ರಿಲೀಸ್: ಲಾವಣಿ ದಂತಕಥೆ ವಿಠಾಬಾಯಿ ಪಾತ್ರದಲ್ಲಿ ಶ್ರದ್ಧಾ ಕಪೂರ್ ಮಿಂಚು!

1 Min Read

You Might Also Like

ವೈರಲ್ಪ್ರಮುಖ

ರಸ್ತೆಯಲ್ಲೇ ಬೆತ್ತಲಾದ ಯುವತಿ: ಕ್ಯಾಬ್ ಚಾಲಕನ ಮೇಲೆ ಹಲ್ಲೆ, ವೈರಲ್ ವಿಡಿಯೋ ನೋಡಿ

1 Min Read
Crimeಪ್ರಮುಖ

ಮದುವೆಗೆ ಎರಡು ದಿನ ಬಾಕಿ ಇರುವಾಗ ದುರಂತ: ವಧುವಿನ ತಂದೆ-ತಾಯಿ ಆತ್ಮಹತ್ಯೆ, ಕಿರುಕುಳ ಆರೋಪದಡಿ ವ್ಯಕ್ತಿ ಬಂಧನ

1 Min Read
ಪ್ರಮುಖಪ್ರಮುಖ

ಜುಲೈ 1ರಿಂದ ಬದಲಾಗಲಿವೆ 7 ಪ್ರಮುಖ ನಿಯಮಗಳು! LPG, ರೈಲ್ವೆ ಟಿಕೆಟ್‌ನಿಂದ ಆಧಾರ್‌ವರೆಗೆ ಹೊಸ ಅಪ್‌ಡೇಟ್‌

1 Min Read
filmಈ ದಿನಪ್ರಮುಖ

ಸೋಷಿಯಲ್ ಮೀಡಿಯಾ ಸುಳಿವಿನಿಂದ ಮತ್ತೆ ಸುದ್ದಿಯಾದ ವಿಜಯ್-ತ್ರಿಶಾ ಸಂಬಂಧ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?