ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ Darshan Thoogudeepa ತಮ್ಮ ಜಾಮೀನು ಹೋರಾಟಕ್ಕೆ ಹೊಸ ತಿರುವು ನೀಡಿದ್ದಾರೆ. ಸುಪ್ರೀಂ ಕೋರ್ಟ್ ವಿಧಿಸಿದ್ದ ಒಂದು ವರ್ಷದ ಗಡುವನ್ನು ಕಡಿಮೆ ಮಾಡುವಂತೆ ಮನವಿ ಸಲ್ಲಿಸಿರುವ ದರ್ಶನ್, ಮತ್ತೊಮ್ಮೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಕಳೆದ ಮೇ 15ರಂದು ಸುಪ್ರೀಂ ಕೋರ್ಟ್, ಒಂದು ವರ್ಷದ ಬಳಿಕ ಜಾಮೀನು ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದಲ್ಲದೆ, ಆ ಅವಧಿಯಲ್ಲಿ 60 ಸಾಕ್ಷಿಗಳ ವಿಚಾರಣೆ ಪೂರ್ಣಗೊಳಿಸುವಂತೆ ಟ್ರಯಲ್ ಕೋರ್ಟ್ಗೆ ಸೂಚಿಸಿತ್ತು. ಇದೀಗ ದರ್ಶನ್ ತಮ್ಮ ಹೊಸ ಅರ್ಜಿಯಲ್ಲಿ ಒಂದು ವರ್ಷದ ಗಡುವು ಕಡಿಮೆ ಮಾಡಬೇಕು ಹಾಗೂ ಸಾಕ್ಷಿಗಳ ಸಂಖ್ಯೆಯನ್ನೂ ಮರುಪರಿಶೀಲಿಸಬೇಕು ಎಂದು ಕೋರಿದ್ದಾರೆ.
ಇದರ ನಡುವೆ, ದರ್ಶನ್ ಪರ ವಾದಿಸುತ್ತಿದ್ದ ವಕೀಲ ಸುನೀಲ್ ಕುಮಾರ್ ಪ್ರಕರಣದಿಂದ
ಹಿಂದೆ ಸರಿದಿದ್ದು, ಹಿರಿಯ ವಕೀಲ ಹಶ್ಮತ್ ಪಾಷಾ ದರ್ಶನ್ ಪರ ವಕಾಲತ್ತು ವಹಿಸಿರುವುದು ಗಮನ ಸೆಳೆದಿದೆ.
ಈ ಬೆಳವಣಿಗೆಗಳಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕಾನೂನು ಹೋರಾಟ ಮತ್ತಷ್ಟು ಕುತೂಹಲ ಕೆರಳಿಸಿದ್ದು, ದರ್ಶನ್ ಸಲ್ಲಿಸಿರುವ ಹೊಸ ಅರ್ಜಿಯ ವಿಚಾರಣೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ.