Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > School time change ಶನಿವಾರದ ಶಾಲಾ ಸಮಯ ಬದಲು: ಇಂದಿನಿಂದಲೇ ಜಾರಿ
ಕರ್ನಾಟಕಪ್ರಮುಖ

School time change ಶನಿವಾರದ ಶಾಲಾ ಸಮಯ ಬದಲು: ಇಂದಿನಿಂದಲೇ ಜಾರಿ

Share
1 Min Read
SHARE

newsics.com| ನ್ಯೂಸಿಕ್ಸ್

ಶಿಕ್ಷಕರು ಮತ್ತು ಮಕ್ಕಳ ಅನುಕೂಲಕ್ಕಾಗಿ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಶನಿವಾರದ ದಿನಕ್ಕೆ ಮಾತ್ರ ಅನ್ವಯಿಸುವಂತೆ ಶಾಲಾ ಸಮಯದ ಬದಲಾವಣೆ ಮಾಡಲಾಗಿದ್ದು, ಇಂದಿನಿಂದಲೇ ಜಾರಿಗೊಳ್ಳಲಿದೆ.

ಬೆಳಗ್ಗೆ 8.30ರಿಂದ ಶಾಲೆ ಆರಂಭವಾಗಿ ಮಧ್ಯಾಹ್ನ 12. 30ರವರೆಗೆ ತರಗತಿ ನಡೆಸಲು ಶಿಕ್ಷಣ ಇಲಾಖೆ ಏಕರೂಪದ ಸಮಯ ನಿಗದಿಪಡಿಸಿದೆ. ಇದು ಜೂ.27ರ ಶನಿವಾರದಿಂದಲೇ ಜಾರಿಯಾಗುತ್ತದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಸ್ತುತ ರಾಜ್ಯಾದ್ಯಂತ ಪ್ರಾದೇಶಿಕವಾರು ಬೇರೆ ಬೇರೆ ಶಾಲಾ ಸಮಯವನ್ನು ಪಾಲಿಸಲಾಗುತ್ತಿದೆ. ಕೆಲವೆಡೆ ಬೆಳಗ್ಗೆ 7.30ರಿಂದ 11.30, ಇನ್ನು ಕೆಲವೆಡೆ ಬೆಳಗ್ಗೆ 8ರಿಂದ 12 ಗಂಟೆ ಹೀಗೆ ಬೇರೆ ಬೇರೆ ಸಮಯ ಪಾಲನೆ ಆಗುತ್ತಿದೆ. ಇದರ ಬದಲು ವಿದ್ಯಾರ್ಥಿ ಹಾಗೂ ಶಿಕ್ಷಕ ಸ್ನೇಹಿಯಾಗಿ ರಾಜ್ಯಾದ್ಯಂತ ಒಂದೇ ಸಮಯ ನಿಗದಿಪಡಿಸಿ ಅದನ್ನು ಅನುಸರಿಸಲು ಸೂಚಿಸಲಾಗಿದೆ.

ರಾಜ್ಯ ಸರ್ಕಾರ ದೇಶದಲ್ಲಿಯೇ ಮೊದಲ ಬಾರಿಗೆ ಸರ್ಕಾರಿ ನೌಕರರಿಗೆ ಕರ್ತವ್ಯ ಮೊಬೈಲ್‌ ಅಪ್ಲಿಕೇಷನ್ ಮೂಲಕ ಎಐ ಆಧಾರಿತ ಡಿಜಿಟಲ್‌ ಹಾಜರಾತಿ ಜಾರಿಗೊಳಿಸಿದೆ. ಈವರೆಗೆ ಶಿಕ್ಷಕರ ಹಾಜರಾತಿ ಪುಸ್ತಕದಲ್ಲಿ ಅವರ ಹಾಜರಿ ದಾಖಲಾಗುತ್ತಿತ್ತು. ಶನಿವಾರ ಬಸ್‌ ಸಿಗದಿರುವುದು ಸೇರಿದಂತೆ ಬೇರೆ ಕಾರಣಗಳಿಂದ ಶಿಕ್ಷಕರು ತಡವಾಗಿ ಬಂದರೂ ಸಮಸ್ಯೆ ಆಗುತ್ತಿರಲಿಲ್ಲ. ಆದರೆ, ಈಗ ಒಂದು ನಿಮಿಷ ತಡವಾದರೂ ಗೈರು ಹಾಜರಾತಿ ಆಗುತ್ತದೆ. ಗ್ರಾಮೀಣ ಭಾಗದಲ್ಲಿ ಸರ್ಕಾರಿ ಸಾರಿಗೆಯನ್ನೇ ನಂಬಿರುವ ವಿದ್ಯಾರ್ಥಿಗಳಿಗೂ ತೊಂದರೆಯಾಗುತ್ತಿದೆ. ಹಾಗಾಗಿ ಶನಿವಾರ ಶಾಲಾ ಸಮಯ ಬದಲಾವಣೆ ಮಾಡಬೇಕೆಂಬ ಅಭಿಪ್ರಾಯ ಶಿಕ್ಷಕರ ವಲಯದಲ್ಲಿ ಕೇಳಿಬಂದಿತ್ತು. ಹಾಗಾಗಿ ಸಮಯ ತಿದ್ದುಪಡಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Richest CEO Shankh ಈ‌ ವ್ಯಕ್ತಿಯ ದಿನ‌ದ ಸಂಬಳ‌ 21‌ ಕೋಟಿ! ಎಲ್ಲೆಲ್ಲೂ ಈಗ ಇವರದೇ ಚರ್ಚೆ… ಯಾರಿವರು?

Women living alone ಮದುವೆ ಬಳಿಕವೂ ಒಂಟಿ ಜೀವನ ನಡೆಸುವ ಮಹಿಳೆಯರ ಪ್ರಮಾಣ ಗಣನೀಯ ಹೆಚ್ಚಳ! ಟಾಪ್ 3ನಲ್ಲಿ‌ ಕರ್ನಾಟಕ

Ayodhya scam ರಾಮನಿಗೆ ಭಕ್ತರು ಅರ್ಪಿಸಿದ ಚಿನ್ನಾಭರಣಗಳನ್ನೂ ದೋಚಿದ ಖದೀಮರು! ಮಾಸ್ಟರ್‌ಮೈಂಡ್ ಯಾರು?

 

TAGGED:#schooltimings #saturday #government #news #newsics #karnataka
Share This Article
Facebook Twitter Copy Link Print
Previous Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 27-06-2026, ಶನಿವಾರ, ನೀವಿಂದು ಅದೃಷ್ಟವಂತರಾ?
Next Article War atmosphere ಇರಾನ್‌ ದಾಳಿಗೆ ಅಮೆರಿಕ ಪ್ರತಿದಾಳಿ: ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧ ವಾತಾವರಣ

Popular Posts

High court order| ಖಾತೆಯಲ್ಲಿ ಕನಿಷ್ಠ ಠೇವಣಿ ಕಾಯ್ದಿರಿಸದ ಗ್ರಾಹಕರಿಗೆ ಬ್ಯಾಂಕ್​ ವಿಧಿಸುವ ದಂಡಕ್ಕೆ ಜಿಎಸ್​ಟಿ ಅನ್ವಯವಾಗುವುದಿಲ್ಲ :​ ಹೈಕೋರ್ಟ್

2 Min Read

Adventure trip SSLC ಬಾಲಕಿ ಜತೆ 2 PUC ಹುಡುಗರು ಎಸ್ಕೇಪ್! ಕಾಡಿನ ಮಧ್ಯೆ ಟೆಂಟ್ ಹಾಕಿ ಮಾಡಿದ್ದೇನು?

3 Min Read

Danger swimming pool ಡ್ಯಾನ್ಸ್ ಮಾಡುತ್ತಾ ರೆಸಾರ್ಟ್ ಈಜುಕೊಳಕ್ಕೆ ಧುಮುಕಿದ ಯುವಕ ಮೃತಪಟ್ಟಿದ್ದು ಹೇಗೆ? ವಿಡಿಯೋ ನೋಡಿ

1 Min Read

Ayodhya scam ಅಯೋಧ್ಯೆ ದೇಣಿಗೆ ಹಣ ಲೂಟಿಗೆ ಚಂಪತ್‌ರಾಯ್, ಮಿಶ್ರಾ ಸಹಕಾರ! ಎಸ್ಐಟಿ ವರದಿ ಹೇಳ್ತಿರೋದೇನು?

2 Min Read

You Might Also Like

ಕರ್ನಾಟಕಪ್ರಮುಖ

Linganamakki Dam ಲಿಂಗನಮಕ್ಕಿ ಜಲಾಶಯದಲ್ಲಿ ನೀರಿಲ್ಲ: ವಿದ್ಯುತ್ ಉತ್ಪಾದನೆ ಸ್ಥಗಿತ

1 Min Read
filmಕರ್ನಾಟಕಪ್ರಮುಖ

Kichcha Sudeep: 6.5 ಕೋಟಿ ರೂ. ಬೆಲೆಯ ಕ್ಯಾರವನ್ ಖರೀದಿಸಿದ ಕಿಚ್ಚ ಸುದೀಪ್

1 Min Read
ಕರ್ನಾಟಕಪ್ರಮುಖ

Lover kidnapped ಪ್ರೇಯಸಿ ಕಿಡ್ನ್ಯಾಪ್ ಮಾಡಿದ್ದಾಗಲೇ ಜಗಳ! ಚಾಕು ಇರಿತ, ಕಾರು ಸ್ಫೋಟಿಸಿ ಪ್ರಿಯಕರ ಆತ್ಮ*ಹ*ತ್ಯೆ, ಬೆಂಗಳೂರು ಯುವತಿ ಪಾರು

1 Min Read
ಕರ್ನಾಟಕಪ್ರಮುಖಮನರಂಜನೆ

Heart attack ಚಿತ್ರ ನಿರ್ಮಾಪಕ‌ ಬಾ‌ ಮಾ ಹರೀಶ್ ಮಗ ಉಲ್ಲಾಸ್ ಗೌಡ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?