newsics.com
ಬೆಂಗಳೂರು: ಪುತ್ರನೊಬ್ಬ ಬುದ್ಧಿ ಹೇಳಿದ್ದಕ್ಕೆ ಮಲಗಿದಲ್ಲೇ ಹೆತ್ತ ತಾಯಿಯನ್ನು ಕೊಂದಿರುವ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ಜರುಗಿದೆ.
ಶಾರದಮ್ಮ ಅಗಡಿ (85) ಕೊಲೆಯಾದ ತಾಯಿಯಾಗಿದ್ದು, ಪುತ್ರ ಸಿದ್ಧಲಿಂಗ ಅಗಡಿ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.
ಪಕ್ಕದ ಮನೆಯವರ ಜತೆ ಸಿದ್ಧಲಿಂಗ ಅಗಡಿ ಜಗಳ ಮಾಡಿಕೊಂಡಿದ್ದ. ಈ ವೇಳೆ ನನ್ನ ಮಗನ ತಲೆ ಸರಿಯಿಲ್ಲ ಬಿಟ್ಟು ಬಿಡಿ ಎಂದು ತಾಯಿ ಬೇಡಿಕೊಂಡಿದ್ದರು. ಇನ್ನು ತಾಯಿಯನ್ನು ಕೊಂದು ಸಹೋದರಿಯರಿಗೆ ಫೋನ್ ಮಾಡಿದ ಪಾಪಿ ಪುತ್ರ, ತಾಯಿ ಸಾವನ್ನಪ್ಪಿದ್ದಾಳೆ ಎಂದು ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ.