newsics.com| ನ್ಯೂಸಿಕ್ಸ್
ನ್ಯಾಯಾಲಯದ ಅನುಮತಿಯ ಮೇರೆಗೆ ಪೊಲೀಸರು ಈ ಪ್ರಕರಣದ ಮುಖ್ಯ ಆರೋಪಿ ಅವಿನಾಶ್ ಶುಕ್ಲಾನನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಆತ ಕಳ್ಳತನದ ಇಂಚಿಂಚೂ ಮಾಹಿತಿಯನ್ನು ಬಿಚ್ಚಿಟ್ಟಿದ್ದಾನೆ.
ಟ್ರಸ್ಟಿಗಳ ಹೆಸರನ್ನೂ ಉಲ್ಲೇಖಿಸಿದ ಆರೋಪಿ!
ವಿಚಾರಣೆಯ ವೇಳೆ ಅವಿನಾಶ್ ಶುಕ್ಲಾ, ಮಂದಿರದ ಟ್ರಸ್ಟಿ ಅನಿಲ್ ಮಿಶ್ರಾ ಅವರ ಹೆಸರನ್ನೂ ಪ್ರಸ್ತಾಪಿಸಿದ್ದು, ಕಾಣಿಕೆ ಹಣ ಎಣಿಕೆ ಪ್ರಕ್ರಿಯೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸುತ್ತಿದ್ದರು ಎಂದು ಹೇಳಿದ್ದಾನೆ. ಹಣ ಎಣಿಕೆ ಕೊಠಡಿಯ ಒಂದು ಕೀ ತಿನ್ನು ಯಾದವ್ ಎಂಬುವವರ ಬಳಿ ಇದ್ದರೆ, ಮತ್ತೊಂದು ಕೀ ಬ್ಯಾಂಕ್ ಸಿಬ್ಬಂದಿ ಬಳಿ ಇರುತ್ತಿತ್ತು. ಕಾಣಿಕೆ ಹಣ ಲೂಟಿ ಮಾಡುವಾಗ ಒಬ್ಬ ವ್ಯಕ್ತಿ ಹಣವನ್ನು ತೆಗೆದುಕೊಳ್ಳುತ್ತಿದ್ದರೆ, ಉಳಿದ ಆರೋಪಿಗಳು ಆತನ ಸುತ್ತ ನಿಂತು ಯಾರಿಗೂ ಅನುಮಾನ ಬಾರದಂತೆ ಕಾವಲು ಕಾಯುತ್ತಿದ್ದರು. ಸಿಸಿಟಿವಿ ಕ್ಯಾಮೆರಾಗಳು ಎಲ್ಲೆಲ್ಲಿವೆ ಎಂಬ ಸಂಪೂರ್ಣ ಮಾಹಿತಿ ಇದ್ದಿದ್ದರಿಂದ ಆರೋಪಿಗಳು ಕ್ಯಾಮೆರಾ ಕಣ್ಣಿಗೆ ಬೀಳದಂತೆ ಸ್ಕೆಚ್ ಹಾಕಿದ್ದರು.
ಕದ್ದ ಕಾಣಿಕೆ ಹಣದಿಂದ ಜಮೀನು, ಐಷಾರಾಮಿ ಮನೆ ಖರೀದಿ!
ದೇವರ ಹಣವನ್ನು ಕಳ್ಳತನ ಮಾಡಿ ಆರೋಪಿಗಳು ಕೋಟ್ಯಂತರ ರೂಪಾಯಿ ಬೆಲೆಬಾಳುವ ಆಸ್ತಿ ಮಾಡಿದ್ದಾರೆ. ಕದ್ದ ಹಣದಿಂದ ದೊಡ್ಡ ದೊಡ್ಡ ಭೂಮಿ ಹಾಗೂ ಮನೆಗಳನ್ನು ಖರೀದಿ ಮಾಡಿರುವುದಾಗಿ ಅವಿನಾಶ್ ಒಪ್ಪಿಕೊಂಡಿದ್ದಾನೆ. ಹೀಗಾಗಿ ಪೊಲೀಸರು ಈಗ ಆರೋಪಿಗಳ ಆಸ್ತಿ ಹಾಗೂ ಬ್ಯಾಂಕ್ ವಹಿವಾಟುಗಳ ಇತಿಹಾಸವನ್ನು ಜಾಲಾಡುತ್ತಿದ್ದಾರೆ.
ಎಫ್ಐಆರ್ ದಾಖಲಾಗುವ ಮುನ್ನವೇ 58 ಲಕ್ಷ ವಶ!
ದೇಗುಲದ ಹುಂಡಿ ಹಣದ ದುರ್ಬಳಕೆ ತಡೆಯಲು ಉತ್ತರ ಪ್ರದೇಶ ಸರ್ಕಾರ ಜೂನ್ 13 ರಂದು ವಿಶೇಷ ತನಿಖಾ ತಂಡವನ್ನು (SIT) ರಚಿಸಿತ್ತು. ಆದರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕೃತ ಎಫ್ಐಆರ್ ದಾಖಲಾಗುವ ಮೊದಲೇ, ಜೂನ್ 5 ರಂದೇ ಅವಿನಾಶ್ ಶುಕ್ಲಾ ಮನೆಯಿಂದ 58 ಲಕ್ಷ ರೂಪಾಯಿ ನಗದನ್ನು ಟ್ರಸ್ಟ್ ವಶಪಡಿಸಿಕೊಂಡಿತ್ತು ಎಂಬ ಇಂಟರೆಸ್ಟಿಂಗ್ ಮಾಹಿತಿ ಬೆಳಕಿಗೆ ಬಂದಿದೆ. ಕಾನೂನು ಪ್ರಕ್ರಿಯೆ ಆರಂಭವಾಗುವ ಮುನ್ನವೇ ಹಣ ರಿಕವರಿ ಮಾಡುವ ಪ್ರಯತ್ನ ನಡೆದಿತ್ತು ಎಂದು ಮಾಧ್ಯಮಗಳು ವರದಿ ಮಾಡಿವೆ.
Gold Price ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ! ಇಲ್ಲಿದೆ ಇವತ್ತಿನ ಚಿನ್ನದ ಬೆಲೆ