Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > SHOCKING| ಪತಿಯನ್ನು ಕೊಂದು ಮನೆಯೊಳಗಿನ ಬಾತ್‌ರೂಂ ನೆಲದಡಿ ಹೂತ ಪತ್ನಿ – 45 ದಿನಗಳ ಬಳಿಕ ಪ್ರಕರಣ ಬೆಳಕಿಗೆ
Crimeದೇಶಪ್ರಮುಖ

SHOCKING| ಪತಿಯನ್ನು ಕೊಂದು ಮನೆಯೊಳಗಿನ ಬಾತ್‌ರೂಂ ನೆಲದಡಿ ಹೂತ ಪತ್ನಿ – 45 ದಿನಗಳ ಬಳಿಕ ಪ್ರಕರಣ ಬೆಳಕಿಗೆ

Share
2 Min Read
SHARE

newsics.com| ನ್ಯೂಸಿಕ್ಸ್

ಉತ್ತರ ಪ್ರದೇಶದ ಆಗ್ರಾದಲ್ಲಿ ಪತಿಯನ್ನು ಕೊಲೆ ಮಾಡಿ, ಮನೆಯ ಬಾತ್‌ರೂಂ ನೆಲದಡಿ ಶವವನ್ನು ಹೂತು ಮುಚ್ಚಿಟ್ಟಿದ್ದ ಆರೋಪದ ಮೇಲೆ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಮೃತರನ್ನು ಸುರೇಂದ್ರ ಶರ್ಮಾ ಎಂದು ಗುರುತಿಸಲಾಗಿದ್ದು, ಅವರು ಕಳೆದ ಸುಮಾರು 45 ದಿನಗಳಿಂದ ನಾಪತ್ತೆಯಾಗಿದ್ದರು. ಹೊಸ ಸುಳಿವುಗಳ ಆಧಾರದ ಮೇಲೆ ಪೊಲೀಸರು ಮನೆಯ ಬಾತ್‌ರೂಂ ನೆಲವನ್ನು ಅಗೆದು ನೋಡಿದಾಗ, ಸಿಮೆಂಟ್ ಮತ್ತು ಪ್ಲಾಸ್ಟರ್ ಪದರದ ಕೆಳಗೆ ಹೂತಿದ್ದ ಶವ ಪತ್ತೆಯಾಗಿದೆ ಎಂದು ವರದಿಯಾಗಿದೆ.

ಈ ಘಟನೆ ಆಗ್ರಾದ ಸಿಕಂದ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ದಹತೋರಾ ಪ್ರದೇಶದಲ್ಲಿ ನಡೆದಿದೆ. ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.ಸುರೇಂದ್ರ ಶರ್ಮಾ ಅವರು ಪತ್ನಿ ರೂಬಿ ಹಾಗೂ ಇಬ್ಬರು ಪುತ್ರಿಯರೊಂದಿಗೆ ವಾಸಿಸುತ್ತಿದ್ದರು. ಅವರು ಕಾಣೆಯಾಗಿದ್ದ ಹಿನ್ನೆಲೆಯಲ್ಲಿ ಮೇ 26ರಂದು ಸಿಕಂದ್ರಾ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ದಂಪತಿಗೆ ಸುಮಾರು 16 ವರ್ಷಗಳ ಹಿಂದೆ ವಿವಾಹವಾಗಿತ್ತು. ಘಟನೆ ನಡೆದ ದಿನ ರೂಬಿ ತನ್ನ ಇಬ್ಬರು ಪುತ್ರಿಯರನ್ನು ಪತಿಯ ಅಣ್ಣನ ಮನೆಗೆ ಕಳುಹಿಸಿದ್ದಳು. ಬಳಿಕ ಪತಿಗೆ ನಿದ್ರೆ ಮಾತ್ರೆ ಬೆರೆಸಿದ ಪಾಯಸ ನೀಡಿದ್ದಾಳೆ ಎನ್ನಲಾಗಿದೆ. ಸುರೇಂದ್ರ ಪ್ರಜ್ಞೆ ತಪ್ಪಿದ ನಂತರ ಕುತ್ತಿಗೆ ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಮರುದಿನ ಬೆಳಿಗ್ಗೆ ಬಾತ್‌ರೂಂನಲ್ಲಿ ಗುಂಡಿ ತೋಡಿ ಶವವನ್ನು ಹೂತು, ಅದರ ಮೇಲೆ ಸಿಮೆಂಟ್ ಹಾಕಿ ನೆಲವನ್ನು ಮುಚ್ಚಿದ್ದಳು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಪತಿಯ ನಾಪತ್ತೆ ಬಗ್ಗೆ ಅನುಮಾನ ಬಾರದಂತೆ ಮಾಡಲು ರೂಬಿ ಸ್ವತಃ ಹುಡುಕಾಟದಲ್ಲೂ ಭಾಗಿಯಾಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ನೆರೆಹೊರೆಯವರ ಮುಂದೆ ಪತಿ ಕಾಣೆಯಾಗಿದ್ದಕ್ಕೆ ಅಳುತ್ತಾ ದುಃಖ ವ್ಯಕ್ತಪಡಿಸುತ್ತಿದ್ದಳು ಎನ್ನಲಾಗಿದೆ.ಆದರೆ, ಆಕೆಯ ಹೇಳಿಕೆಗಳಲ್ಲಿ ಕಂಡುಬಂದ ವ್ಯತ್ಯಾಸಗಳಿಂದ ಮೃತನ ಸಹೋದರರಿಗೆ ಅನುಮಾನ ಮೂಡಿದ್ದು, ಅವರು ಪೊಲೀಸರಿಗೆ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿದ್ದರು.

ಪೊಲೀಸರ ವಿಚಾರಣೆ ವೇಳೆ ರೂಬಿ ಪತಿಯನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡು, ಶವವನ್ನು ಹೂತಿದ್ದ ಸ್ಥಳವನ್ನೂ ತೋರಿಸಿದ್ದಾಳೆ ಎಂದು ವರದಿಯಾಗಿದೆ. ನಂತರ ಪೊಲೀಸರು ಬಾತ್‌ರೂಂ ನೆಲ ಅಗೆದು ಶವವನ್ನು ಹೊರತೆಗೆದಿದ್ದಾರೆ.

ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಸಾವಿಗೆ ನಿಖರ ಕಾರಣವೇನು ಎಂಬುದು ವರದಿಯ ಬಳಿಕ ಸ್ಪಷ್ಟವಾಗಲಿದೆ. ಜೊತೆಗೆ, ಈ ಕೊಲೆ ಹಾಗೂ ಶವವನ್ನು ಹೂಳುವ ಕಾರ್ಯದಲ್ಲಿ ಮತ್ತಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

Empire Proposal: 1500 ಅಡಿ ಎತ್ತರದಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ಜೋಡಿ ಅರೆಸ್ಟ್

Share This Article
Facebook Twitter Copy Link Print
Previous Article Iran ಮಾಜಿ ಸುಪ್ರೀಂ ಲೀಡರ್ ಖಮೇನಿ ಮಹಾ ಅಂತ್ಯಕ್ರಿಯೆ : 14 ತಿಂಗಳ ಮೊಮ್ಮಗಳ ಶವಪೆಟ್ಟಿಗೆ ನೋಡಿ ಕಣ್ಣೀರಿಟ್ಟ ಇರಾನ್ ನಾಗರಿಕರು!
Next Article Mass loss of life ಜ್ಯುವೆಲರಿ ಮಳಿಗೆ ಮಾಲೀಕನಿಗೆ ಆರ್ಥಿಕ ಸಂಕಷ್ಟ: ಮೂವರ ಸಾಮೂಹಿಕ ಆತ್ಮ*ಹ*ತ್ಯೆ

Popular Posts

Ramacharitamanasa ರಾಮಮಂದಿರದಲ್ಲಿದ್ದ 5 ಕೋಟಿ ಮೌಲ್ಯದ ಚಿನ್ನಲೇಪಿತ ರಾಮಚರಿತಮಾನಸ ಗ್ರಂಥ ಸುರಕ್ಷಿತವಾಗಿದ್ಯಾ? ದಾನಿಯ ಆತಂಕ

1 Min Read

Great Green Wall ಆಫ್ರಿಕಾದಲ್ಲಿ ಜಗತ್ತಿನ ಅತಿ ದೊಡ್ಡ ‘ಹಸಿರು ಮಹಾಗೋಡೆ’! ಉತ್ರರ ಕರ್ನಾಟಕದಲ್ಲಿ ಯಾವಾಗ?

2 Min Read

Student robs woman ಆನ್‌ಲೈನ್ ಗೇಮ್ ಗೀಳು: ಮಹಿಳೆಯನ್ನು ಲೂಟಿ ಮಾಡಿ ಬಾವಿಗೆ ತಳ್ಳಿದ ವಿದ್ಯಾರ್ಥಿ, 21 ಗಂಟೆ ಬಾವಿಯಲ್ಲಿದ್ದು ಬದುಕುಳಿದ ಮಹಿಳೆ!

2 Min Read

Abhimanyu’s tooth is broken! ಅಭಿಮನ್ಯುವಿಗೆ ದಂತಭಗ್ನ! ಈ ಬಾರಿಯೂ ಅಂಬಾರಿ ಹೊರಲಿದ್ದಾನಾ?

1 Min Read

You Might Also Like

ದೇಶಪ್ರಮುಖ

Ketan grandfather dies ಕೇತನ್ ಸಾವಿನ ಚಿಂತೆ, ಹೃದಯಾಘಾತದಿಂದ ತಾತ ದೇವಿಚಂದ್ ಸಾವು!

2 Min Read
ಕರ್ನಾಟಕದೇಶಪ್ರಮುಖ

Gold cash plan ಮನೇಲಿರೋ ಚಿನ್ನದಿಂದಲೂ ಸಿಗಲಿದೆ‌ ಆದಾಯ! ಏನಿದು‌ ಕೇಂದ್ರ ಸರ್ಕಾರದ ಹೊಸ ಯೋಜನೆ? ಈ‌ ಸುದ್ದಿ ಓದಿ

3 Min Read
ಪ್ರಮುಖದೇಶ

Bollywood ಬೆಂಗಳೂರು ಬೆಡಗಿ ಜೊತೆ ಸಪ್ತಪದಿ ತುಳಿಯಲಿದ್ದಾರೆ ‘ಮಿಸ್ಟರ್ ಪರ್ಫೆಕ್ಟ್’ ಅಮೀರ್ ಖಾನ್

2 Min Read
ಪ್ರಮುಖCrimeಕರ್ನಾಟಕ

Crime Case ಮೂರು ಹಸುಗಳ ಮೇಲೆ ಕತ್ತಿ ಇರಿತದ ವದಂತಿ, ಅಸಲಿ ಸತ್ಯ ಬಿಚ್ಚಿಟ್ಟ ಪೊಲೀಸ್ ವರಿಷ್ಠಾಧಿಕಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?