Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Road Mishap ಭೀಕರ ಅಪಘಾತ: ಲಾರಿಗೆ ಡಿಕ್ಕಿ ಹೊಡೆದ ಬಸ್, ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾ*ವು
ಪ್ರಮುಖCrimeಕರ್ನಾಟಕ

Road Mishap ಭೀಕರ ಅಪಘಾತ: ಲಾರಿಗೆ ಡಿಕ್ಕಿ ಹೊಡೆದ ಬಸ್, ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾ*ವು

Share
1 Min Read
SHARE

newsics.com | ನ್ಯೂಸಿಕ್ಸ್

ಚಿಕ್ಕಬಳ್ಳಾಪುರ: ಬೆಂಗಳೂರು – ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ-44 ರ ದೊಡ್ಡಪೈಲಗುರ್ಕಿ ಗಡಿ ಬಳಿ ಇಂದು ಮುಂಜಾನೆ ರಸ್ತೆ ಅಪಘಾತ ಸಂಭವಿಸಿದೆ. ಆಂಧ್ರಪ್ರದೇಶದ ಕರ್ನೂಲಿನಿಂದ ಬೆಂಗಳೂರಿನ ಕಡೆಗೆ ಬರುತ್ತಿದ್ದ ಆಂಧ್ರ ರಸ್ತೆ ಸಾರಿಗೆ ಸಂಸ್ಥೆಯ (APSRTC) ಬಸ್, ಮುಂದೆ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಭೀಕರವಾಗಿ ಡಿಕ್ಕಿ ಹೊಡೆದಿದೆ.

ಸ್ಥಳದಲ್ಲೇ ಇಬ್ಬರು ದುರ್ಮರಣ

ಬಸ್‌ನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಘಟನೆಯಲ್ಲಿ ಬಸ್ ಚಾಲಕ, ಆಂಧ್ರ ಮೂಲದ ಲಕ್ಷ್ಮಣ್ (52) ಹಾಗೂ ಬಸ್‌ನಲ್ಲಿದ್ದ ಪ್ರಯಾಣಿಕ, ಬೆಂಗಳೂರಿನ ಕಲ್ಯಾಣ ನಗರದ ನಿವಾಸಿ ಉಮಾಕಾಂತ್ ರಾವ್ (77) ಅವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಬಸ್‌ನಲ್ಲಿದ್ದ ಇನ್ನು ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಅಪಘಾತದ ರಭಸಕ್ಕೆ ಚಾಲಕ ಲಕ್ಷ್ಮಣ್ ಅವರು ಸೀಟಿನಲ್ಲೇ ಸಿಲುಕಿ ಒದ್ದಾಡಿ ಪ್ರಾಣಬಿಟ್ಟಿದ್ದರು. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ, ಕ್ರೇನ್ ಮೂಲಕ ನಜ್ಜುಗುಜ್ಜಾಗಿದ್ದ ಬಸ್‌ನ ಮುಂಭಾಗವನ್ನು ಕತ್ತರಿಸಿ ಚಾಲಕನ ಮೃತದೇಹವನ್ನು ಹೊರತೆಗೆದರು. ಇನ್ನು ವೃದ್ಧ ಪ್ರಯಾಣಿಕ ಉಮಾಕಾಂತ್ ಅವರ ಶವವನ್ನು ಬಸ್‌ನ ಕಿಟಕಿ ಗಾಜನ್ನು ಒಡೆದು ಹೊರತೆಗೆಯಲಾಯಿತು.

ಸ್ಥಳಕ್ಕೆ ಪೇರೆಸಂದ್ರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆದ್ದಾರಿಯಲ್ಲಿ ಉಂಟಾಗಿದ್ದ ಟ್ರಾಫಿಕ್ ಜಾಮ್ ನಿಯಂತ್ರಿಸಲು ಅಪಘಾತಕ್ಕೀಡಾಗಿದ್ದ ಬಸ್ ಹಾಗೂ ಲಾರಿಯನ್ನು ಕ್ರೇನ್ ಬಳಸಿ ಪಕ್ಕಕ್ಕೆ ಸರಿಸಲಾಗಿದ್ದು, ಸದ್ಯ ವಾಹನ ಸಂಚಾರವನ್ನು ಸುಗಮಗೊಳಿಸಲಾಗಿದೆ. ಈ ಕುರಿತು ಪೇರೆಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Rain alert ಮುಂದಿನ 3 ದಿನ ಭಾರಿ ಮಳೆಯ ಮುನ್ಸೂಚನೆ: ಉತ್ತರ ಕನ್ನಡ, ಉಡುಪಿಯಲ್ಲಿ ರೆಡ್ ಅಲರ್ಟ್ ಘೋಷಣೆ

TAGGED:#Bangalore #Road mishap #dead #Andhra Pradesh #driver
Share This Article
Facebook Twitter Copy Link Print
Previous Article Rain alert ಮುಂದಿನ 3 ದಿನ ಭಾರಿ ಮಳೆಯ ಮುನ್ಸೂಚನೆ: ಉತ್ತರ ಕನ್ನಡ, ಉಡುಪಿಯಲ್ಲಿ ರೆಡ್ ಅಲರ್ಟ್ ಘೋಷಣೆ
Next Article Automobile ಹೀರೋ, ಹೋಂಡಾ ಕಂಪನಿಗಳನ್ನು ಹಿಂದಿಕ್ಕಿ ಜಾಗತಿಕ ರೇಸ್‌ನಲ್ಲಿ ನಂ.1 ಪಟ್ಟಕ್ಕೇರಿದ ‘ಟಿವಿಎಸ್ ಮೋಟಾರ್ಸ್’

Popular Posts

Grihajyoti scheme ಗೃಹಜ್ಯೋತಿ ಯೋಜನೆ ಮರುಪರಿಶೀಲನೆ: ಮೊಬೈಲ್ ಆ್ಯಪ್‌ನಲ್ಲಿ ಅರ್ಜಿ ಸಲ್ಲಿಸೋದು ಹೇಗೆ? ಇಲ್ಲಿವೆ ಐದು ಸರಳ ಹಂತಗಳು

3 Min Read

Rain & Holiday ರಾಜ್ಯದ ಅಲ್ಲಲ್ಲಿ ಮುಂಗಾರು ಮಳೆ ಜೋರು: 9 ಜಿಲ್ಲೆಗಳಿಗೆ ಅಲರ್ಟ್, 5 ಜಿಲ್ಲೆಗಳಲ್ಲಿಂದು ಶಾಲಾ‌ ಕಾಲೇಜುಗಳಿಗೆ ರಜೆ

1 Min Read

Tiger family captured ಮೈಸೂರಲ್ಲಿ ಐದು ಮರಿಗಳ ಜತೆ ರಾಣಿ ಹುಲಿ ಸೆರೆ

1 Min Read

Newdelhi ಮೊಬೈಲ್ ಗ್ರಾಹಕರಿಗೆ ಟೆಲಿಕಾಂ ಕಂಪೆನಿಯಿಂದ ಮತ್ತೆ ಶಾಕ್: ರೀಚಾರ್ಜ್ ದರ ಶೇ.12-15 ಏರಿಕೆ ಸಾಧ್ಯತೆ!

2 Min Read

You Might Also Like

Crimeಕರ್ನಾಟಕಪ್ರಮುಖ

Ballari ಡಬಲ್ ಮರ್ಡರ್: ಪತ್ನಿ ಮಾವನನ್ನು ಚಾಕುವಿನಿಂದ ಇರಿದು ಕೊಂದ ಪತಿರಾಯ

1 Min Read
ಕರ್ನಾಟಕದೇಶಪ್ರಮುಖ

Lorry Strike ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 1ರಿಂದ ದಕ್ಷಿಣ ಭಾರತದಾದ್ಯಂತ ಲಾರಿ ಮುಷ್ಕರ

1 Min Read
ಕರ್ನಾಟಕದೇಶಪ್ರಮುಖ

Voter List Revision SIR ಪ್ರಕ್ರಿಯೆ​ ವೇಳೆ ಕರ್ನಾಟಕದಲ್ಲಿ ಭಾರಿ ಲೋಪ ಆರೋಪ : ಮೈತ್ರಿ ನಾಯಕರಿಂದ ದೂರು

2 Min Read
ಕರ್ನಾಟಕಪ್ರಮುಖವೈರಲ್

Mallalli Falls ಮಲ್ಲಳ್ಳಿ ಫಾಲ್ಸ್‌ನಲ್ಲಿ ರೀಲ್ಸ್ ಹುಚ್ಚು: ಈ ಯುವಕರಿಬ್ಬರು ಬದುಕಿದ್ದೇ ಪವಾಡ, ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?