Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂ ವಿರುದ್ಧದ ಮುಡಾ ಪ್ರಕರಣ: ಆ.31ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಕರ್ನಾಟಕಪ್ರಮುಖ

ಸಿಎಂ ವಿರುದ್ಧದ ಮುಡಾ ಪ್ರಕರಣ: ಆ.31ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

Share
3 Min Read
SHARE

newsics.com

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಹಗರಣ ಸಂಬಂಧ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 31ಕ್ಕೆ ಮುಂದೂಡಿದೆ.

ಅಲ್ಲಿಯವರೆಗೆ ಈ ಸಂಬಂಧ ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶ ಮುಂದುವರಿಯಲಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ದಿನ ರಿಲೀಫ್ ಸಿಕ್ಕಂತಾಗಿದೆ.

ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ರದ್ದು ಕುರಿತಂತೆ ಗುರುವಾರ ನಡೆದ ವಿಚಾರಣೆಯಲ್ಲಿ ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು.‌ ಅವರ ವಾದ ಮಂಡನೆ ಮುಗಿದಿದೆ. ಶನಿವಾರ ರಾಜ್ಯಪಾಲರ ಪದ ವಕೀಲರು ವಾದ ಮಂಡಿಸಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ಹಗರಣ ನಡೆದಿದೆ ಎಂದು ರಾಜ್ಯಪಾಲರಿಗೆ ದೂರು ದಾಖಲಿಸಿರುವುದು ಕೇವಲ ಕಾಲ್ಪನಿಕವಾಗಿದೆ. ಇದನ್ನು ಆಧರಿಸಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ನ್ಯಾಯಾಲಯವು ಪ್ರಾಸಿಕ್ಯೂಷನ್‌ ರದ್ದುಗೊಳಿಸುವ ಜತೆಗೆ, ರಾಜ್ಯಪಾಲರಿಗೆ ದೂರು ಕೊಟ್ಟವರ ದೂರು ವಜಾಗೊಳಿಸುವ ಮೂಲಕ, ದೂರುದಾರರಿಗೆ ದಂಡ ವಿಧಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದಾರೆ.

ಗುರುವಾರ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ವಿಚಾರಣೆ ಆರಂಭಿಸಿದ ನಂತರ, ನ್ಯಾಯಮೂರ್ತಿಗಳು ಎಲ್ಲರೂ ಆಕ್ಷೇಪಣೆ ಸಲ್ಲಿಸಿದ್ದೀರಾ ಎಂದು ಕೇಳಿದರು. ಆಗ ರಾಜ್ಯಪಾಲರ ಪರವಾಗಿ ವಾದ ಮಾಡಲು ಆಗಮಿಸಿದ್ದ ಹಿರಿಯ ವಕೀಲ ತುಷಾರ್ ಮೆಹ್ತಾ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಜಾರಿ ಹಾಗೂ ಅದನ್ನು ಮುಂದುವರಿಸಲು ನೀಡಿದ ನೋಟೀಸಿನ ಬಗ್ಗೆ ಲಿಖಿತ ವಿವರಣೆಯನ್ನು ಕೊಡುತ್ತೇವೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು, ಕೆಲ ಪ್ರತಿವಾದಿಗಳು ಆಕ್ಷೇಪಣೆ ಸಲ್ಲಿಸಿದ್ದಾರೆ. ಈ ಆಕ್ಷೇಪಣೆ ಗೆ ನಮ್ಮ ಪ್ರತಿಕ್ರಿಯೆ ನೀಡಬೇಕಿದೆ. ರಾಜ್ಯಪಾಲರು ಈಗಲೂ ಆಕ್ಷೇಪಣೆ ಸಲ್ಲಿಸಿಲ್ಲ. ರಾಜ್ಯಪಾಲರು ಯಾವುದೇ ಆಕ್ಷೇಪಣೆ ಸಲ್ಲಿಸುವುದಿಲ್ಲ. ಅವಶ್ಯವಿದ್ದರೆ ರಾಜ್ಯಪಾಲರು ತಮ್ಮ ಕಡತ ಸಲ್ಲಿಸಲು ಸಿದ್ಧರಿದ್ದಾರೆ.

ಪ್ರತಿವಾದಿಗಳು ಆಕ್ಷೇಪಣೆ ಸಲ್ಲಿಸುವುದಿಲ್ಲ ಎಂದು ದಾಖಲಿಸಿ. ಕಾನೂನಿನ ಪ್ರಶ್ನೆ ಇರುವುದರಿಂದ ರಾಜ್ಯಪಾಲರು ಆಕ್ಷೇಪಣೆ ಸಲ್ಲಿಸುವುದಿಲ್ಲ. ಹೀಗಾಗಿ, ರಾಜ್ಯಪಾಲರ ಆಕ್ಷೇಪಣೆಗೆ ಕಾಯದೇ ವಿಚಾರಣೆಗೆ ಮನವಿ ಮಾಡಿದ್ದಾರೆ.

ಭ್ರಷ್ಟಾಚಾರ ಕಾಯಿದೆ 17A ಕುರಿತು ವಾದ ಮಂಡಿಸಿದ್ದೆನು. ಇದೊಂದೆ ಪಾಯಿಂಟ್ ಅಧರಿಸಿ ರಾಜ್ಯಪಾಲರ ಆದೇಶ ರದ್ದುಪಡಿಸಬೇಕು. ಪಿ.ಸಿ.ಆ್ಯಕ್ಟ್ 17A ಅಡಿ ಪೂರ್ವಾನುಮತಿ ಬೇಕು. ಆದರೆ, 17A ಮಾನದಂಡ ಪಾಲನೆಯಾಗದೇ ಇದ್ದರೂ ಅನುಮತಿ ನೀಡಲಾಗಿದೆ. ಪೊಲೀಸ್ ಅಧಿಕಾರಿ ಅನುಮತಿ ಪಡೆಯದೇ ತನಿಖೆ ಮಾಡುವಂತಿಲ್ಲ. ಸಾರ್ವಜನಿಕ ಸೇವಕನ ಶಿಫಾರಸು, ನಿರ್ಧಾರಗಳ ಕುರಿತು ತನಿಖೆ ಇರಬೇಕು. ಈ ಎರಡನ್ನೂ ರಾಜ್ಯಪಾಲರು ಪಾಲನೆ ಮಾಡಿಲ್ಲ ಎಂದು ಅಭಿಷೇಕ್ ಮನು ಸಿಂಘ್ವಿ ನ್ಯಾಯಾಲಯದ ಮುಂದೆ ವಾದ ಮಂಡಿಸಿದ್ದಾರೆ.

ಇನ್ನು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟವರಿಗೆ ಸ್ವತಃ ರಾಜ್ಯಪಾಲರೇ ದಂಡ ವಿಧಿಸಬೇಕು. ಜೊತೆಗೆ, ನ್ಯಾಯಾಲಯದಿಂದಲೂ ಕೂಡ ದೂರುದಾರರ ವಿರುದ್ಧ ದಂಡ ವಿಧಿಸಿ ಪಾಠ ಕಲಿಸಬೇಕು. ಸಿಎಂ ವಿರುದ್ಧ ಕೇವಲ ಕಾಲ್ಪನಿಕ ದೂರು ನೀಡಿ ರಾಜ್ಯಪಾಲರು ಮತ್ತು ನ್ಯಾಯಾಲಯದ ಸಮಯವನ್ನು ವ್ಯರ್ಥ ಮಾಡಿದ್ದಾರೆ. ಸುಪ್ರೀಂ ಕೋರ್ಟ್, ಕರ್ನಾಟಕ ಹೈಕೋರ್ಟ್ ನ ಆದೇಶಗಳಿವೆ. ಈ ಬಗ್ಗೆ ನಾನು ವಾದ ಮಂಡಿಸಲಿದ್ದೇನೆ. ಟಿ.ಜೆ ಅಬ್ರಾಹಂ ಸಲ್ಲಿಸಿರುವ ಆಕ್ಷೇಪಣೆ ಗಮನಿಸಬೇಕು. 17A ಅಡಿ ಪೂರ್ವಾನುಮತಿ ಬೇಕಿಲ್ಲವೆಂದು ಹೇಳಿದ್ದಾರೆ. ಇವೆಲ್ಲ ಕೇವಲ ಪ್ರಕ್ರಿಯೆಗಳಷ್ಟೆ ಎಂದು ಹೇಳಿದ್ದಾರೆ. ಹೀಗಿದ್ದಾಗ ರಾಜ್ಯಪಾಲರು ಅಬ್ರಹಾಂ ಗೆ ದಂಡ ವಿಧಿಸಿ ದೂರು ವಜಾಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮನವಿ ಮಾಡಿದರು.

ಅದೇ ಸ್ಟೈಲ್, ಅದೇ ಖದರ್… ಬದಲಾಗದ ದಚ್ಚು… ಬಳ್ಳಾರಿಯ ಹೈ ಸೆಕ್ಯುರಿಟಿ ಸೆಲ್‌ನಲ್ಲಿ ಬಂಧಿಯಾದ ದರ್ಶನ್

TAGGED:Muda case against CM: High Court adjourned hearing to August 31
Share This Article
Facebook Twitter Copy Link Print
Previous Article ಸ್ಟೈಲಿಶ್‌ ಲುಕ್‌ನಲ್ಲಿ ದರ್ಶನ್; ಕೂಲಿಂಗ್ ಗ್ಲಾಸ್‌ ಗೆ ಅನುಮತಿ ನೀಡಿದವರ ವಿರುದ್ಧ ಕ್ರಮ
Next Article ಆದಾಯ‌ ಮೀರಿ ಡಿಕೆಶಿ ಆಸ್ತಿ ಗಳಿಕೆ ಪ್ರಕರಣ: ಸಿಬಿಐ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿಸಿಎಂ‌ಗೆ ತಾತ್ಕಾಲಿಕ ರಿಲೀಫ್

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?