Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > Voter List Revision SIR ಪ್ರಕ್ರಿಯೆ​ ವೇಳೆ ಕರ್ನಾಟಕದಲ್ಲಿ ಭಾರಿ ಲೋಪ ಆರೋಪ : ಮೈತ್ರಿ ನಾಯಕರಿಂದ ದೂರು
ಕರ್ನಾಟಕದೇಶಪ್ರಮುಖ

Voter List Revision SIR ಪ್ರಕ್ರಿಯೆ​ ವೇಳೆ ಕರ್ನಾಟಕದಲ್ಲಿ ಭಾರಿ ಲೋಪ ಆರೋಪ : ಮೈತ್ರಿ ನಾಯಕರಿಂದ ದೂರು

Share
2 Min Read
SHARE

newsics.com| ನ್ಯೂಸಿಕ್ಸ್

ಕರ್ನಾಟಕದ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ (SIR) ವ್ಯಾಪಕ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಪ್ರಹ್ಲಾದ್ ಜೋಶಿ ನೇತೃತ್ವದ ಮೈತ್ರಿ ನಿಯೋಗವು ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿದೆ. ಬಳಿಕ ದೆಹಲಿಯಲ್ಲಿಯೇ ಮೈತ್ರಿ ನಾಯಕರು ಸುದ್ದಿಗೋಷ್ಠಿಯನ್ನೂ ನಡೆಸಿದ್ದು, ರಾಜ್ಯ ಕಾಂಗ್ರೆಸ್​​ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ.

ಎಸ್​ಐಆರ್​​ ಬಗ್ಗೆ ಕರ್ನಾಟಕದಲ್ಲಿ ಕಾಂಗ್ರೆಸ್​​ ಸರ್ಕಾರ ಮೊದಲು ವಿರೋಧ ಮಾಡಿತ್ತು. ಈಗ ಅವರೇ ಅದನ್ನು ಬುಡಮೇಲು ಮಾಡಲು ಹೊರಟಿದ್ದಾರೆ. ಮನೆ ಮನೆಗೆ ಹೋಗಿ ಮತಪಟ್ಟಿ ಪರಿಷ್ಕರಣೆ ಮಾಡಬೇಕೆಂಬ ಬಗ್ಗೆ ಸ್ಪಷ್ಟವಾಗಿ ಚುನಾವಣಾ ಆಯೋಗದ ನಿಮಯವಿದೆ. ಆದರೆ ಕರ್ನಾಟಕದಲ್ಲಿ ಮಸೀದಿ, ದರ್ಗಾ, ಸಮುದಾಯ ಭವನಗಳಲ್ಲಿ ಕುಳಿತು ಎಸ್​ಐಆರ್​​ ಪ್ರಕ್ರಿಯೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ದೂರಿದ್ದಾರೆ.

ರಾಜ್ಯ ಸರ್ಕಾರದ ಕೈಕೆಳಗಿರುವ ಅಧಿಕಾರಿಗಳ ಬಳಸಿಕೊಂಡು ಅಕ್ರಮ ಮಾಡಲಾಗುತ್ತಿದ್ದು, ನಕಲಿ ಮತಗಳನ್ನು ಸೃಷ್ಟಿಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಗ್ಯಾರಂಟಿ ಕಡಿತಗೊಳ್ಳುವ ಭಯ ಹುಟ್ಟಿಸಿ ಜನರನ್ನು ಅನಗತ್ಯ ಗಾಬರಿಪಡಿಸಲಾಗುತ್ತಿದೆ. ಈ ಬಗ್ಗೆ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿ, ಎರಡೂ ಪಕ್ಷಗಳಿಂದ ಮನವಿ ಪತ್ರ ನೀಡಿದ್ದೇವೆ. ಕೂಲಂಕಷವಾಗಿ ಪರಿಶೀಲನೆ ಮಾಡುವ ಬಗ್ಗೆ ಅವರು ಭರವಸೆ ನೀಡಿದ್ದಾರೆ ಎಂದವರು ಹೇಳಿದ್ದಾರೆ.

ಎಸ್ಐಆರ್​ನಲ್ಲಿ ಬಾಂಗ್ಲಾದವರ ಹೆಸರು ಸೇರಿಸುವ ಕೆಲಸ ಆಗುತ್ತಿದ್ದು, ಕಾಂಗ್ರೆಸ್​ನವರು ಹಾದಿಬೀದಿಯಲ್ಲಿ ಫಾರಂ ಹಂಚುತ್ತಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಕರ್ನಾಟಕ ಸರ್ಕಾರದಿಂದ ದೇಶವನ್ನು ಅಪಾಯಕ್ಕೆ ಸಿಲುಕಿಸುವ ಕೆಲಸವಾಗ್ತಿದೆ. ನಾವು ಅಕ್ರಮಗಳನ್ನು ಆಯೋಗದ ಗಮನಕ್ಕೆ ತರುವ ಕೆಲಸ ಮಾಡುತ್ತಿದ್ದೇವೆ ಎಂದವರು ಕಿಡಿ ಕಾರಿದ್ದಾರೆ. ಚುನಾವಣಾ ಆಯೋಗ ಕತ್ತೆ ಕಾಯುತ್ತಿದೆಯಾ ಎಂಬ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕ್ರಮ ಆಗಬೇಕು ಎಂದೂ ಒತ್ತಾಯಿಸಿರುವ ಅಶೋಕ್​​, ಬೇರೆ ರಾಜ್ಯದ ಅಧಿಕಾರಿಗಳನ್ನು ಹಾಕಿ ಮತಪಟ್ಟಿ ಪರಿಷ್ಕರಣೆ ಮಾಡ್ಬೇಕು ಎಂದು ಆಗ್ರಹಿಸಿದ್ದಾರೆ.

ಕರ್ನಾಟಕದಲ್ಲಿ ಎಸ್​ಐಆರ್ ಪ್ರಕ್ರಿಯೆ​ಯಲ್ಲಿ ಲೋಪ ಆರೋಪ ಸಂಬಂಧ ದಾಖಲೆ ಸಮೇತ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್​ಗೆ ಬಿಜೆಪಿ, ಜೆಡಿಎಸ್ ನಿಯೋಗ ದೂರು ಸಲ್ಲಿಕೆ ಮಾಡಿದೆ. ಕೇಂದ್ರ ಸಚಿವರಾದ ಹೆಚ್​. ಡಿ. ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿಧಾನಸಭೆ ವಿಪಕ್ಷ ನಾಯಕ ಅಶೋಕ್, ಉಪ ನಾಯಕ ಅರವಿಂದ್​​ ಬೆಲ್ಲದ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಲ್​ಪಿ ನಾಯಕ ಸುರೇಶ್ ​ಬಾಬು, ನಿಖಿಲ್ ಕುಮಾರಸ್ವಾಮಿ ಈ ವೇಳೆ ಉಪಸ್ಥಿತರಿದ್ದರು.

Mallalli Falls ಮಲ್ಲಳ್ಳಿ ಫಾಲ್ಸ್‌ನಲ್ಲಿ ರೀಲ್ಸ್ ಹುಚ್ಚು: ಈ ಯುವಕರಿಬ್ಬರು ಬದುಕಿದ್ದೇ ಪವಾಡ, ವಿಡಿಯೋ ನೋಡಿ

Share This Article
Facebook Twitter Copy Link Print
Previous Article Mallalli Falls ಮಲ್ಲಳ್ಳಿ ಫಾಲ್ಸ್‌ನಲ್ಲಿ ರೀಲ್ಸ್ ಹುಚ್ಚು: ಈ ಯುವಕರಿಬ್ಬರು ಬದುಕಿದ್ದೇ ಪವಾಡ, ವಿಡಿಯೋ ನೋಡಿ
Next Article Lorry Strike ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 1ರಿಂದ ದಕ್ಷಿಣ ಭಾರತದಾದ್ಯಂತ ಲಾರಿ ಮುಷ್ಕರ

Popular Posts

Newdelhi ಮೊಬೈಲ್ ಗ್ರಾಹಕರಿಗೆ ಟೆಲಿಕಾಂ ಕಂಪೆನಿಯಿಂದ ಮತ್ತೆ ಶಾಕ್: ರೀಚಾರ್ಜ್ ದರ ಶೇ.12-15 ಏರಿಕೆ ಸಾಧ್ಯತೆ!

2 Min Read

Ballari ಡಬಲ್ ಮರ್ಡರ್: ಪತ್ನಿ ಮಾವನನ್ನು ಚಾಕುವಿನಿಂದ ಇರಿದು ಕೊಂದ ಪತಿರಾಯ

1 Min Read

Lorry Strike ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 1ರಿಂದ ದಕ್ಷಿಣ ಭಾರತದಾದ್ಯಂತ ಲಾರಿ ಮುಷ್ಕರ

1 Min Read

Voter List Revision SIR ಪ್ರಕ್ರಿಯೆ​ ವೇಳೆ ಕರ್ನಾಟಕದಲ್ಲಿ ಭಾರಿ ಲೋಪ ಆರೋಪ : ಮೈತ್ರಿ ನಾಯಕರಿಂದ ದೂರು

2 Min Read

You Might Also Like

ಕರ್ನಾಟಕಪ್ರಮುಖವೈರಲ್

Mallalli Falls ಮಲ್ಲಳ್ಳಿ ಫಾಲ್ಸ್‌ನಲ್ಲಿ ರೀಲ್ಸ್ ಹುಚ್ಚು: ಈ ಯುವಕರಿಬ್ಬರು ಬದುಕಿದ್ದೇ ಪವಾಡ, ವಿಡಿಯೋ ನೋಡಿ

2 Min Read
ದೇಶಪ್ರಮುಖವೈರಲ್

Water bottle ನೀತಾ ಅಂಬಾನಿಯ ಈ ವಾಟರ್ ಬಾಟಲ್ ಬೆಲೆ ಎಷ್ಟು?

1 Min Read
Sportsದೇಶಪ್ರಮುಖ

Sports news ಅಫ್ಘಾನಿಸ್ತಾನದ ಮಾಜಿ ಕ್ರಿಕೆಟಿಗ ಶಪೂರ್ ಜದ್ರಾನ್ ನಿಧನ

1 Min Read
filmಕರ್ನಾಟಕಪ್ರಮುಖ

Actress Radha ನೀನು ಬಟ್ಟೆ ಬಿಚ್ಚಿ ನಟಿಸಿದ್ರೆ ಮಾತ್ರ ಬೆಳಿತೀಯಾ… ನಟಿ ರಾಧಾ ಭಗವತಿಗೆ ಹೀಗೊಂದು ಸಲಹೆ ಕೊಟ್ಟ ಭೂಪ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?