newsics.com
ಪರಪ್ಪನ ಅಗ್ರಹಾರದಲ್ಲಿ ವಿಐಪಿ ಟ್ರೇಟ್ಮೆಂಟ್ ಪಡೆಯುತ್ತಿದ್ದ ದರ್ಶನ್ ಈಗ ಬಳ್ಳಾರಿ ಜೈಲಿನಲ್ಲಿ ಕಂಬಿ ಎಣಿಸುವಂತಾಗಿದೆ. ಆ ವಾತಾವರಣಕ್ಕೆ ಅವರು ಹೊಂದಿಕೊಳ್ಳಬೇಕು. ಇದಕ್ಕೆ ಅವರಿಗೆ ಸಾಕಷ್ಟು ಸಮಯ ಬೇಕು ಎನಿಸುತ್ತಿದೆ. ಅವರಿಗೆ ರಾತ್ರಿಯೆಲ್ಲ ನಿದ್ದೆ ಬಂದಿಲ್ಲ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ನಂತರ ಬಂಧನಕ್ಕೆ ಒಳಗಾಗಿ ಹಾಯಾಗಿದ್ದ ಅವರು ಈಗ ನಿಜವಾದ ಸಂಕಷ್ಟ ಅನುಭವಿಸುತ್ತಿದ್ದಾರೆ. ಸದ್ಯ ಕುಟುಂಬದವರಿಗೆ ಮಾತ್ರ ಭೇಟಿಗೆ ಅವಕಾಶ ಇದೆ. ಅವರು ರಾತ್ರಿ ಇಡೀ ನಿದ್ದೆ ಇಲ್ಲದೆ ಒದ್ದಾಡಿದ್ದಾರೆ.
ಬಳ್ಳಾರಿ ಜೈಲಿನಲ್ಲಿ ದರ್ಶನ್ ಮೊದಲ ದಿನ ಕಳೆದಿದ್ದಾರೆ. ರಾತ್ರಿ 1 ಗಂಟೆವರೆಗೆ ನಿದ್ದೆ ಮಾಡದೆ ಒದ್ದಾಡಿದ್ದಾರೆ. ಜೈಲಿಗೆ ಇನ್ನೂ ಅವರು ಹೊಂದಿಕೊಂಡಿಲ್ಲ. ಜೈಲಿನಲ್ಲಿ ಬೆಳಗಿನ ಉಪಾಹಾರಕ್ಕೆ ಉಪ್ಪಿಟ್ಟು ತಿಂದಿದ್ದಾರೆ. ಅವರಿಗೆ ಜೈಲಿನ ನಿಯಮದಂತೆ 355 ಗ್ರಾಮ್ ಉಪ್ಪಿಟ್ಟು ನೀಡಲಾಗಿದೆ. ಬಳ್ಳಾರಿ ಜೈಲಿಗೆ ದರ್ಶನ್ ಅವರನ್ನು ಆಗಸ್ಟ್ 29ರಂದು ಶಿಫ್ಟ್ ಮಾಡಿದ್ದರು. ಅವರು ಬೆಳ್ಳಿಗೆ ತಿಂಡಿ, ಮಧ್ಯಾಹ್ನದ ಊಟವನ್ನು ಬಿಟ್ಟಿದ್ದರು.