newsics.com | ನ್ಯೂಸಿಕ್ಸ್
ನವದೆಹಲಿ: ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಅವರಿಗೆ ಈ ಹಿಂದೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆಂಶಿಕ ಮುಕ್ತಿಯನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ರೇವಣ್ಣಗೆ ಮಹತ್ವದ ನೋಟಿಸ್ ಜಾರಿ ಮಾಡಿದೆ.
ಏನಿದು ವಿವಾದ?
ಮನೆಗೆಲಸದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 354 (ಮಹಿಳೆಯ ಘನತೆಗೆ ಧಕ್ಕೆ) ಹಾಗೂ 354ಎ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಹೈಕೋರ್ಟ್ ಇದರಲ್ಲಿನ ಪ್ರಮುಖ ಸೆಕ್ಷನ್ 354 ಅನ್ನು ಕೈಬಿಟ್ಟು, ಕೇವಲ ಸೆಕ್ಷನ್ 354ಎ ಅಡಿ ಮಾತ್ರ ಕೆಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಸುವಂತೆ ಆದೇಶಿಸಿ ರೇವಣ್ಣಗೆ ವಿನಾಯಿತಿ ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ರಾಜ್ಯ ಸರ್ಕಾರದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ನ ದ್ವಿಸದಸ್ಯ ಪೀಠ, “ಇಂತಹ ಗಂಭೀರ ಪ್ರಕರಣದಲ್ಲಿ ಪ್ರಮುಖ ಸೆಕ್ಷನ್ ಅನ್ನು ಹೈಕೋರ್ಟ್ ಹೇಗೆ ಕೈಬಿಡಲು ಸಾಧ್ಯವಾಯಿತು?” ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಹೈಕೋರ್ಟ್ ನಡಾವಳಿ ಸರಿಯಾಗಿಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ, ರೇವಣ್ಣ ಅವರಿಗೆ ನೋಟಿಸ್ ನೀಡಿದೆ.
Tragedy ಮೊಬೈಲ್ನಿಂದ ತಲೆಗೆ ಹೊಡೆದ ಪತ್ನಿ: ಚಿಕಿತ್ಸೆ ಪಡೆದು ಮನೆಗೆ ಬಂದ ಗಂಡ ಕೆಲವೇ ಗಂಟೆಗಳಲ್ಲಿ ಸಾ*ವು