Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Teacher’s torcher ಹಣ ಪತ್ತೆಗಾಗಿ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಶಿಕ್ಷಕಿ! ಪೋಷಕರ ಆಕ್ರೋಶ
ದೇಶಪ್ರಮುಖ

Teacher’s torcher ಹಣ ಪತ್ತೆಗಾಗಿ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಶಿಕ್ಷಕಿ! ಪೋಷಕರ ಆಕ್ರೋಶ

Share
2 Min Read
SHARE

newsics.com | ನ್ಯೂಸಿಕ್ಸ್

ಶಾಲೆಯಲ್ಲೇ ವಿದ್ಯಾರ್ಥಿನಿಯರ ಆತ್ಮಗೌರವಕ್ಕೆ ಧಕ್ಕೆ ತಂದ ಅಮಾನವೀಯ ಘಟನೆಯೊಂದು ರಾಜಸ್ಥಾನದಲ್ಲಿ ಬೆಳಕಿಗೆ ಬಂದಿದೆ.

ಕಳೆದುಹೋದ ಕೇವಲ 500 ರೂಪಾಯಿ ನಗದು ಪತ್ತೆ ಹಚ್ಚುವ ನೆಪದಲ್ಲಿ, ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬಳು ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿ ತಪಾಸಣೆ ನಡೆಸಿರುವ ಆಘಾತಕಾರಿ ಆರೋಪ ಕೇಳಿಬಂದಿದೆ.

ಈ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗುತ್ತಿದ್ದಂತೆ ಎಚ್ಚೆತ್ತ ಶಿಕ್ಷಣ ಇಲಾಖೆ, ಸದರಿ ಶಿಕ್ಷಕಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ.

ಬ್ಯಾಗ್‌ನಲ್ಲಿದ್ದ ಹಣ ಮಾಯ: ಕೊಠಡಿಯಲ್ಲಿ ಕೂಡಿಹಾಕಿದ ಶಿಕ್ಷಕಿ! ರಾಜಸ್ಥಾನದ ಸವಾಯಿ ಮಾಧೋಪುರ ಜಿಲ್ಲೆಯ ಬಾಮನ್‌ವಾಸ್ ತಾಲೂಕಿಗೆ ಒಳಪಡುವ ಲಿವಾಲಿ ಗ್ರಾಮದ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಹಿರಿಯ ಹಿಂದಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸರಸ್ವತಿ ಮೀನಾ ಎಂಬುವವರ ಬ್ಯಾಗ್‌ನಿಂದ 500 ರೂಪಾಯಿ ನಾಪತ್ತೆಯಾಗಿತ್ತು. ಇಡೀ ಶಾಲೆಯಲ್ಲಿ ಹುಡುಕಾಡಿದರೂ ಹಣ ಸಿಗದಿದ್ದಾಗ, ತರಗತಿಯ ವಿದ್ಯಾರ್ಥಿನಿಯರೇ ಕಳ್ಳತನ ಮಾಡಿರಬಹುದೆಂದು ಶಿಕ್ಷಕಿ ಶಂಕಿಸಿದ್ದಾರೆ.

ಇಷ್ಟಕ್ಕೇ ನಿಲ್ಲದ ಶಿಕ್ಷಕಿ ಸರಸ್ವತಿ, ತನ್ನ ಸಹೋದ್ಯೋಗಿಯೊಬ್ಬರ ನೆರವು ಪಡೆದು 9 ಮತ್ತು 11ನೇ ತರಗತಿಯ ವಿದ್ಯಾರ್ಥಿನಿಯರನ್ನು ತರಗತಿ ಕೊಠಡಿಯೊಂದರ ಒಳಗೆ ಕರೆದೊಯ್ದು ಹೊರಗಿನಿಂದ ಚಿಲಕ ಹಾಕಿದ್ದಾರೆ. ಬಳಿಕ ‘ಹಣದ ತನಿಖೆ’ಯ ನೆಪವೊಡ್ಡಿ ಬಾಲಕಿಯರ ಬಟ್ಟೆಗಳನ್ನು ಬಲವಂತವಾಗಿ ಬಿಚ್ಚಿಸಿ, ಅಮಾನವೀಯವಾಗಿ ತಪಾಸಣೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಶಾಲೆಯ ಮುಂದೆ ಪೋಷಕರ ಆಕ್ರೋಶ, ರಣರಂಗವಾದ ಆವರಣ: ಶಾಲೆಯಿಂದ ಮನೆಗೆ ಮರಳಿದ ವಿದ್ಯಾರ್ಥಿನಿಯರು ಕಣ್ಣೀರಿಡುತ್ತಾ ತಮಗಾದ ಕಹಿ ಅನುಭವವನ್ನು ಪೋಷಕರಿಗೆ ತಿಳಿಸಿದ್ದಾರೆ. ಇದರಿಂದ ಆಘಾತಕ್ಕೊಳಗಾದ ಪೋಷಕರು ಮತ್ತು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಆವರಣಕ್ಕೆ ಧಾವಿಸಿ ಶಿಕ್ಷಕಿಯ ವಿರುದ್ಧ ಭಾರಿ ಪ್ರತಿಭಟನೆ ನಡೆಸಿದರು. ಶಾಲೆಯ ಮುಂದೆ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಸ್ಥಳೀಯ ಆಡಳಿತ ಹಾಗೂ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ತಕ್ಷಣವೇ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಪ್ಪು ಮಾಡಿದ ಶಿಕ್ಷಕಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿ ಪೋಷಕರನ್ನು ಶಾಂತಗೊಳಿಸಿದರು.

ಶಿಕ್ಷಣ ಇಲಾಖೆಯಿಂದ ಸಸ್ಪೆಂಡ್ ಆರ್ಡರ್: ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಶಿಕ್ಷಣಾಧಿಕಾರಿಗಳು ನೀಡಿದ ಪ್ರಾಥಮಿಕ ವರದಿಯನ್ನು ಆಧರಿಸಿ, ಭರತ್‌ಪುರ ವಿಭಾಗದ ಶಾಲಾ ಶಿಕ್ಷಣ ಜಂಟಿ ನಿರ್ದೇಶಕರ ಕಚೇರಿಯು ಶಿಕ್ಷಕಿ ಸರಸ್ವತಿ ಮೀನಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

ರಾಜಸ್ಥಾನ ನಾಗರಿಕ ಸೇವೆಗಳ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1958ರ ರೂಲ್ 13ರ ಅಡಿಯಲ್ಲಿ ಈ ಶಿಸ್ತು ಕ್ರಮ ಜರುಗಿಸಲಾಗಿದೆ. ಅಮಾನತಿನ ಅವಧಿಯಲ್ಲಿ ಶಿಕ್ಷಕಿಯ ಕೇಂದ್ರ ಸ್ಥಾನವನ್ನು ಧೋಲ್‌ಪುರದ ರಾಜಖೇಡಾ ಬ್ಲಾಕ್ ಶಿಕ್ಷಣ ಕಚೇರಿಗೆ ನಿಯೋಜಿಸಲಾಗಿದ್ದು, ಇಲಾಖಾ ಮಟ್ಟದ ಸಮಗ್ರ ಮತ್ತು ಕಠಿಣ ತನಿಖೆಗೆ ಆದೇಶಿಸಲಾಗಿದೆ. ಮಕ್ಕಳ ಹಕ್ಕುಗಳು ಮತ್ತು ಮುಗ್ಧ ಮನಸ್ಸುಗಳಿಗೆ ತೀವ್ರ ಆಘಾತ ಉಂಟುಮಾಡಿರುವ ಈ ಘಟನೆ ಇಡೀ ಶಿಕ್ಷಕ ಸಮುದಾಯ ತಲೆತಗ್ಗಿಸುವಂತೆ ಮಾಡಿದೆ.

Bantwal Murder Case ಬಂಟ್ವಾಳ ಬಿ.ಸಿ.ರೋಡ್‌ನಲ್ಲಿ ಯುವತಿ ಲಾವಣ್ಯ ಬರ್ಬರ ಹತ್ಯೆ: ಚೇತನ್ ಬಂಧನ, ಏಕಮುಖ ಪ್ರೀತಿ ಶಂಕೆ

Yash Neel ‘ಮಹಾವತಾರ್’ ವರ್ಲ್ಡ್‌ಗೆ ಯಶ್ ಎಂಟ್ರಿ? ಪ್ರಶಾಂತ್ ನೀಲ್ ಜತೆಗಿನ ಆ ಫೋಟೋ ವೈರಲ್

TAGGED:#femalstudents #undressed #school #moneytheft #teacher #rajasthan #news #nresics #kannadanews
Share This Article
Facebook Twitter Copy Link Print
Previous Article Gokarna connection bandh ಗುಡ್ಡ ಕುಸಿತ: ಸಂಪರ್ಕ ಕಡಿದುಕೊಂಡ ಗೋಕರ್ಣ
Next Article Server down ನಾಡಕಚೇರಿ ವೆಬ್‌ಸೈಟ್ ಸರ್ವರ್ ಡೌನ್: ಜಾತಿ, ಆದಾಯ ಪತ್ರ ಸಿಗದೆ ಜನರ ಪರದಾಟ

Popular Posts

Relationship- Love kick ಪ್ರೀತಿಯಲ್ಲಿ ಬಿದ್ದರೆ ಮೆದುಳು ಕೊಕೇನ್ ತಿಂದಂತೆ ಆಡುತ್ತೆ! ನಿಮ್ಮೊಳಗಿನ ‘ಲವ್ ಕೆಮಿಸ್ಟ್ರಿ’ ಬಗ್ಗೆ ನಿಮಗೇನಾದ್ರೂ ಗೊತ್ತಾ?

2 Min Read

S Janaki life ಹೈದ್ರಾಬಾದ್‌ನಲ್ಲಿ ಭವ್ಯ ಬಂಗಲೆಯಿದ್ರೂ ಮೈಸೂರಿನ ಬಾಡಿಗೆ ಮನೆಯಲ್ಲಿ ಗಾನಕೋಗಿಲೆ ವಾಸ! ಜಾನಕಿ ಜೀವನ ಯಾಕೆ ಹೀಗೆ? ಕೇರ್ ಟೇಕರ್ಸ್ ಹೇಳಿದ್ದೇನು?

2 Min Read

Unlucky couple 15 ದಿನಗಳ ಹಿಂದಷ್ಟೇ ಮದುವೆ! ಬೈಕ್ ಅಪಘಾತದಲ್ಲಿ ನವವಿವಾಹಿತೆ ಸಾವು, ಗಂಭೀರ ಸ್ಥಿತಿಯಲ್ಲಿ ಪತಿ

1 Min Read

God of money ಒಂದೇ ದಿನದಲ್ಲಿ ತಿರುಪತಿ ವೆಂಕಟರಮಣನಿಗೆ 97 ಕೋಟಿ ಕಾಣಿಕೆ!

1 Min Read

You Might Also Like

ಪ್ರಮುಖವಿದೇಶವೈರಲ್

ಟ್ರಂಪ್ ತಲೆಗೆ ಬೆಲೆ ಕಟ್ಟಿದ ಇರಾಕ್ ಸಶಸ್ತ್ರ ಗುಂಪು! ದೊಡ್ಡಣ್ಣನನ್ನು ಕೊಲ್ಲುವವರಿಗೆ ಸಿಗಲಿದ್ಯಂತೆ 83 ಕೋಟಿ ಬಹುಮಾನ!

2 Min Read
ದೇಶಪ್ರಮುಖವೈರಲ್

Hydrogen train- Modi ಹೈಡ್ರೋಜನ್ ರೈಲು ಸಂಚಾರಕ್ಕೆ ಮೋದಿ ಚಾಲನೆ, ಈ ರೈಲಿನ ಪ್ರಯಾಣ ದರ ಟೀಗಿಂತ ಅಗ್ಗ! ವಿಡಿಯೋ ನೋಡಿ

2 Min Read
ದೇಶಕರ್ನಾಟಕಪ್ರಮುಖವೈರಲ್

Beauty is not beautiful ಮಿಲಿಯನ್ ಫಾಲೋವರ್ಸ್ ಹೊಂದಿರುವ ಈ ‘ಸುಂದರಿ’ ಮನುಷ್ಯಳೇ ಅಲ್ಲ! ಈಕೆಯ ವಿರುದ್ಧ ಭಾರೀ ಕ್ಯಾಂಪೇನ್

2 Min Read
ಕರ್ನಾಟಕದೇಶಪ್ರಮುಖ

Chennamma critical ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ, ಆಸ್ಪತ್ರೆಗೆ ಎಚ್‌ಡಿಡಿ, ಎಚ್‌ಡಿಕೆ, ರೇವಣ್ಣ ಭೇಟಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?