Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

Share
1 Min Read
SHARE

newsics.com | ನ್ಯೂಸಿಕ್ಸ್

ಹೈದರಾಬಾದ್: ತೆಲುಗು ಚಿತ್ರರಂಗದ ಸ್ಟಾರ್ ನಟ, ‘ನಟಸಿಂಹ’ ನಂದಮೂರಿ ಬಾಲಕೃಷ್ಣ ಅವರು ತಮ್ಮ ಮುಂಬರುವ ಬಹುನಿರೀಕ್ಷಿತ ‘NBK 111’ ಚಿತ್ರದ ಚಿತ್ರೀಕರಣದ ವೇಳೆ ಹಠಾತ್ ಅಪಘಾತಕ್ಕೀಡಾಗಿದ್ದು, ಮೊಣಕಾಲಿಗೆ ತೀವ್ರ ಗಾಯವಾಗಿದೆ. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ.

 

ಆಂಧ್ರಪ್ರದೇಶದ ಕಾಕಿನಾಡ ಬಂದರಿನಲ್ಲಿ ಮಾಸ್ ನಿರ್ದೇಶಕ ಗೋಪಿಚಂದ್ ಮಲಿನೇನಿ ಅವರ ಸಾರಥ್ಯದಲ್ಲಿ ಸಿನಿಮಾದ ಸಾಹಸ ದೃಶ್ಯಗಳ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ನಟ ಮಂಚು ಮನೋಜ್ ಹಾಗೂ ಬಾಲಕೃಷ್ಣ ಅವರ ನಡುವಿನ ಭೀಕರ ಫೈಟಿಂಗ್ ಸೀಕ್ವೆನ್ಸ್ ಶೂಟ್ ಮಾಡುವಾಗ ಬಾಲಯ್ಯ ಅವರ ಮೊಣಕಾಲಿಗೆ ಪೆಟ್ಟಾಗಿದೆ. ಕೂಡಲೇ ಸ್ಪಂದಿಸಿದ ಚಿತ್ರತಂಡ ಅವರನ್ನು ಆಸ್ಪತ್ರೆಗೆ ರವಾನಿಸಿದೆ. ತಪಾಸಣೆ ನಡೆಸಿದ ವೈದ್ಯರು ಸಣ್ಣ ಶಸ್ತ್ರಚಿಕಿತ್ಸೆಯ (Minor Surgery) ಅಗತ್ಯವಿದೆ ಎಂದು ತಿಳಿಸಿದ್ದು, ಕೆಲವು ದಿನಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ.

ಮುಂಬೈ ಮಾಫಿಯಾ ಹಿನ್ನೆಲೆಯ ಗ್ಯಾಂಗ್‌ಸ್ಟರ್ ಕಥಾಹಂದರ ಹೊಂದಿರುವ ಈ ಬಿಗ್ ಬಜೆಟ್ ಸಿನಿಮಾವನ್ನು ‘ವೃದ್ಧಿ ಸಿನಿಮಾಸ್’ ಬ್ಯಾನರ್ ಅಡಿಯಲ್ಲಿ ವೆಂಕಟ ಸತೀಶ್ ಕಿಲಾರು ನಿರ್ಮಿಸುತ್ತಿದ್ದು, ಎಸ್‌ಎಸ್‌ ಥಮನ್ ಸಂಗೀತ ನೀಡುತ್ತಿದ್ದಾರೆ. ನಟಿ ಕಾಜಲ್ ಅಗರ್ವಾಲ್ ನಾಯಕಿಯಾಗಿ ನಟಿಸುತ್ತಿರುವ ಈ ಚಿತ್ರವನ್ನು 2026ರ ಡಿಸೆಂಬರ್ 24ರಂದು ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಅದ್ಧೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸಿದೆ.

ಹಿಂದೆ ‘ವೀರಸಿಂಹ ರೆಡ್ಡಿ’ಯಂತಹ ಬ್ಲಾಕ್‌ಬಸ್ಟರ್ ನೀಡಿದ್ದ ಬಾಲಯ್ಯ-ಗೋಪಿಚಂದ್ ಕಾಂಬಿನೇಷನ್ ಮೇಲೆ ಭಾರಿ ನಿರೀಕ್ಷೆಗಳಿದ್ದು, ನೆಚ್ಚಿನ ನಟ ಶೀಘ್ರವೇ ಚೇತರಿಸಿಕೊಂಡು ಶೂಟಿಂಗ್‌ಗೆ ಮರಳಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

 

TAGGED:#Nandamuri balakrishna #shooting injured #news #newsics
Share This Article
Facebook Twitter Copy Link Print
Previous Article Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ
Next Article NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?