newsics.com | ನ್ಯೂಸಿಕ್ಸ್
ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಜಕ್ಕಬಾಳ ಗ್ರಾಮದ ಬಳಿ ಸಾರಿಗೆ ಬಸ್ನಲ್ಲಿ ವಿದ್ಯಾರ್ಥಿನಿಯರನ್ನು ಚುಡಾಯಿಸಿದ ಆರೋಪದ ಹಿನ್ನೆಲೆಯಲ್ಲಿ ಜಕ್ಕಬಾಳ ಮತ್ತು ಬಸರಗಿ ಗ್ರಾಮದ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿದೆ.
ಕಾಲೇಜು ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಒಂದೇ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ನಡುವೆ ಈ ಘರ್ಷಣೆ ನಡೆದಿದೆ.
ಜಕ್ಕಬಾಳ ಗ್ರಾಮದ ಕೆಲ ಯುವಕರು ಬಸರಗಿ ಗ್ರಾಮದ ವಿದ್ಯಾರ್ಥಿನಿಯರನ್ನು ಚುಡಾಯಿಸಿದ್ದಾರೆ ಎನ್ನಲಾಗಿದ್ದು, ಇದರಿಂದ ಆರಂಭವಾದ ಮಾತಿನ ಚಕಮಕಿ ಬಳಿಕ ತೀವ್ರ ವಾಗ್ವಾದಕ್ಕೆ ತಿರುಗಿದೆ. ನಂತರ ಬಸ್ನಿಂದ ಕೆಳಗಿಳಿದ ವಿದ್ಯಾರ್ಥಿಗಳು ನಡುರಸ್ತೆಯಲ್ಲೇ ಪರಸ್ಪರ ಬೆಲ್ಟ್ ಹಾಗೂ ಕೈಗಳಿಂದ ಹಲ್ಲೆ ನಡೆಸಿದ್ದಾರೆ. ಘಟನೆಯನ್ನು ಕಂಡ ಸಾರ್ವಜನಿಕರು ಆತಂಕಗೊಂಡಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಸಮಾಧಾನಪಡಿಸಿದರು. ಸವದತ್ತಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.
ಈ ಘಟನೆ ಬಸ್ಗಳಲ್ಲಿ ವಿದ್ಯಾರ್ಥಿನಿಯರ ಸುರಕ್ಷತೆ ಕುರಿತು ಮತ್ತೆ ಆತಂಕ ಮೂಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು
Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್ನಿಂದ ಬಯಲಾಯ್ತು ಕೊ*ಲೆ ರಹಸ್ಯ
Strange marriage ಒಬ್ಬನನ್ನೇ ಮದುವೆಯಾದ ಮೂವರು ಸಹೋದರಿಯರು! ಯಾಕೆ ಹೀಗೆ? ವಿಡಿಯೋ ನೋಡಿ
Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!