Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > NEET Love Story ನೀಟ್ ಪ್ರತಿಭಟನೆಯಲ್ಲರಳಿದ ಪ್ರೀತಿ; ದೆಹಲಿ ವಿದ್ಯಾರ್ಥಿನಿ ಮದುವೆಯಾದ ಬಿಹಾರ ಯುವಕ! ವಿಡಿಯೋ ನೋಡಿ
ದೇಶಪ್ರಮುಖವೈರಲ್

NEET Love Story ನೀಟ್ ಪ್ರತಿಭಟನೆಯಲ್ಲರಳಿದ ಪ್ರೀತಿ; ದೆಹಲಿ ವಿದ್ಯಾರ್ಥಿನಿ ಮದುವೆಯಾದ ಬಿಹಾರ ಯುವಕ! ವಿಡಿಯೋ ನೋಡಿ

Share
3 Min Read
SHARE

newsics.com| ನ್ಯೂಸಿಕ್ಸ್

ನೀಟ್​​ ಪ್ರಶ್ನೆಪತ್ರಿಕೆ ಸೋರಿಕೆಗೆ ಸರ್ಕಾರ ಹೊಣೆ ಹೊತ್ತಿಕೊಳ್ಳಬೇಕೆಂದು ಹೋರಾಟ ನಡೆಸಲು ದೇಶಾದ್ಯಂತದ ಸಾವಿರಾರು ವಿದ್ಯಾರ್ಥಿಗಳು ದೆಹಲಿಯ ಜಂತರ್ ಮಂತರ್​​ಗೆ ಬಂದಿದ್ದರು. ಕೇವಲ ಹುಡುಗರು ಮಾತ್ರವಲ್ಲ, ಈ ಹೋರಾಟಕ್ಕೆ ಸಾವಿರಾರು ಸಂಖ್ಯೆಯಲ್ಲಿ ಹುಡುಗಿಯರು ನೆರೆದಿದ್ದರು. ಆದರೆ ಈ ಪ್ರತಿಭಟನೆಯಲ್ಲಿ ಸಿನಿಮಾವನ್ನೇ ಮೀರಿಸುವ ಲವ್​ಸ್ಟೋರಿ ಸಾಕಷ್ಟು ಸದ್ದು ಮಾಡುತ್ತಿದೆ.

ಪ್ರತಿಭಟನೆಗೆಂದು ಬಂದ ಯುವಕ-ಯುವತಿ ಪರಸ್ಪರ ಪ್ರೀತಿಯಲ್ಲಿ ಬಿದ್ದು, ಮದುವೆಯಾಗಿ ಮನೆಗೆ ಮರಳಿದ್ದಾರೆ. ಈ ಲವ್​​ ಸ್ಟೋರಿ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.

ನೀಟ್ ಪತ್ರಿಕೆ ಸೋರಿಕೆ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಿಹಾರದ ಯುವಕನೊಬ್ಬ ದೆಹಲಿಯ ವಿದ್ಯಾರ್ಥಿನಿಯನ್ನು ಭೇಟಿಯಾಗಿದ್ದಾನೆ. ಈ ಭೇಟಿ ಕೆಲವೇ ದಿನಗಳಲ್ಲಿ ಈ ಸ್ನೇಹಕ್ಕೆ, ನಂತರ ಪ್ರೀತಿಯಾಗಿ ಬದಲಾಗಿದೆ. ಕೊನೆಗೆ, ಇಬ್ಬರೂ ದೇವಸ್ಥಾನಕ್ಕೆ ಹೋಗಿ ಮದುವೆಯಾಗಿದ್ದಾರೆ ಎಂದು ಎನ್​ಡಿಟಿವಿ ಮರಾಠಿ ವರದಿ ಮಾಡಿದೆ.

ಊಟದಿಂದ ಪ್ರೀತಿಯ ಬಲೆಗೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಹಲವು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಬಿಹಾರದ ಮೋಹನ್ ಶ್ರೀವಾಸ್ತವ ಎಂಬ ಯುವಕ ಭಾಗವಹಿಸಿದ್ದರು. ಪ್ರತಿಭಟನಾ ಸ್ಥಳದಲ್ಲಿ ಸಾಕಷ್ಟು ಆಹಾರ ಮತ್ತು ನೀರಿನ ಸೌಲಭ್ಯಗಳ ಕೊರತೆಯಿಂದಾಗಿ ಅನೇಕ ವಿದ್ಯಾರ್ಥಿಗಳು ತೊಂದರೆ ಎದುರಿಸುತ್ತಿದ್ದರು. ಹಸಿವಿನಿಂದ ಕಂಗೆಟ್ಟಿದ್ದ ಮೋಹನ್​​ಗೆ ದೆಹಲಿಯ ವಿದ್ಯಾರ್ಥಿನಿಯೊಬ್ಬಳು ತಾನು ತಂದಿದ್ದ ಊಟವನ್ನು ಹಂಚಿಕೊಂಡಿದ್ದಾಳೆ. ನಂತರ ಆಕೆ ಮೋಹನ್​ಗಾಗಿ ಪ್ರತಿದಿನ ಊಟ ತರಲು ಶುರು ಮಾಡಿದ್ದಾಳೆ.

ಇದು ಹಲವು ದಿನಗಳ ಕಾಲ ಮುಂದುವರಿದಿದೆ. ಒಂದು ದಿನ ಮೋಹನ್ ಆ ವಿದ್ಯಾರ್ಥಿನಿಗೆ ತಮಾಷೆಯಾಗಿ, “ಬರೀ ತಿನ್ನಲು ಮಾತ್ರ ಕೊಡುತ್ತಿದ್ದೀರಾ? ಕುಡಿಯಲು ನೀರು ಯಾರು ಕೊಡುತ್ತಾರೆ?” ಎಂದು ಕೇಳಿದನಂತೆ. ಅದಕ್ಕೆ ಆ ಯುವತಿ ಮಾರನೆಯ ದಿನ ಅವನಿಗೆ ನೀರನ್ನೂ ತಂದುಕೊಟ್ಟಿದ್ದಾರೆ. ನಂತರ ಅವರಿಬ್ಬರ ನಡುವೆ ಒಳ್ಳೆಯ ಸ್ನೇಹ ಬೆಳೆಯಿತು. ಇಬ್ಬರ ನಡುವಿನ ಸಂಭಾಷಣೆ ಹೆಚ್ಚಾಗಿದೆ. ವಿಶೇಷ ಏನೆಂದರೆ, ಆ ಯುವತಿ ‘ನೀಟ್’ (NEET) ಪರೀಕ್ಷೆ ಬರೆದಿದ್ದಳು. ಪ್ರಶ್ನೆಪತ್ರಿಕೆ ಸೋರಿಕೆಯಾದ ಕಾರಣ ಆಕೆಯೂ ಸಹ ಈ ಹೋರಾಟದಲ್ಲಿ ಭಾಗವಹಿಸಿದ್ದಳು. ಯುವತಿ ದೆಹಲಿಯ ನಿವಾಸಿಯಾಗಿದ್ದಾಳೆ.

ಗಾಢ ಪ್ರೀತಿಗೆ ಕಾರಣವಾಯ್ತು ಲಾಠಿ ಚಾರ್ಜ್!​ 

ಆದರೆ ನಂತರ ಒಂದು ಟ್ವಿಸ್ಟ್ ಎದುರಾಯಿತು. ಪ್ರತಿಭಟನೆಯ ಸಮಯದಲ್ಲಿ, ಪೊಲೀಸರು ಲಾಠಿಚಾರ್ಜ್ ಮಾಡಿದರು. ಇದರಲ್ಲಿ ಮೋಹನ್ ತಲೆಗೆ ಪೆಟ್ಟುಬಿದ್ದು ಗಾಯಗೊಂಡಿದ್ದಾರೆ. ಪೊಲೀಸರ ಏಟಿನಿಂದ ಮೋಹನ್ ಅದೇ ಸ್ಥಳದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಆ ವಿದ್ಯಾರ್ಥಿನಿ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾಳೆ. ಚಿಕಿತ್ಸೆಯ ಸಮಯದಲ್ಲಿ ಆ ಹುಡುಗಿಯೇ ಮೋಹನ್​​ನನ್ನು ನೋಡಿಕೊಂಡಳು. ಮೋಹನ್ ಪ್ರಜ್ಞೆ ಮರಳಿದ ನಂತರ, ವಿದ್ಯಾರ್ಥಿನಿಯೇ ಮೊದಲು ತನ್ನ ಮನಸ್ಸಿನಲ್ಲಿದ್ದ ಪ್ರೇಮವನ್ನು ವ್ಯಕ್ತಪಡಿಸಿದ್ದಾಳೆ. “ನೀನಿಲ್ಲದೆ ನಾನು ಬದುಕಲು ಸಾಧ್ಯವಿಲ್ಲ” ಎಂದು ಹೇಳಿದ್ದಾಳೆ. ಅದಕ್ಕೆ ಮೋಹನ್ ಕೂಡ, “ನಾನು ನಿನ್ನನ್ನು ಪ್ರೀತಿಸುತ್ತಿದ್ದೆ, ಆದರೆ ಹೇಳಲು ಹೆದರುತ್ತಿದ್ದೆ” ಎಂದು ಹೇಳಿದ್ದಾನೆ.

ದೇವಾಲಯದಲ್ಲಿ ವಿವಾಹ

ಆದರೆ ಈಗ ಮುಂದೆ ಏನು ಮಾಡುವುದು ಎಂಬ ಪ್ರಶ್ನೆ ಎದುರಾಗಿತ್ತು. ಇಬ್ಬರೂ ಸಮಯ ವ್ಯರ್ಥ ಮಾಡದೆ ದೇವಸ್ಥಾನಕ್ಕೆ ಹೋಗಿ ಮದುವೆಯಾಗಿದ್ದಾರೆ. ನಂತರ ಮೋಹನ್ ಅವಳನ್ನು ಕರೆದುಕೊಂಡು ಬಿಹಾರಕ್ಕೆ ಬಂದಿದ್ದಾನೆ. ಮನೆಯಿಂದ ಹೊರಡುವಾಗ ಅವನು ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಪಡೆಯಲು ಹೊರಟಿದ್ದ. ಆದರೆ ಹಿಂತಿರುಗಿ ಬರುವಾಗ ಮನೆಗೆ ಸೊಸೆಯನ್ನು (ವಧುವನ್ನು) ಕರೆದುಕೊಂಡು ಬಂದಿದ್ದನ್ನು ಕಂಡು ಕುಟುಂಬ ಮತ್ತು ನೆರೆಹೊರೆಯವರೆಲ್ಲಾ ಮೂಕವಿಸ್ಮಿತರಾಗಿದ್ದಾರೆ. ಜೆನ್-ಜಿ (Gen-Z) ಕಾಲದಲ್ಲಿ ಮಾತ್ರ ಇಂತಹದ್ದೆಲ್ಲಾ ನಡೆಯಲು ಸಾಧ್ಯ. ಈ ಲವ್​ಸ್ಟೋರಿಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

ಈ ಲವ್​ ಸ್ಟೋರಿ ಬಗ್ಗೆ ಕೇಳಿದಾಗ, ವಿದ್ಯಾರ್ಥಿನಿ, “ಪ್ರೀತಿಗೆ ಯಾವುದೇ ಯೋಜನೆ ಎಂಬುದು​ ಇರುವುದಿಲ್ಲ. ಅದು ಎಲ್ಲಿ, ಯಾವಾಗ ಮತ್ತು ಹೇಗೆ ಸಂಭವಿಸುತ್ತದೆ ಎಂದು ನೀವು ಹೇಳಲು ಸಾಧ್ಯವಿಲ್ಲ” ಎಂದು ಹೇಳಿದ್ದಾಳೆ.

 

This could be a prank from Bihar. But it ends so authentically with a question, that is so steeped in reality. pic.twitter.com/t1EBCziYhy

— Smita Prakash (@smitaprakash) July 26, 2026

Commonwealth Games 2026: ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿಯ ಪದಕ ತಂದುಕೊಟ್ಟ ಜ್ಞಾನೇಶ್ವರಿ ಯಾದವ್

TAGGED:Love blossoms during NEET protests; Bihar youth marries Delhi student! Watch video
Share This Article
Facebook Twitter Copy Link Print
Previous Article Peenya Flyover ಪೀಣ್ಯ ಫ್ಲೈಓವರ್ ಮೇಲೆ ರಾತ್ರಿ ವೇಳೆ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗದ ವಿವರ ಇಲ್ಲಿದೆ
Next Article Se*xual harassment ನೀಟ್ ಹೋರಾಟದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ! ಹುಡುಗನಿಗೆ ಕಪಾಳಮೋಕ್ಷ ಮಾಡಿದ ಆಕೆ ಹೇಳಿದ್ದೇನು?

Popular Posts

Kapil Sibal ಸಿಜೆಪಿಯ ಕಾನೂನು ನೆರವು ನಿಧಿಗೆ ಕೋಟಿ ರೂ. ದೇಣಿಗೆ ನೀಡಿದ ಕಪಿಲ್ ಸಿಬಲ್!

2 Min Read

Soya chop ಸೋಯಾ ಚಾಪ್ ಹಿಟ್ಟಿನ ಮೇಲೆ ಅರೆಬೆತ್ತಲೆ ಉರುಳುಸೇವೆ!? ತಿನ್ನುವ ಮುನ್ನ ಈ ವಿಡಿಯೋ ನೋಡಿ

1 Min Read

Se*xual harassment ನೀಟ್ ಹೋರಾಟದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ! ಹುಡುಗನಿಗೆ ಕಪಾಳಮೋಕ್ಷ ಮಾಡಿದ ಆಕೆ ಹೇಳಿದ್ದೇನು?

1 Min Read

NEET Love Story ನೀಟ್ ಪ್ರತಿಭಟನೆಯಲ್ಲರಳಿದ ಪ್ರೀತಿ; ದೆಹಲಿ ವಿದ್ಯಾರ್ಥಿನಿ ಮದುವೆಯಾದ ಬಿಹಾರ ಯುವಕ! ವಿಡಿಯೋ ನೋಡಿ

3 Min Read

You Might Also Like

ಪ್ರಮುಖಕರ್ನಾಟಕ

Peenya Flyover ಪೀಣ್ಯ ಫ್ಲೈಓವರ್ ಮೇಲೆ ರಾತ್ರಿ ವೇಳೆ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗದ ವಿವರ ಇಲ್ಲಿದೆ

1 Min Read
ಪ್ರಮುಖದೇಶ

Rapido Ride Cancellation Fine ಸರ್ಕಾರದ ಹೊಸ ನಿಯಮ; ಕ್ಯಾಬ್ ರೈಡ್ ರದ್ದುಗೊಳಿಸಿದರೆ ಚಾಲಕರಿಗೆ ಭಾರಿ ದಂಡದ ಬಿಸಿ

2 Min Read
ಪ್ರಮುಖದೇಶ

Commonwealth Games 2026: ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿಯ ಪದಕ ತಂದುಕೊಟ್ಟ ಜ್ಞಾನೇಶ್ವರಿ ಯಾದವ್

1 Min Read
ಪ್ರಮುಖದೇಶ

Ram Mandir ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಎಸ್‌ಐಟಿ ನೇತೃತ್ವ ವಹಿಸಲಿರುವ ಐಪಿಎಸ್ ಅಧಿಕಾರಿ ಎಸ್. ಕಿರಣ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?