newsics.com
ಕಲಬುರಗಿ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ಹಲವು ಸೇತುವೆಗಳು ಹಾಗೂ ದೇವಸ್ಥಾನಗಳು ಜಲಾವೃತಗೊಂಡಿವೆ.
ಶುಕ್ರವಾರ ತಡರಾತ್ರಿಯಿಂದ ಪ್ರಾರಂಭವಾದ ಮಳೆ ಭಾನುವಾರ ಮಧ್ಯಾಹ್ನದವರೆಗೂ ಬಿಟ್ಟು ಬಿಡದೇ ಸುರಿಯುತ್ತಿದ್ದು, ಜಿಲ್ಲೆಯ ಚಿಂಚೋಳಿ ತಾಲೂಕಿನ ಪೋಲಕಪಲ್ಲಿ ಅಣವಾರ ಸಂಪರ್ಕ ಕಲ್ಪಿಸುವ ಸೇತುವೆ ಜಲಾವೃತವಾಗಿದೆ. ಜನರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.
ಜಿಲ್ಲೆಯ ಸೇಡಂ ತಾಲೂಕಿನ ಕಾಗಿಣಾ ನದಿ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಮಳಖೇಡದ ಉತ್ತರಾದಿಮಠ, ಜಯತೀರ್ಥರ ಮೂಲ ವೃಂದಾವನವು ಸಂಪೂರ್ಣ ಜಲಾವೃತವಾಗಿದೆ. ಕಾಗಿಣಾ ನದಿಯ ಸೇತುವೆ ಮೇಲಿಂದ ಹಾದುಹೋಗುವ ರಸ್ತೆ ಸಂಚಾರ ಸಂಪೂರ್ಣವಾಗಿ ಸ್ಥಗೀತವಾಗಿದೆ.
ಜಿಲ್ಲೆಯ ಚಿಂಚೋಳಿ ತಾಲೂಕಿನ ಬೆನಕನಳ್ಳಿ ಗ್ರಾಮದ ಅನೇಕ ಮನೆಗಳಿಗೆ ನೀರು ನುಗ್ಗಿದ್ದು, ಅದೇ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ಸುತ್ತಲೂ ಮಳೆಯ ನೀರು ಆವರಿಸಿಕೊಂಡಿದೆ.
ಅಪ್ರಾಪ್ತ ಬಾಲಕರು ಚುಡಾಯಿಸಿದ್ದರಿಂದ ನೊಂದ ಬಾಲಕಿ ನೇಣಿಗೆ ಶರಣು, ಗ್ರಾಮದಲ್ಲಿ ಬಿಗುವಿನ ವಾತಾವರಣ