newsics.com
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಿವೇಶನ ಹಂಚಿಕೆಯ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಜಿ ಮುಡಾ ಆಯುಕ್ತರ ವಿರುದ್ಧ ಲೋಕಾಯುಕ್ತ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ಲಿಖಿತ ದೂರು ನೀಡಿದೆ.
ಮೈಸೂರಿನ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಟಿ.ಎಸ್. ಶ್ರೀವತ್ಸ ಅವರು ಈ ದೂರು ನೀಡಿದ್ದು, ಮುಡಾ ಮಾಜಿ ಆಯುಕ್ತರಾದ ನಟೇಶ್, ದಿನೇಶ್ ಕುಮಾರ್ ವಿರುದ್ಧ ಕ್ರಮ ಜೈಗೊಳ್ಳುವಂತೆ ಲೋಕಾಯುಕ್ತ ಪೊಲೀಸ್ ಮಹಾನಿರ್ದೇಶಕರನ್ನು ಆಗ್ರಹಿಸಿದ್ದಾರೆ.
ಬದಲಿ ನಿವೇಶನ ಹಂಚಿಕೆಯ ಬಹುಕೋಟಿ ಹಗರಣದಲ್ಲಿ ಮುಡಾದ ಈ ಇಬ್ಬರು ಮಾಜಿ ಆಯುಕ್ತರು ಭಾಗಿಯಾಗಿದ್ದಾರೆ. ಕೂಡಲೇ ಈ ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.
https://www.newsics.com/2024/09/01/heavy-rain-in-kalaburagi-bridge-temple-submerged-life-disrupted-2/
ಅಪ್ರಾಪ್ತ ಬಾಲಕರು ಚುಡಾಯಿಸಿದ್ದರಿಂದ ನೊಂದ ಬಾಲಕಿ ನೇಣಿಗೆ ಶರಣು, ಗ್ರಾಮದಲ್ಲಿ ಬಿಗುವಿನ ವಾತಾವರಣ