newsics.com
ಬರ್ತ್ಡೇ ದಿನ ಮಧ್ಯರಾತ್ರಿ ಯಾರೂ ಮನೆಯ ಬಳಿ ಬರಬೇಡಿ’ ಎಂದು ಕಿಚ್ಚ ಸುದೀಪ್ ಅವರು ಇತ್ತೀಚೆಗೆ ಕೇಳಿಕೊಂಡಿದ್ದರು. ಆದರೆ, ಫ್ಯಾನ್ಸ್ ಇವರ ಮಾತನ್ನು ಕೇಳಿಲ್ಲ. ಬೆಂಗಳೂರಿನ ಜೆಪಿ ನಗರದಲ್ಲಿ ಇರುವ ಸುದೀಪ್ ಮನೆ ಸಮೀಪ ಫ್ಯಾನ್ಸ್ ನೆರೆದಿದ್ದಾರೆ. ಸುದೀಪ್ ಅವರು ಅನಿವಾರ್ಯವಾಗಿ ಮನೆಯ ಹೊರಗೆ ಬಂದಿದ್ದಾರೆ. ಅಭಿಮಾನಿಗಳತ್ತ ಅವರು ಕೈ ಬೀಸಿದ್ದಾರೆ.
ಕಿಚ್ಚ ಸುದೀಪ್ ಅವರ ಜನ್ಮದಿನದ ಪ್ರಯುಕ್ತ ಇಂದು ಬೆಂಗಳೂರಿನ ಜಯನಗರದಲ್ಲಿರುವ ಎಂಇಎಸ್ ಮೈದಾನದಲ್ಲಿ ಫ್ಯಾನ್ಸ್ ಭೇಟಿಗೆ ಸಮಯ ನಿಗದಿ ಆಗಿದೆ. ಕಿಚ್ಚ ಸುದೀಪ್ ಅವರನ್ನು ನೋಡಲು ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಫ್ಯಾನ್ಸ್ ನೆರೆದಿದ್ದರು. ಫ್ಯಾನ್ಸ್ಗೆ ವಿಶೇಷವಾಗಿ ಊಟದ ವ್ಯವಸ್ಥೆ ಕೂಡ ಮಾಡಲಾಗಿದೆ.