newsics.com
ಬೆಂಗಳೂರು: ಬೆಂಗಳೂರಿನ ರಾಜಾಜಿನಗರ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ.
ಕಳೆದ 4 ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಇಂದು ಮತ್ತಷ್ಟು ಅನಾರೋಗ್ಯಗೊಂಡಿರೋದ್ರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ ಅವರು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರೋ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಕೆಲ ದಿನಗಳಿಂದ ಬಹಳ ಆಯಾಸಗೊಂಡಿದ್ದ ಸುರೇಶ್ ಕುಮಾರ್ ಅವರು ಅಪರೂಪದ ಜ್ವರಕ್ಕೆ ತುತ್ತಾಗಿದ್ದಾರೆ ಎಂದು ತಿಳಿದುಬಂದಿದೆ.
ಮೈಸೂರು ಪಾದಯಾತ್ರೆ ಬಳಿಕ, ತಿರುಪತಿ ಪ್ರವಾಸ ಮಾಡಿದ್ದ ಸುರೇಶ್ ಕುಮಾರ್ಗೆ ಕಳೆದ ನಾಲ್ಕು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದೆ. ಅಪರೂಪದ ಮ್ಯೂಟೆಂಟ್ ಚಿಕನ್ ಗುನ್ಯಾ ಎಂದು ಹೇಳಲಾಗುತ್ತಿದೆ.
ಅಲ್ಲದೇ ಬ್ರೈನ್ ಮತ್ತು ಸ್ಪೈನಲ್ ಕಾರ್ಡ್ನಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಇದರಿಂದ ಸುರೇಶ್ ಕುಮಾರ್ ಮಾತನಾಡಲಾಗದೆ ತೀವ್ರ ಸುಸ್ತಾಗಿದ್ದಾರೆ.
ಅಪರೂಪದ ಮ್ಯೂಟೆಂಟ್ ಚಿಕನ್ ಗುನ್ಯಾದಿಂದ ಬಳಲುತ್ತಿರುವ ಸುರೇಶ್ ಕುಮಾರ್ಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದ್ದು, ನಾಲ್ಕೂವರೆ ಲಕ್ಷ ರೂಪಾಯಿಯ ನಾಲ್ಕು ಇಂಜೆಕ್ಷನ್ ನೀಡಲಾಗಿದೆ. ಇನ್ನೂ ಏಳು ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.
2023 ರ ವಿಧಾನಸಭೆ ಚುನಾವಣೆ: ಕುಣಿಗಲ್ ಶಾಸಕ ರಂಗನಾಥ್ ಆಯ್ಕೆ ಅಸಿಂಧು ಕೋರಿ ಸುಪ್ರೀಂಗೆ ಬಿಜೆಪಿ ಅರ್ಜಿ,ನೋಟಿಸ್ ಜಾರಿ