newsics.com
ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಶಾಲಾ ಬಸ್ ಮತ್ತು ರಾಜ್ಯ ರಸ್ತೆ ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೂವರ ಸ್ಥಿತಿ ಚಿಂತಾಜನಕವಾಗಿದೆ. 12 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಋತ್ವಿಕ್ ಹಾಗೂ ಮಂಜುನಾಥ ಮೃತ ವಿದ್ಯಾರ್ಥಿಗಳು. ಶಾಲಾ ವಾಹನದ ಚಾಲಕ ಬಲವಂತ್ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಿತಿ ಗಂಭೀರವಾಗಿದೆ.
ಓರ್ವ ವಿದ್ಯಾರ್ಥಿಯ ಎರಡೂ ಕಾಲುಗಳು ತುಂಡಾಗಿವೆ. ಇನ್ನೋರ್ವ ವಿದ್ಯಾರ್ಥಿಯ ಎಡಗಾಲು ತುಂಡಾಗಿದೆ.
ಗಾಯಗೊಂಡಿರುವ ಎಲ್ಲ ವಿದ್ಯಾರ್ಥಿಗಳನ್ನು ರಾಯಚೂರು ನಗರದ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿದ್ದ ಶೇಖರೆಹನ್, ಮದರಬಿ ಹಾಗೂ ಶಬನಾ ಎನ್ನುವ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವಜನರಲ್ಲಿ ಹೆಚ್ಚಿದ ಅಂಗಾಂಗ ವೈಫಲ್ಯ: ರಾಜ್ಯದಲ್ಲಿ ಕಿಡ್ನಿ, ಲಿವರ್ಗೆ ಭಾರೀ ಬೇಡಿಕೆ
ಈ ಪೋಟೋ ನೋಡಿದ್ರೆ ಕರುಳು ಚುರಕ್ ಎನ್ನುತ್ತೆ; ರೇಣುಕಾಸ್ವಾಮಿ ಅಂಗಲಾಚುತ್ತಿರುವ ಫೋಟೋ ವೈರಲ್