newsics.com
ಬೆಂಗಳೂರು: ಚಾರ್ಜ್ ಶೀಟ್ ಸಲ್ಲಿಕೆ ಆದ ಬಳಿಕ ಬಳ್ಳಾರಿ ಜೈಲಿನಲ್ಲಿ ದರ್ಶನ್ ಅವರನ್ನು ನೋಡಲು ವಿಜಯಲಕ್ಷ್ಮಿ ತೆರಳಿದ್ದಾರೆ.
ಗಂಡನಿಗೆ ಕೆಲವು ಅಗತ್ಯ ವಸ್ತುಗಳನ್ನು ಅವರು ನೀಡಿದ್ದಾರೆ. ಪತ್ನಿಯ ಭೇಟಿ ಬಳಿಕ ದರ್ಶನ್ ಅವರು ಸೈಲೆಂಟ್ ಆಗಿ ಬ್ಯಾಗ್ ಹಿಡಿದುಕೊಂಡು ಸೆಲ್ಗೆ ಮರಳಿದ್ದಾರೆ.
ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಅವರನ್ನ ಸಂಜೆ 4:30ಕ್ಕೆ ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ ತೂಗುದೀಪ ಹಾಗೂ ಸಂಬಂಧಿ ಭೇಟಿ ಮಾಡಿದರು. ಜೈಲಿನ ಒಳಗಿದ್ದ ದರ್ಶನ್ ಟೆನ್ಷನ್ನಲ್ಲಿಯೇ ತನ್ನವರನ್ನ ಭೇಟಿಯಾಗಲು ಬಂದರು. ಸಂಜೆ 4.30 ರಿಂದ 5.30 ವರೆಗೆ ದರ್ಶನ್ ಭೇಟಿಗೆ ಅಧಿಕಾರಿಗಳು ಅವಕಾಶ ನೀಡಿದ್ದರು. ಹೀಗಾಗಿ ಸರಿಯಾಗಿ 4:30ಕ್ಕೆ ಜೈಲಿಗೆ ಪತ್ನಿ, ಸಹೋದರ ಕಾರಿನಲ್ಲಿ ಆಗಮಿಸಿದ್ದರು.
ಸಂದರ್ಶಕರ ಕೊಠಡಿಯಲ್ಲಿ 25 ನಿಮಿಷ ದರ್ಶನ್ ಜೊತೆ ಮಾತನಾಡಿರುವ ಕುಟುಂಬಸ್ಥರು ಜಾರ್ಜ್ಶೀಟ್ಗೆ ಮಾಹಿತಿ ನೀಡಿದ್ದಾರೆ. ವಿಜಯಲಕ್ಷ್ಮಿ & ದಿನಕರ್ ತೂಗುದೀಪ ಅವರು 3991 ಪ್ರಕರಣದಲ್ಲಿ ಪುಟಗಳ ಜಾರ್ಜ್ಶೀಟ್ ಸಲ್ಲಿಕೆ ಆಗಿದೆ. 231 ಸಾಕ್ಷಿಗಳನ್ನ ಕಲೆ ಹಾಕಿದ್ದಾರೆ.