newsics.com
ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಾಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದರು.
ಕೋಲಾರ, ಚಿಕಗಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಬದುಕನ್ನೇ ಬದಲಾಯಿಸುವ ಈ ಮಹತ್ವಾಕಾಂಕ್ಷೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ ದೊರೆಯಿತು.
ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಚಿವರಾದ ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಸೇರಿ ಐದು ತಾಲ್ಲೂಕುಗಳ ಶಾಸಕರು, ಚುನಾಯಿತ ಪ್ರತಿನಿಧಿಗಳು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು.
ಸಕಲೇಶಪುರದ ಪಶ್ಚಿಮಘಟ್ಟದ 7 ಹೊಳೆಗಳಿಂದ 8 ಕಡೆ ಅಡ್ಡಗಟ್ಟೆಗಳನ್ನು ನಿರ್ಮಿಸಿ, ಬಯಲು ಸೀಮೆಯ 7 ಜಿಲ್ಲೆಗೆ ಹರಿಸಲಾಗುತ್ತಿದೆ. ಶಿಲಾನ್ಯಾಸ ನಡೆದು 10 ವರ್ಷಗಳ ನಂತರ ಶುಕ್ರವಾರ ಯೋಜನೆ ಉದ್ಘಾಟನೆಗೊಂಡಿದೆ.

ಕುಸಿದ ವೇದಿಕೆ:
ಉದ್ಘಾಟನಾ ಜಾಗದಲ್ಲಿ ಹರಿಯುವ ನೀರಿಗೆ ಬಾಗಿನ ಅರ್ಪಿಸಲು ಸಿದ್ಧತೆ ನಡೆಸಲಾಗಿತ್ತು. ಅದಕ್ಕಾಗಿ ಸಣ್ಣ ವೇದಿಕೆ ನಿರ್ಮಿಸಲಾಗಿತ್ತು. ಆ ವೇದಿಕೆ ಕಾರ್ಯಕ್ರಮ ಪ್ರಾರಂಭಕ್ಕೂ 30 ನಿಮಿಷಗಳ ಮೊದಲು ಕುಸಿದಿದೆ.
ಹೆಬ್ಬನಹಳ್ಳಿ ಬಳಿ ಇರುವ ಯೋಜನೆಯ ಡೆಲಿವರಿ ಚೇಂಬರ್ (ವಿತರಣಾ ತೊಟ್ಟಿ) 4 ರಲ್ಲಿ ಹರಿಯುವ ನೀರಿಗೆ ಬಾಗಿನ ಅರ್ಪಿಸಲು ಸಿದ್ಧತೆ ನಡೆಸಲಾಗಿತ್ತು. ಅದಕ್ಕಾಗಿ ಸಣ್ಣ ವೇದಿಕೆ ನಿರ್ಮಿಸಲಾಗಿತ್ತು. ಆ ವೇದಿಕೆಯು ಕಾರ್ಯಕ್ರಮ ಪ್ರಾರಂಭಕ್ಕೂ 30 ನಿಮಿಷಗಳ ಮೊದಲು ಕುಸಿದಿದೆ.
7 ಪತ್ರಕರ್ತರಿಗೆ ಗಾಯ:
ಈ ಮಧ್ಯೆ, ಉದ್ಘಾಟನಾ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಪತ್ರಕರ್ತರ ವಾಹನ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ಬ್ರೇಕ್ ಫೇಲ್ ಆಗಿ ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿಯಾದ ಘಟನೆ ನಡೆದಿದೆ.
ವಾರ್ತಾ ಇಲಾಖೆಯಲ್ಲಿ ಸೂಕ್ತ ವಾಹನ ಇಲ್ಲದೆ ಆರೋಗ್ಯ ಇಲಾಖೆಯಿಂದ ವಾಹನ ನೀಡಲಾಗಿತ್ತು. ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ರ ಬಳಿ ಈ ಘಟನೆ ನಡೆದಿದ್ದು, ಏಳು ಪತ್ರಕರ್ತರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಅಧಿಕಾರಿಗಳಿಗೆ ಸರ್ ಎಂದ ಸಚಿವರು, ಸಿಟ್ಟಾದ ಸಿದ್ದರಾಮಯ್ಯ! ಈ ವೇಳೆ ಸಿಎಂ ಕೊಟ್ಟ ಖಡಕ್ ಸೂಚನೆ ಏನು?