newsics.com
ತುಮಕೂರು: ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಬಳಿ ಭಾನುವಾರ ಸಂಭವಿಸಿದ ಕಾರುಗಳ ಮುಖಾಮುಖಿ ಡಿಕ್ಕಿಯಲ್ಲಿ ಮೃತಪಟ್ಟವರ ಸಂಖ್ಯೆ ಆರಕ್ಕೇರಿದೆ.
ಗೌರಿ ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದವರು ಕಾರಿನಲ್ಲಿ ಧವಸ ಧಾನ್ಯ, ಅಕ್ಕಿ, ಶೇಂಗಾ ಬೀಜ ಸೇರಿದಂತೆ ಹಲವು ಸಾಮಗ್ರಿಗಳನ್ನು ತುಂಬಿಕೊಂಡು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಆದರೆ ವಿಧಿ ಬೇರೆಯೇ ಇತ್ತು. ಮಾರ್ಗಮಧ್ಯೆ ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಒಟ್ಟು ಆರು ಜನರು ಸಾವನ್ನಪ್ಪಿದ್ದು ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಗ್ರಾಮದ ಬಳಿ ಘಟನೆ ನಡೆದಿದ್ದು ಅಪಘಾತ ನಡೆದ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಹಾಗೂ ಕೇಂದ್ರ ವಲಯ ಐಜಿಪಿ ಲಾಬೂರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಮಧ್ಯೆ, ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಹಾಗೂ ತಾಯಿ ಮೇಲೆ ಗಾರ್ಮೆಂಟ್ಸ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ.
ತಿಪಟೂರು ತಾಲ್ಲೂಕಿನ ಹುಚ್ಚನಹಟ್ಟಿ ರಾಮಶೆಟ್ಟಿಹಟ್ಟಿ ಬಳಿಯ ರಾಷ್ಠಿಯ ಹೆದ್ದಾರಿಯ ಬೈಪಾಸ್ ಬಳಿ ಸೋಮವಾರ ಈ ಘಟನೆ ನಡೆದಿದೆ.
ರಾಮಶೆಟ್ಟಿಹಳ್ಳಿ ಗ್ರಾಮದ ಕಮಲಮ್ಮ (45) ಹಳೇಪಾಳ್ಯ ಶಾಲೆಯಲ್ಲಿ 8 ನೆ ತರಗತಿ ವ್ಯಾಸಂಗ ಮಾಡುತ್ತಿರುವ ವೀಣಾ (13) ಮೃತಪಟ್ಟವರು.
ಪ್ರತಿ ನಿತ್ಯ ಈ ಬಾರಿ ಅಪಘಾತಗಳು ನಡೆಯುತ್ತಿರುವುದನ್ನು ಖಂಡಿಸಿ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಮೃತ ದೇಹವನ್ನು ತೆಗೆಯಲು ಬಿಡುವುದಿಲ್ಲ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ.