newsics.com
ನಟ ದರ್ಶನ್ ಅವರು ಸದ್ಯ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಜೈಲಿನಲ್ಲಿ ಇದ್ದಾರೆ. ಅವರಿಗೆ ಜಾಮೀನು ಸಿಗೋದು ದೂರದ ಮಾತಾಗಿದೆ. ಈಗ ದರ್ಶನ್ ಅವರನ್ನು ಪೆರೋಲ್ ಮೇಲೆ ಎರಡು ಗಂಟೆ ಹೊರಗೆ ತರೋ ಪ್ಲಾನ್ ನಡೆದಿದೆ ಎನ್ನುವ ವಿಚಾರ ರಿವೀಲ್ ಆಗಿದೆ. ಇದನ್ನು ಯಾರೋ ಮೂಲಗಳು ಹೇಳುತ್ತಿಲ್ಲ. ಸ್ವತಃ ಇದಕ್ಕೆ ಯೋಜನೆ ಮಾಡಿರೋ ನಿರ್ಮಾಪಕಿ ಶಿಲ್ಪಾ ಶ್ರೀನಿವಾಸ್ ಹೇಳಿದ್ದಾರೆ.
ಅಕ್ಟೋಬರ್ 22ರಂದು ಉಪೇಂದ್ರ ನಿರ್ದೇಶನ ಮಾಡಿದ್ದ ‘ಉಪೇಂದ್ರ’ ಚಿತ್ರಕ್ಕೆ 25 ವರ್ಷ ತುಂಬುತ್ತಿದೆ. ಈ ವಿಶೇಷ ದಿನವನ್ನು ಸಂಭ್ರಮಿಸಲು ಶಿಲ್ಪಾ ನಿರ್ಧರಿಸಿದ್ದಾರೆ. ಈ ಸಂದರ್ಭದಲ್ಲಿ ಸ್ಯಾಂಡಲ್ವುಡ್ನ ಉಪೇಂದ್ರ, ಸುದೀಪ್, ದರ್ಶನ್ ಸೇರಿ ಎಲ್ಲ ಸ್ಟಾರ್ಗಳನ್ನು ಒಂದೇ ವೇದಿಕೆಗೆ ಕರೆ ತರುವ ಪ್ಲಾನ್ ನಡೆದಿದೆ. ಇದಕ್ಕಾಗಿ ದರ್ಶನ್ ಅವರನ್ನು ಪೆರೋಲ್ ಮೇಲೆ ತರುವ ಆಲೋಚನೆ ಶಿಲ್ಪಾಗೆ ಇದೆ.
ಈ ಬಗ್ಗೆ ಮಾತನಾಡಿರುವ ಶಿಲ್ಪಾ, ‘ದರ್ಶನ್ ಅವರನ್ನು ಪೆರೋಲ್ ಮೇಲೆ ತರುವ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಲಾಯರ್ ಬಳಿ ಮಾತುಕತೆ ಮಾಡ್ತಿದ್ದೇನೆ. ಅದೆಷ್ಟು ಶುಲ್ಕ ಇದೆಯೋ ಅಷ್ಟು ಕೊಟ್ಟು ಕರೆ ತರುವ ಆಲೋಚನೆ ಇದೆ. ಅಂದಿನ ಕಾಲಕ್ಕೆ ದರ್ಶನ್ ಹಾಗೂ ವಿಜಯಲಕ್ಷ್ಮೀ ಮದುವೆಗೆ ಹೋದವರಲ್ಲಿ ನಾನು ಒಬ್ಬರು. ಅವತ್ತು ದರ್ಶನ್ ಜೊತೆ ಸಿನಿಮಾ ಮಾಡಲು ಅಡ್ವಾನ್ಸ್ ಕೊಟ್ಟಿದ್ದೆ. ಹೀಗಾಗಿ ನನಗೆ ಆಹ್ವಾನ ನೀಡಿದ್ದರು. ಹೀಗಾಗಿ ಮದುವೆಗೆ ಹೋಗಿ ಶುಭ ಹಾರೈಸಿ ಬಂದಿದ್ದೆ’ ಎಂದಿದ್ದಾರೆ.