newsics.com
ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆ ಉಪಟಳ ಮುಂದುವರಿದಿದ್ದು, ಗಜಪಡೆ ಹಿಂಡು ಹಿಂಡಾಗಿ ಗ್ರಾಮದೊಳಗೆ ಓಡಾಡಿರುವ ಘಟನೆ ಬೇಲೂರು ತಾಲ್ಲೂಕಿನ ಕೆಳಬಿಕ್ಕೋಡು ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಗ್ರಾಮಸ್ಥರು ಕಾಡಾನೆಗಳ ಹಿಂಡು ಕಂಡು ದಿಕ್ಕಪಾಲಾಗಿ ಓಡಿದ್ದಾರೆ. ಗ್ರಾಮದ ಸಮೀಪವೇ ಆನೆಮರಿಗಳ ಸಹಿತ ಸುಮಾರು ಇಪ್ಪತ್ತಕ್ಕೂ ಹೆಚ್ಚಿನ ಆನೆಗಳ ಗುಂಪು ಬೀಡುಬಿಟ್ಟಿವೆ.
ಆನೆಗಳು ಕಾಫಿ, ಜೋಳ, ಶುಂಠಿ, ಭತ್ತದ ಬೆಳೆಗಳನ್ನು ಸಂಪೂರ್ಣ ನಾಶ ಮಾಡಿವೆ. ಬೆಳೆ ಕಳೆದುಕೊಂಡು ಅನ್ನದಾತರು ಕಂಗಾಲಾಗಿದ್ದಾರೆ. ಸ್ಥಳದಲ್ಲೇ ಅರಣ್ಯ ಇಲಾಖೆ ಇಟಿಎಫ್ ಸಿಬ್ಬಂದಿ ಮೊಕ್ಕಾಂ ಹೂಡಿದ್ದು, ಕಾಡಾನೆಗಳನ್ನು ಅರಣ್ಯಕ್ಕೆ ಓಡಿಸಲು ಹರಸಾಹಸಪಡುತ್ತಿದ್ದಾರೆ.
ಪೊಲೀಸರೆದುರೇ ಮದ್ಯದ ಬಾಟಲ್ಗಳನ್ನು ದೋಚಿದ ಎಣ್ಣೆಪ್ರಿಯರು! ವೈರಲ್ ವಿಡಿಯೋ ನೋಡಿ