newsics.com
ಬೆಂಗಳೂರು: ಕೇಂದ್ರ ಸರ್ಕಾರದ ತೆರಿಗೆ ತಾರತಮ್ಯ ಖಂಡಿಸಿ ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳಿಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರದ ಅನ್ಯಾಯದ ತೆರಿಗೆ ಹಂಚಿಕೆ ಕುರಿತು ನಮ್ಮ ತೆರಿಗೆ ನಮ್ಮ ಹಕ್ಕು ಅಭಿಯಾನದಡಿ ಪತ್ರ ಬರೆದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಅನ್ಯಾಯದ ತೆರಿಗೆ ಹಂಚಿಕೆ ಕುರಿತು ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಮತ್ತು ಇತರೆ ತಲಾವಾರು ಜಿಎಸ್ಡಿಪಿ ಹೆಚ್ಚಿರುವ ರಾಜ್ಯಗಳು ತಮ್ಮ ಆರ್ಥಿಕ ಕಾರ್ಯಕ್ಷಮತೆಗಾಗಿ ದಂಡವನ್ನು ಅನುಭವಿಸುತ್ತಿವೆ, ಅಸಮಾನವಾಗಿ ಕಡಿಮೆ ತೆರಿಗೆ ಹಂಚಿಕೆಗಳನ್ನು ಪಡೆಯುತ್ತಿವೆ. ಈ ಅನ್ಯಾಯದ ನಡೆ ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತರುತ್ತೆ. ಪ್ರಗತಿಪರ ರಾಜ್ಯಗಳಿಗೆ ಆರ್ಥಿಕ ಸ್ವಾಯತ್ತತೆಗೆ ಧಕ್ಕೆ ತರುತ್ತೆ ಎಂದಿದ್ದಾರೆ