newsics.com
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಅವರು ಜೈಲಿನಲ್ಲಿದ್ದಾರೆ. ಇವರ ಜೊತೆ ಇನ್ನೂ 16 ಮಂದಿ ಕಂಬಿ ಎಣಿಸುತ್ತಿದ್ದಾರೆ. ದರ್ಶನ್ ಬಂಧನವಾಗಿ ಈಗಾಗಲೇ ಮೂರು ತಿಂಗಳುಗಳೇ ಕಳೆದು ಹೋಗಿವೆ. ಈವರೆಗೆ ದರ್ಶನ್ ಕಡೆಯಿಂದ ಜಾಮೀನಿಗೆ ಅರ್ಜಿ ಸಲ್ಲಿಕೆ ಆಗಿಲ್ಲ. ಇಂದು (ಸೆಪ್ಟೆಂಬರ್ 12) ಕೋರ್ಟ್ ಎದುರು ದರ್ಶನ್ ಅವರನ್ನು ಹಾಜರುಪಡಿಸಲಾಗುತ್ತಿದೆ. ಇಂದಿಗೆ ಅವರ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಳ್ಳಲಿದೆ.
ಸೆಪ್ಟೆಂಬರ್ 9ರಂದು ದರ್ಶನ್ ಅವರ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಂಡಿತ್ತು. ಹೀಗಾಗಿ, ಅವರನ್ನು ಕೋರ್ಟ್ ಎದುರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಗಿತ್ತು. ಈ ವೇಳೆ ಚಾರ್ಜ್ಶೀಟ್ ಪ್ರತಿಯನ್ನು ಆರೋಪಿ ಪರ ವಕೀಲರಿಗೆ ನೀಡಲಾಗಿತ್ತು. ಆ ಬಳಿಕ ಜಡ್ಜ್ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 12ರವರೆಗೆ ವಿಸ್ತರಣೆ ಮಾಡಿದ್ದರು.