newsics.com
ಕನ್ನಡ ಸೀರಿಯಲ್ ನಟ ವರುಣ್ ಆರಾಧ್ಯ ವಿರುದ್ಧ ಮಾಜಿ ಪ್ರೇಯಸಿ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡುವ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದರು.
ನಟ ವರುಣ್ ಆರಾಧ್ಯ ವಿರುದ್ಧ ಸೆ.7ರಂದು ಬೆಂಗಳೂರು ಪಶ್ಚಿಮ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿತ್ತು. ಸ್ವತಃ ಮಾಜಿ ಪ್ರೇಯಸಿ ವರ್ಷಾ ವರುಣ್ ಆರಾಧ್ಯ ವಿರುದ್ಧ ದೂರು ದಾಖಲಿಸಿದ್ದರು. ದಾಖಲಾಗಿರುವ ದೂರಿನಲ್ಲಿ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಹಾಕಿರುವ ಆರೋಪ ಮಾಡಿದ್ದರು. ಆದರೀಗ ಇನ್ಸ್ಟಾದಲ್ಲಿ ಪೋಸ್ಟ್ ಹಂಚಿಕೊಂಡಿರುವ ಆಕೆ ಇದು ಸುಳ್ಳು ಸುದ್ದಿ ಎಂದಿದ್ದಾರೆ.
ಇದೇ ವಿಚಾರವಾಗಿ ವರುಣ್ ಆರಾಧ್ಯ ಯುಟ್ಯೂಬ್ ಚಾನೆಲ್ನಲ್ಲಿ ವಿಡಿಯೋ ಶೇರ್ ಮಾಡಿದ್ದಾರೆ. ಬೆಂಗಳೂರು ಪಶ್ಚಿಮ ವಿಭಾಗ ಸೈಬರ್ ಕ್ತೈಂ ಎಸಿಪಿ ಉಷಾರಾಣಿ ಅವರ ಮುಂದೆ ಹೋಗಿ ನಮ್ಮ ಇಚ್ಛೆಯಂತೆ ಕುಳಿತು ಮಾತಾಡಿ ಸಮಸ್ಯೆಯನ್ನು ಬಗೆಹರಿಸಿಕೊಂಡು ನಮ್ಮ ನಮ್ಮ ಲೈಫ್ ಅನ್ನು ನಾವು ನೋಡಿಕೊಳ್ಳುತ್ತಿದ್ದೇವೆ. ಆದರೆ ಮೀಡಿಯಾದಲ್ಲಿ ಕೊಲೆ ಬೆದರಿಕೆ ಅಂತೆಲ್ಲ ಸುದ್ದಿ ಹರಿದಾಡುತ್ತಿದೆ. ಅಷ್ಟೇ ಯಾಕೆ ಆ ಯುವತಿ ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ನಮ್ಮ ಲೈಫ್ ಚೆನ್ನಾಗಿ ಇರಬೇಕು ಅಂತ ನಾವು ಮುಂದೆ ಹೋಗುತ್ತಿದ್ದೇವೆ. ಆದರೆ ನೀವೇ ನಮ್ಮ ಲೈಫ್ನಲ್ಲಿ ಕಲ್ಲು ಹಾಕುತ್ತಿದ್ದೀರಾ. ನಮ್ಮ ಮನೆಯಲ್ಲಿ ನಮ್ಮ ಕುಟುಂಬಸ್ಥರು ಇದನ್ನು ನೋಡಿ ನೊಂದು ಹೋಗಿದ್ದಾರೆ. ನನ್ನ ಒಳ್ಳೆ ತನವನ್ನು ಎಲ್ಲರೂ ಮಿಸ್ ಯೂಸ್ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಧ್ಯಮದವರ ವಿರುದ್ಧ ಆಕ್ರೋಶ ಹೊರಹಾಕುತ್ತ ಕಣ್ಣೀರಿಟ್ಟಿದ್ದಾರೆ.
ನಟ ವರುಣ್ ಆರಾಧ್ಯ ಕಣ್ಣೀರಿಟ್ಟಿದ್ದೇಕೆ?