Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಜಾಮೀನು
ದೇಶಪ್ರಮುಖ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಜಾಮೀನು

Share
1 Min Read
SHARE

newsics.com

ನವದೆಹಲಿ: ದೆಹಲಿ ಮದ್ಯನೀತಿ ಹಗರಣದಲ್ಲಿ ಜೈಲುಪಾಲಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

156 ದಿನಗಳ ನಂತರ ಸಿಎಂ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠ ಈ ತೀರ್ಪು ನೀಡಿದೆ.

ಜಾಮೀನು ನೀಡಿರುವ ಸುಪ್ರೀಂ‌ಕೋರ್ಟ್ ಕೇಜ್ರಿವಾಲ್‌ಗೆ ಕೆಲವು ಷರತ್ತುಗಳನ್ನು ವಿಧಿಸಿದೆ. 10 ಲಕ್ಷ ರೂ.ಗಳ ಜಾಮೀನು ಬಾಂಡ್‌ ನೀಡಬೇಕು.
ದೆಹಲಿ ಮದ್ಯ ನೀತಿ ಪ್ರಕರಣದ ಬಗ್ಗೆ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಬಾರದು.
ತನಿಖಾಧಿಕಾರಿಗಳು ಕರೆದಾಗ ದೆಹಲಿ ಮುಖ್ಯಮಂತ್ರಿ ವಿಚಾರಣೆಗೆ ಹಾಜರಾಗಬೇಕಾಗುತ್ತದೆ.
ಜಾಮೀನಿನ ಮೇಲೆ ಹೊರಗಿರುವಾಗ ಕೇಜ್ರಿವಾಲ್ ಮುಖ್ಯಮಂತ್ರಿ ಕಚೇರಿ ಅಥವಾ ದೆಹಲಿ ಸಚಿವಾಲಯವನ್ನು ಪ್ರವೇಶಿಸುವಂತಿಲ್ಲ.
ಅವರು ಅಧಿಕೃತ ಫೈಲ್ ಗಳಿಗೆ ಸಹಿ ಮಾಡಲು ಸಾಧ್ಯವಿಲ್ಲ.
ಜೈಲಿನಲ್ಲಿ ಕೇಜ್ರಿವಾಲ್ ಒಟ್ಟು 177 ದಿನಗಳಿದ್ದು, ಅದರಲ್ಲಿ 21 ದಿನಗಳನ್ನು ಕಳೆದರೆ ಕೇಜ್ರಿವಾಲ್ ಒಟ್ಟು 156 ದಿನಗಳ ಕಾಲ ಜೈಲಿನಲ್ಲಿದ್ದರು.

ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿತ್ತು. 10 ದಿನಗಳ ವಿಚಾರಣೆಯ ನಂತರ ಅವರನ್ನು ಏಪ್ರಿಲ್ 1 ರಂದು ತಿಹಾರ್ ಜೈಲಿಗೆ ಕಳುಹಿಸಲಾಯಿತು. ಮೇ 10 ರಂದು, ಅವರನ್ನು ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಚಾರಕ್ಕಾಗಿ 21 ದಿನಗಳ ಕಾಲ ಬಿಡುಗಡೆ ಮಾಡಲಾಗಿತ್ತು

ಜಾಮೀನಿಗಾಗಿ ಕೇಜ್ರಿವಾಲ್ ಅವರು ನೇರವಾಗಿ ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ನಂತರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ರದ್ದಾದ ದೆಹಲಿ ಅಬಕಾರಿ ನೀತಿ 2021-22 ರಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಸಿಎಂ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು. ಜೂನ್ 26 ರಂದು ಅಬಕಾರಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿದ್ದಾಗ ಸಿಬಿಐ ಅವರನ್ನು ಬಂಧಿಸಿತ್ತು.

ಇಡಿ ಪ್ರಕಾರ, ಅಬಕಾರಿ ನೀತಿಯನ್ನು ಅಂತಿಮಗೊಳಿಸಲು ಕೇಜ್ರಿವಾಲ್ ನೇತೃತ್ವದ ಎಎಪಿ 100 ಕೋಟಿಗಳಷ್ಟು ಕಿಕ್‌ಬ್ಯಾಕ್ ಪಡೆದಿದೆ. ಈ ಹಣದ ದೊಡ್ಡ ಭಾಗವನ್ನು ಪಕ್ಷವು ತನ್ನ ಗೋವಾ ಚುನಾವಣಾ ಪ್ರಚಾರದಲ್ಲಿ ಬಳಸಿಕೊಂಡಿದೆ ಎಂದು ಆರೋಪಿಸಲಾಗಿದೆ.

ಬೆಂಗಳೂರಿನಲ್ಲಿ ಮಂಕಿಪಾಕ್ಸ್ ಕಟ್ಟೆಚ್ಚರ: ವಿಮಾನ ನಿಲ್ದಾಣದಲ್ಲಿ ಶಂಕಿತರ ಟೆಸ್ಟಿಂಗ್

TAGGED:Supreme Bail to Delhi CM Arvind Kejriwal
Share This Article
Facebook Twitter Copy Link Print
Previous Article ಭಾರತದ ಪ್ರತಿಷ್ಠಿತ ಉದ್ಯಮಿಯ ಬ್ಯಾಂಕ್ ಅಕೌಂಟ್ ಸೀಜ್!
Next Article ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್! ಬೇರೆಡೆ ಶಿಫ್ಟ್‌ಗೆ ಬೇಡಿಕೆ

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?