newsics.com
ನವದೆಹಲಿ: ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್ ಟೇಕ್ ಆಫ್ ಆಗದ್ದರಿಂದ ಪ್ರಧಾನಿ ನರೇಂದ್ರ ಮೋದಿಯವರು ರಸ್ತೆ ಮಾರ್ಗವಾಗಿಯೇ ಜೆಮ್ಶೆಡ್ಪುರಕ್ಕೆ ತೆರಳಿದ ಘಟನೆ ನಡೆದಿದೆ.
ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ ಟೇಕಾಫ್ ಆಗದ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಂಚಿ ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಜೆಮ್ಶೆಡ್ಪುರಕ್ಕೆ ತೆರಳಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಂಚಿಯ ಬಿರ್ಸಾ ಮುಂಡಾ ವಿಮಾನ ನಿಲ್ದಾಣದಿಂದ ಜೆಮ್ಶೆಡ್ಪುರದ ಗೋಪಾಲ್ ಮೈದಾನ ಸುಮಾರು 126 ಕಿ.ಮೀ ದೂರವಿದೆ. ಗೋಪಾಲ್ ಮೈದಾನದಲ್ಲಿ ಅವರು ಬಿಜೆಪಿಯ ‘ಪರಿವರ್ತನ್ ಮಹಾ ರ್ಯಾಲಿ’ಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎನ್ನಲಾಗಿದೆ.
ಈ ವರ್ಷಾಂತ್ಯದಲ್ಲಿ 81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಗೆ ನಡೆಯುವ ಚುನಾವಣೆಯ ದೃಷ್ಟಿಯಿಂದ ಪ್ರಧಾನಿ ಮೋದಿ ಅವರ ಈ ಭೇಟಿ ಮಹತ್ವ ಪಡೆದುಕೊಂಡಿದೆ.
ಬುಡಕಟ್ಟು ಪ್ರಾಬಲ್ಯವಿರುವ 9 ಕ್ಷೇತ್ರಗಳು ಸೇರಿದಂತೆ 14 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಕೊಲ್ಹಾನ್ ಪ್ರದೇಶಕ್ಕೆ ಮೋದಿ ಅವರು ಭೇಟಿ ನೀಡಲಿದ್ದಾರೆ.
ಜೆಎಂಎಂ ಪಕ್ಷ ತೊರೆದು ಬಿಜೆಪಿ ಸೇರಿದ್ದ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು ಇದೇ ಪ್ರದೇಶದಿಂದ ಬಂದಿರುವುದರಿಂದ, ಮೋದಿ ಅವರ ಈ ಭೇಟಿ ಮತ್ತಷ್ಟು ಪ್ರಾಮುಖ್ಯತೆ ಪಡೆದಿದೆ.
ಬೆಂಗಳೂರಿನಿಂದ ಹೊರಟಿದ್ದ ಯುವಕ ನಿಫಾ ವೈರಸ್ಗೆ ಬಲಿ, ಎಲ್ಲೆಡೆ ಹೆಚ್ಚಿದ ಆತಂಕ