newsics.com
ಕೊಪ್ಪಳ: ದಶಕದ ನಂತರ ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಿಗದಿಯಾಗಿದೆ.
ಕ ಈ ಹಿಂದೆ ಕಲಬುರಗಿಯಲ್ಲಿ ಬಿಜೆಪಿ ಸರ್ಕಾರ ನಾಲ್ಕು ಬಾರಿ, ಸಿದ್ದರಾಮಯ್ಯ ಸರ್ಕಾರ ಒಂದು ಬಾರಿ ಸೇರಿದಂತೆ ಒಟ್ಟು ಆರು ಬಾರಿ ಸಚಿವ ಸಂಪುಟ ಸಭೆಗಳು ನಡೆದಿದ್ದವು. ಪ್ರತಿ ಸಚಿವ ಸಂಪುಟದಲ್ಲೂ ಕಲ್ಯಾಣ ಕರ್ನಾಟಕಕ್ಕೆ ಸಾವಿರಾರು ಕೋಟಿ ರೂಪಾಯಿ ಯೋಜನೆಗಳನ್ನು ಜಾರಿಗೊಳಿಸವುದಾಗಿ ನಿರ್ಣಯ ಕೈಗೊಳ್ಳಲಾಗಿತ್ತು. ಘೋಷಣೆಗಳನ್ನೂ ಮಾಡಲಾಗಿತ್ತು. ಖಾಲಿಯಿರುವ ಹುದ್ದೆಗಳ ಭರ್ತಿ ಮಾಡುವ ಆಶ್ವಾಸನೆ ನೀಡಲಾಗಿತ್ತು. ಆದರೆ, ಆಶ್ವಾಸನೆಗಳಲ್ಲಿ ಈಡೇರಿದ್ದು ಮಾತ್ರ ಅಲ್ಪಸ್ವಲ್ಪ. ಹೀಗಾಗಿ ಕಾಟಾಚಾರಕ್ಕೆ ಮಾತ್ರ ಸಚಿವ ಸಂಪುಟ ಸಭೆ ನಡೆಸಬಾರದು, ಸಭೆಯ ನಿರ್ಣಯಗಳು ಜಾರಿಯಾಗಬೇಕು ಎಂಬುದು ಕಲ್ಯಾಣ ಕರ್ನಾಟಕ ಭಾಗದ ಜನರ ಆಗ್ರಹವಾಗಿದೆ. ಒಟ್ಟಾರೆ, ಕೇವಲ ಸಚಿವ ಸಂಪುಟ ಸಭೆಯಿಂದ ಆ ಭಾಗದ ಅಭಿವೃದ್ದಿಯಾಗುತ್ತದೆಯೇ ಎಂಬುದೇ ಸದ್ಯದ ಪ್ರಶ್ನೆ.