newsics.com
ಮಲಯಾಳಂ ಚಿತ್ರರಂಗದಲ್ಲಿ ಹೇಮಾ ಸಮಿತಿ ವರದಿ ಸಾಕಷ್ಟು ಸಂಚಲನ ಸೃಷ್ಟಿ ಮಾಡಿದೆ. ಈ ಸಮಿತಿ ಸಾಕಷ್ಟು ವಿಚಾರಗಳನ್ನು ರಿವೀಲ್ ಮಾಡಿದೆ. ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರಿಗೆ ಆಗುತ್ತಿರುವ ಕಿರುಕುಳದ ಬಗ್ಗೆ ವಿವರಣೆ ನೀಡಲಾಗಿದೆ. ಅದೇ ರೀತಿ ಕನ್ನಡದಲ್ಲೂ ಒಂದು ಸಮಿತಿ ಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ.
ಇದಕ್ಕೆ ಸಂಬಂಧಿಸಿದಂತೆ ಇಂದು (ಸೆಪ್ಟೆಂಬರ್ 16) ಸಭೆ ಕರೆಯಲಾಗಿದೆ. ಈ ಸಭೆಗೆ ರಾಕ್ಲೈನ್ ವೆಂಕಟೇಶ್ ಅವರ ನೇತೃತ್ವ ಇತ್ತು. ಸಭೆಯ ನಂತರ ಸುದ್ದಿಗೋಷ್ಠಿ ನೀಡಿ ಮಾಹಿತಿ ನೀಡಲಾಗಿದೆ.
ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಮಾತನಾಡಿದ್ದಾರೆ. ‘ಚಿತ್ರರಂಗಕ್ಕೆ ಹೆಣ್ಣು ಮಕ್ಕಳು ಬರುತ್ತಾರೆ ಎಂದರೆ ತಂದೆ-ತಾಯಿ ಸುಲಭದಲ್ಲಿ ಕಳುಹಿಸಬೇಕು. ಆ ರೀತಿ ಚಿತ್ರರಂಗ ಆಗಬೇಕು. ಎಲ್ಲರೂ ಡಾಕ್ಟರ್ ಆಗಿ, ಇಂಜಿನಿತರ್ ಆಗಿ ಎನ್ನುತ್ತಾರೆ. ಆದರೆ, ಕೆಲವೇ ಕೆಲವರು ಮಾತ್ರ ನಟನೆಗೆ ಹೋಗಿ ಎಂದು ಹೇಳುತ್ತಾರೆ. ಚಿತ್ರರಂಗದಲ್ಲಿ ಹೆಣ್ಣುಮಕ್ಕಳು ಸುರಕ್ಷಿತವಾಗಿ ಇರ್ತಾರಾ ಎಂಬ ಪ್ರಶ್ನೆ ಮೂಡುವಂತೆ ಆಗಿದೆ’ ಎಂದು ನಾಗಲಕ್ಷ್ಮಿ ಹೇಳಿದ್ದಾರೆ.