newsics.com
ಬೆಂಗಳೂರು: ಟೊಮೆಟೋ ಬೆಳೆಯಿಂದ ನಷ್ಟ ಆಗಿದ್ದಕ್ಕೆ ಲ್ಯಾಪ್ಟಾಪ್ ಕಳ್ಳತನ ಮಾಡಿ ಮಾರುತ್ತಿದ್ದ ಟೆಕ್ಕಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಮುರುಗೇಶ ಎಂದು ಗುರುತಿಸಲಾಗಿದ್ದು, ಸಿಸ್ಟಮ್ ಆಡ್ಮಿನ್ ಆಗಿ ಕೆಲಸ ಮಾಡುತ್ತಿದ್ದ.
6 ಎಕರೆಯಲ್ಲಿ ಟೊಮೆಟೋ ಬೆಳೆದಿದ್ದ. ಅದಕ್ಕಾಗಿ ಹೊಸೂರಿನಲ್ಲಿ ಸಾಲ ಮಾಡಿದ್ದ. ಆದರೆ ಬೆಳೆ ಕೈಕೊಟ್ಟ ಕಾರಣ ಸಾಕಷ್ಟು ನಷ್ಟವನ್ನು ಅನುಭವಿಸಿದ್ದ.
ಸಾಲ ತೀರಿಸಲಾಗದೇ ಕಳೆದ ಆರು ತಿಂಗಳಿನಿಂದ ಮುರುಗೇಶ ಲ್ಯಾಪ್ಟಾಪ್ ಸರ್ವಿಸ್, ರಿಪೇರಿ ಮಾಡುವ ಕೆಲಸದಲ್ಲಿ ತೊಡಗಿದ್ದ. ಹೀಗೆ ಕೆಲಸದ ನೆಪ ಹೂಡಿ ಹಲವಾರು ಲ್ಯಾಪ್ಟಾಪ್ ಕದ್ದಿದ್ದ ಎನ್ನಲಾಗಿದೆ.