newsics.com
ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರದ ಪ್ರಕರಣಗಳ ವಿವರ ಕೋರಿ ಮುಖ್ಯ ಕಾರ್ಯದರ್ಶಿಗಳಿಗೆ ರಾಜ್ಯಪಾಲರು ಪತ್ರ ಬರೆದ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಸಚಿವ ಸಂಪುಟ ಸಭೆಯ ಮೂಲಕ ಅವರಿಗೆ ಟಕ್ಕರ್ ನೀಡಿದ್ದಾರೆ.
ಕುಲಪತಿ ನೇಮಕದ ನಿರ್ಧಾರವನ್ನು ರಾಜ್ಯ ಸರ್ಕಾರ ತನ್ನ ಸುಪರ್ದಿಗೆ ಪಡೆಯುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿ ನೇಮಕದ ತೀರ್ಮಾನ ಕೈಗೊಳ್ಳಲಾಯಿತು. ಈ ಮೂಲಕ ಇದುವರೆಗೂ ರಾಜ್ಯಪಾಲರಿಗೆ ಇದ್ದ ಅಧಿಕಾರವನ್ನು ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಂಡಂತಾಗಿದೆ. ಈ ಮೂಲಕ ರಾಜ್ಯಪಾಲರಿಗೆ ತಿರುಗೇಟು ನೀಡಿದೆ.
‘ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾಲಯ ತಿದ್ದುಪಡಿ ವಿಧೇಯಕ 2024’ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿತು. ಇದರಿಂದ ಕುಲಪತಿ ನೇಮಕ ಮಾಡಲು ರಾಜ್ಯ ಸರ್ಕಾರಕ್ಕೇ ಅವಕಾಶ ದೊರೆಯುತ್ತದೆ.