newsics.com
ರಾಯಚೂರು: ಸಚಿವ ಆರ್.ಬಿ ತಿಮ್ಮಾಪುರ ಒಡೆತನದ ಆರ್.ಬಿ ಶುಗರ್ಸ್ ಕಂಪನಿ ವಿರುದ್ಧ ಸರ್ಕಾರಿ ಭೂಮಿ ಕಬಳಿಸಿರುವ ಆರೋಪ ಕೇಳಿಬಂದಿದೆ.
ಚಿಕ್ಕ ಉಪ್ಪೇರಿ ಗ್ರಾಮದ ಸರ್ವೆ ನಂ62ರ ಗೈರಾಣಿ ಜಮೀನನ್ನು ಅಕ್ರಮವಾಗಿ ವಶಪಡಿಸಿಕೊಳ್ಳಲಾಗಿದೆ ಎಂದು ರೈತ ಸಂಘ ಲಿಂಗಸುಗೂರು ತಹಶಿಲ್ದಾರರಿಗೆ ಪತ್ರ ಬರೆದಿದೆ. ಈ ಭೂಮಿ ಆರ್.ಬಿ ಶುರ್ಗಸ್ ಕಂಪನಿ ಹೆಸರಿನಲ್ಲಿದೆ. ಪ್ರಭಾವಿ ವ್ಯಕ್ತಿಗಳು ಸುಣಕಲ್ ಸಿಮಾಂತರದಲ್ಲಿ ಜಮೀನು ಖರೀದಿ ಮಾಡಿ ಅದರ ಪಕ್ಕದಲ್ಲೇ ಇರುವ ಗೈರಾಣಿ ಭೂಮಿಯನ್ನು ಹೆಚ್ಚುವರಿಯಾಗಿ ವಶಪಡಿಸಿಕೊಂಡಿದ್ದಾರೆ. ಆದರೆ, ಈ ಭೂಮಿ ಜಾನುವಾರು ಅಭಿವೃದ್ಧಿಗಾಗಿ ಸೀಮಿತವಾಗಿದೆ. ಇ್ನು ಈ ಭೂಮಿಯಲ್ಲಿ ಸಕ್ಕರೆ ಕಾರ್ಖಾನೆ ನಿರ್ಮಿಸುವ ವಂದತಿ ಹಬ್ಬಿದ್ದು, ಸುತ್ತಮುತ್ತಲಿನ ಗ್ರಾಮಕ್ಕೆ ಪರಿಸರ ಮಾಲಿನ್ಯವಾಗಲಿದೆ. ಹೀಗಾಗಿ ತ್ಯಾಜ್ಯ ಪಕ್ಕದಲ್ಲಿರುವ ಕೃಷ್ಣ ನದಿಗೆ ಹರಿದು ಬರುವ ಸಾಧ್ಯತೆ ಇದೆ..