ಬೆಂಗಳೂರು: ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಕೇಂದ್ರ ಚುನಾವಣಾ ಆಯೋಗ ಉಪ ಚುನಾವಣೆ ಘೋಷಿಸಿದೆ.
ಕೋಟ ಶ್ರೀನಿವಾಸ ಪೂಜಾರಿ ಪ್ರತಿನಿಧಿಸುತ್ತಿದ್ದ ದಕ್ಷಿಣ ಕನ್ನಡ, ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಚುನಾವಣಾ ಆಯೋಗ ಇಂದು ಉಪಚುನಾವಣೆ ದಿನಾಂಕ ಪ್ರಕಟಿಸಿದೆ. ಈ ಚುನಾವಣೆಗೆ ಆಕ್ಟೋಬರ್ 21ಕ್ಕೆ ಮತದಾನ ನಡೆಯಲಿದೆ.
ಸೆಪ್ಟೆಂಬರ್ 25 ರಂದು ಚುನಾವಣಾ ಅಧಿಸೂಚನೆ ಜಾರಿಗೆ ಬರಲಿದ್ದು, ಅಕ್ಟೋಬರ್ 3 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್ 7 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.