Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಡೋಜ ಡಾ.ಹಂಪನಾ ಈ ಬಾರಿಯ ದಸರಾ ಉದ್ಘಾಟಕರು: ಸಿಎಂ ಘೋಷಣೆಗೆ ಹಿರಿಯ ಸಾಹಿತಿ ಸಂತಸ
ಕರ್ನಾಟಕಪ್ರಮುಖ

ನಾಡೋಜ ಡಾ.ಹಂಪನಾ ಈ ಬಾರಿಯ ದಸರಾ ಉದ್ಘಾಟಕರು: ಸಿಎಂ ಘೋಷಣೆಗೆ ಹಿರಿಯ ಸಾಹಿತಿ ಸಂತಸ

Share
1 Min Read
SHARE

newsics.com

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2024ರ ಉದ್ಘಾಟಕರನ್ನಾಗಿ ಸಾಹಿತಿ ಹಂಪ ನಾಗರಾಜಯ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಂಪ ನಾಗರಾಜಯ್ಯ ಅವರನ್ನು ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಲಾಗಿದೆ ಎಂದರು.

ಇದು ನನ್ನ ಭಾಗ್ಯ ಎಂದ ಹಂಪನಾ:

ನಾಡ ಹಬ್ಬ ಮೈಸೂರು ದಸರಾ ಮಹೋತ್ಸವವನ್ನು ನಾನು ಉದ್ಘಾಟನೆ ಮಾಡುತ್ತೇನೆ ಎಂದು ಕನಸು ಮನಸಿನಲ್ಲೂ ಯೋಚನೆ ಮಾಡಿರಲಿಲ್ಲ. ಆದರೆ ಈಗ ನನಗೆ ಆ ಅವಕಾಶ ಸಿಕ್ಕಿದೆ. ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ ಎಂದು ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಸಂತಸ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ದಸರಾವನ್ನು ಉದ್ಘಾಟನೆ ಮಾಡುವ ಆಸೆ ಇತ್ತು. ಆದರೆ ಅವಕಾಶ ಸಿಕ್ಕಿರಲಿಲ್ಲ. ಈಗ ಸಿಕ್ಕಿದೆ. ಇದು ನನಗೆ ಬಂದ ಭಾಗ್ಯ. ನಾನು 89 ವಯಸ್ಸಿಗೆ ಪದಾರ್ಪಣೆ ಮಾಡುತ್ತಿದ್ದೇನೆ. ಈ ವಯಸ್ಸಿನಲ್ಲಿ ಇಂತಹ ಭಾಗ್ಯ ಸಿಕ್ಕಿರುವುದು ಖುಷಿಯಾಗಿದೆ ಎಂದರು.

ಭರದ ಸಿದ್ಧತೆ:
ವಿಶ್ವವಿಖ್ಯಾತ ಮೈಸೂರು ದಸರಾ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ದಸರಾಕ್ಕೆ ಮೈಸೂರಿನಲ್ಲಿ ತಯಾರಿ ಜೋರಾಗಿದೆ. ಈಗಾಗಲೇ ಗಜಪಡೆ ತಾಲೀಮು ಆರಂಭವಾಗಿದೆ.
2024ರ ದಸರಾ ಮಹೋತ್ಸವ ಅಕ್ಟೋಬರ್ 3ರಂದು ಆರಂಭಗೊಂಡು ಅದೇ ತಿಂಗಳ 12ರಂದು ಸಮಾರೋಪಗೊಳ್ಳಲಿದೆ ಎಂದು ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ.

ಅಕ್ಟೋಬರ್ 3ರಂದು ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಬೆಳಗ್ಗೆ 9.15 ರಿಂದ 9.45ರ ಮುಹೂರ್ತದಲ್ಲಿ ದಸರಾ ಉದ್ಘಾಟನೆ ನೆರವೇರಲಿದೆ.
ಅಕ್ಟೋಬರ್ 3ರಂದು ಚಾಮುಂಡೇಶ್ವರಿ ದೇವಿಗೆ ನವರಾತ್ರಿಯ ಪ್ರಥಮ ಪೂಜೆ ನೆರವೇರಲಿದ್ದು, ನಂತರ 9 ದಿನಗಳ ಕಾಲ ದೇವಿಯ ಆರಾಧನೆ ನಡೆಯಲಿದೆ. ಅಕ್ಟೋಬರ್ 12ರಂದು ನವಮಿಯ ದಿನ ದುರ್ಗಾಷ್ಟಮಿ, ಮಹಾನವಮಿ, ಆಯುಧ, ಆನೆ ಮತ್ತು ಕುದುರೆ ಪೂಜೆ ನೆರವೇರಲಿದೆ.
ದಸರಾ ಮಹೋತ್ಸವದ ಕೊನೆಯ ದಿನವಾದ ಅಕ್ಟೋಬರ್ 13ರಂದು ವಿಜಯದಶಮಿ ಪೂಜೆ ನೆರವೇರಲಿದೆ. ಸಂಜೆ 4.30ರ ನಂತರ ಜಂಬೂ ಸವಾರಿ ನಡೆಯಲಿದ್ದು, ರಾತ್ರಿ 7.30ರ ನಂತರ ಪಂಜಿನ ಕವಾಯತು ನಡೆಯಲಿದೆ.

ಕರ್ನಾಟಕದಲ್ಲಿ ಶಾಲೆಗಳಿಗೆ ದಸರಾ ರಜೆ ಘೋಷಣೆ

TAGGED:Nadoja Dr. Hampana will inaugurate Dussehra this time: Senior Sahiti happy with CM's announcement
Share This Article
Facebook Twitter Copy Link Print
Previous Article ಕಿರಿಯ ಗೆಳೆಯನೊಂದಿಗೆ ಓಯೋ ರೂಮ್‌ಗೆ ಹೋದ ಈ ಆಂಟಿಗೇನಾಯ್ತು? ಲವ್ ಮೂಡ್‌ನಲ್ಲಿದ್ದಾಗಲೇ ಸತ್ತಿದ್ದು ಹೇಗೆ?
Next Article ಪಿಎಂ‌ ವಾಣಿ ಯೋಜನೆಗೆ ಮತ್ತಷ್ಟು ಬಲ: ದೇಶದಲ್ಲಿ 5 ಕೋಟಿ ವೈಫೈ ಹಾಟ್‌ಸ್ಪಾಟ್ ಸ್ಥಾಪನೆಗೆ ತೀರ್ಮಾನ, ದುಬಾರಿ ರೀಚಾರ್ಜ್‌ಗೆ ವಿದಾಯ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?