Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾರವಾರದಲ್ಲಿ ಮಚ್ಚಿನಿಂದ ಹಲ್ಲೆ ಮಾಡಿ ಉದ್ಯಮಿಯ ಕೊಲೆ
ಕರ್ನಾಟಕ

ಕಾರವಾರದಲ್ಲಿ ಮಚ್ಚಿನಿಂದ ಹಲ್ಲೆ ಮಾಡಿ ಉದ್ಯಮಿಯ ಕೊಲೆ

Share
2 Min Read
SHARE

newsics.com

ಕಾರವಾರ: ಕಡಲ ನಗರಿ ಕಾರವಾರದಲ್ಲಿ ಉದ್ಯಮಿಯೋರ್ವನ ಭೀಕರ ಹತ್ಯೆ ಇಡೀ ತಾಲೂಕಿನ ಜನರನ್ನ ಬೆಚ್ಚಿ ಬೀಳಿಸಿದೆ. ಕಳೆದ ಒಂದು ವಾರದ ಹಿಂದೆ ನಡೆದಿದ್ದ ಪ್ರಸಿದ್ದ ಸಾತೇರಿ ದೇವಿಯ ಜಾತ್ರೆಗೆಂದು ಪೂನಾದಿಂದ ಕಾರವಾರಕ್ಕೆ ಬಂದಿದ್ದ ಉದ್ಯಮಿಯನ್ನ ವಾಪಾಸ್ ಊರಿಗೆ ಹೊರಡುವ ವೇಳೆ ಕೊಚ್ಚಿ ಕೊಂದಿದ್ದಾರೆ. ಸದ್ಯ ಉದ್ಯಮಿಯ ಕೊಲೆಯನ್ನ ಮಾಡಿದ ಆರೋಪಿಗಳ ಪತ್ತೆಗೆ ಪೊಲೀಸರು ಜಾಡು ಬೀಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಣಕೋಣ ಎನ್ನುವ ಗ್ರಾಮದಲ್ಲಿ ಭಾನುವಾರ ಬೆಳ್ಳಂಬೆಳಿಗ್ಗೆ ಭೀಕರ ಹತ್ಯೆ ನಡೆದಿರುವುದು ಇಡೀ ತಾಲೂಕಿನ ಜನರನ್ನ ಬೆಚ್ಚಿ ಬೀಳಿಸಿದೆ. ಗ್ರಾಮದ ವಿನಾಯಕ ನಾಯ್ಕ ಎನ್ನುವ ವ್ಯಕ್ತಿಯನ್ನ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಂದಿದ್ದಾರೆ. ಮೂಲಕ ಹಣಕೋಣ ಗ್ರಾಮದ ವಿನಾಯಕ ನಾಯ್ಕ ಹಲವು ವರ್ಷದ ಹಿಂದೆಯೇ ಕೆಲಸಕ್ಕೆಂದು ಪೂನಾಕ್ಕೆ ತೆರಳಿ ಅಲ್ಲಿಯೇ ವಾಸವಾಗಿದ್ದರು. ಇಂಪೋರ್ಟ್ ಎಂಡ್ ಎಕ್ಸಪೋರ್ಟ್ ವ್ಯವಹಾರ ಮಾಡುತ್ತಿದ್ದ ವಿನಾಯಕ ವ್ಯವಹಾರದಲ್ಲೂ ಉತ್ತಮ ಹೆಸರು ಗಳಿಸಿ ಆರ್ಥಿಕವಾಗಿ ಸಭಲರಾಗಿದ್ದರು. ಇನ್ನು ಗ್ರಾಮಕ್ಕೆ ಪ್ರತಿ ವರ್ಷ ಎರಡು ಬಾರಿ ವಿನಾಯಕ್ ಆಗಮಿಸುತ್ತಿದ್ದನು. ಹೋಳಿ ಹಾಗೂ ಗಣಪತಿ ಹಬ್ಬದ ಸಂದರ್ಭದಲ್ಲಿ ಆಗಮಿಸಿ ಸಾತೇರಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ನಂತರ ವಾಪಾಸ್ ತೆರಳುತ್ತಿದ್ದನು. ಇವತ್ತು ಬೆಳಿಗ್ಗೆ 5.30ರ ವೇಳೆಗೆ ವಾಪಾಸ್ ಪೂನಾಕ್ಕೆ ತೆರಳಲು ವಿನಾಯಕ್ ಸಿದ್ದನಾಗಿದ್ದಾನೆ. ಬೆಳಿಗ್ಗೆ ಬಟ್ಟೆಗಳನ್ನ ಕಾರಿನಲ್ಲಿ ಇಡಲು ಬಾಗಿಲು ತೆಗೆಯುತ್ತಿದ್ದಂತೆ ಮೂವರು ಅಪರಿಚಿತರು ವಿನಾಯಕನ ಮೇಲೆ ದಾಳಿಗೆ ಇಳಿದಿದ್ದಾರೆ. ದಾಳಿ ಭೀಕರತೆ ಹೇಗಿತ್ತೆಂದರೆ ವಿನಾಯಕನ ಭುಜವೇ ತುಂಡಾಗಿದ್ದು ಸ್ಥಳದಲ್ಲೇ ಕುಸಿದು ಬಿದ್ದ ಆತ ಮೃತಪಟ್ಟಿದ್ದಾನೆ. ಇನ್ನು ಈ ವೇಳೆ ಸದ್ದು ಕೇಳಿ ಓಡಿ ಬಂದ ಪತ್ನಿಯ ಮೇಲೆ ಸಹ ಹಲ್ಲೆಯಾಗಿದ್ದು ಆಕೆಯನ್ನ ಕಾರವಾರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ.

ಇನ್ನು ವಿನಾಯಕ ಕೊಲೆಯ ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ ನಾರಾಯಣ್ ನೇತೃತ್ವದ ಪೊಲೀಸರ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆಗೆ ಇಳಿದಿದೆ. ಕಾರಿನಲ್ಲಿ ಬಂದ ಅಪರಿಚಿತರು ದುಷ್ಕೃತ್ಯ ಎಸೆಗಿ ಪರಾರಿಯಾಗಿದ್ದು ಗ್ರಾಮಕ್ಕೆ ತೆರಳುವ ರಸ್ತೆಗಳಲ್ಲಿನ ಸಿಸಿಟಿವಿಯಲ್ಲಿ ಕಾರಿನ ಓಡಾಟವನ್ನ ಗಮನಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ವಿನಾಯಕನ ಹತ್ಯೆ ಉದ್ಯಮದಲ್ಲಿನ ದ್ವೇಷ ಕಾರಣ ಇರಬಹುದು ಎನ್ನುವ ಅಂದಾಜು ಮಾಡಲಾಗಿತ್ತು. ಆದರೆ ಸದ್ಯ ವೈಯಕ್ತಿಕ ವಿಚಾರದಲ್ಲೂ ಕೊಲೆಯಾಗಿರಬಹುದು ಎನ್ನುವ ಅಂದಾಜು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share This Article
Facebook Twitter Copy Link Print
Previous Article ಮೈಸೂರು ಅರಮನೆ ಮುಂಭಾಗ ಹೀಗೆ ಮಾಡುವಂತಿಲ್ಲ! ಕಾರಣ ಏನು ಗೊತ್ತಾ?
Next Article ಮಾತು ಬಿಟ್ಟಿದ್ದಕ್ಕೆ ಯುವತಿ, ಆಕೆಯ ಪೋಷಕರಿಗೆ ಚೂರಿ ಇರಿದ ಯುವಕ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?