newsics.com
ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸಲು ಹಿಂಜರಿಯುವುದಿಲ್ಲ. ಕಾನೂನು ತಜ್ಞರ ಜೊತೆ ಚರ್ಚಿಸಿ ಮುಂದಿನ ಕಾನೂನು ಹೋರಾಟಗಳ ಕುರಿತು ತೀರ್ಮಾನಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧದ ತನಿಖೆಗೆ ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ಹೈಕೋರ್ಟ್ ವಜಾಗೊಳಿಸಿತ್ತು. ಹೈಕೋರ್ಟ್ ತೀರ್ಪು ಬಗ್ಗರ ಮಾತನಾಡಿದ ಸಿದ್ದರಾಮಯ್ಯ, ಸತ್ಯಕ್ಕೆ ಜಯ ಸಿಗಲಿದೆ. ತನಿಖೆಯನ್ನು ಎದುರಿಸಲು ನಾನು ಹಿಂಜರಿಯುವುದಿಲ್ಲ, ಕಾನೂನಿನಡಿಯಲ್ಲಿ ಅಂತಹ ತನಿಖೆಗೆ ಅನುಮತಿ ಇದೆಯೇ ಅಥವಾ ಇಲ್ಲವೇ ಎಂಬುದನ್ನು ನಾನು ತಜ್ಞರನ್ನು ಸಂಪರ್ಕಿಸುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದರು.
ಮುಡಾ ಹಗರಣ ಪ್ರಾಸಿಕ್ಯೂಷನ್: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ರಾಜ್ಯಾದ್ಯಂತ ಬಿಗಿ ಭದ್ರತೆಗೆ ಪೊಲೀಸ್ ಡಿಜಿ ಸೂಚನೆ, ಸಿಎಂಗೆ ಮತ್ತೊಂದು ಸಂಕಷ್ಟ