Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾ ಉರುಳು ಮತ್ತಷ್ಟು ಬಿಗಿ: ಸಿಎಂ ವಿರುದ್ಧ 10ಕ್ಕೂ ಹೆಚ್ಚು ಸೆಕ್ಷನ್‌ಗಳಲ್ಲಿ ಎಫ್ಐಆರ್ ದಾಖಲು ಸಾಧ್ಯತೆ, ಮೈಸೂರು ಲೋಕಾದಲ್ಲಿ ಹೈಡ್ರಾಮಾ
ಕರ್ನಾಟಕಪ್ರಮುಖ

ಮುಡಾ ಉರುಳು ಮತ್ತಷ್ಟು ಬಿಗಿ: ಸಿಎಂ ವಿರುದ್ಧ 10ಕ್ಕೂ ಹೆಚ್ಚು ಸೆಕ್ಷನ್‌ಗಳಲ್ಲಿ ಎಫ್ಐಆರ್ ದಾಖಲು ಸಾಧ್ಯತೆ, ಮೈಸೂರು ಲೋಕಾದಲ್ಲಿ ಹೈಡ್ರಾಮಾ

Share
2 Min Read
SHARE

newsics.com

ಬೆಂಗಳೂರು/ ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊರಳಿಗೆ ಸುತ್ತಿಕೊಂಡಿರುವ ಮುಡಾ ನಿವೇಶನ ಹಂಚಿಕೆ ಉರುಳು ಇದೀಗ ಮತ್ತಷ್ಟು ಬಿಗಿಯಾಗಿದೆ.

ಎಫ್‌ಐಆರ್‌ ದಾಖಲಿಸಿ ಮೂರು ತಿಂಗಳಲ್ಲಿ ತನಿಖಾ‌ ವರದಿ ನೀಡುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ಆದೇಶ ಆದೇಶ ನೀಡಿದ ಬೆನ್ನಲ್ಲೇ ಇಂದು ಮೈಸೂರು ಲೋಕಾಯುಕ್ತದಲ್ಲಿ ಸಿಎಂ ಸಿದ್ದರಾಮಯ್ಯರ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಲಿದೆ.

ಭ್ರಷ್ಟಾಚಾರ ತಡೆ ಕಾಯ್ದೆ 1988 ಕಾಯ್ದೆಯಡಿ ಪ್ರಕರಣಗಳು ದಾಖಲು ಮಾಡುವ ಸಾಧ್ಯತೆ. ಬೇನಾಮಿ ಆಸ್ತಿ ವಹಿವಾಟು ಕಾಯ್ದೆ 1988, ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011ರ ಅನ್ವಯ ಪ್ರಕರಣ, ಸೆಕ್ಷನ್ 120 ಬಿ ಕ್ರಿಮಿನಲ್ ಪಿತೂರಿ, ಸೆಕ್ಷನ್ 166 ಸಾರ್ವಜನಿಕ ಸೇವಕ‌ ಕಾನೂನು ಉಲ್ಲಂಘನೆ ಮಾಡುವುದು, ಸೆಕ್ಷನ್ 403 ಆಸ್ತಿಯ ದುರ್ಬಳಕೆ, ಸೆಕ್ಷನ್ 406 ನಂಬಿಕೆಯ ಉಲ್ಲಂಘನೆ, ಸೆಕ್ಷನ್ 420 ವಂಚನೆ, ಸೆಕ್ಷನ್ 426 ದುಷ್ಕೃತ್ಯವೆಸಗುವುದು, ಸೆಕ್ಷನ್ 465 ಪೋರ್ಜರಿ, ಸೆಕ್ಷನ್ 468 ವಂಚನೆ ಉದ್ದೇಶಕ್ಕಾಗಿ ದಾಖಲೆಗಳ ಪೋರ್ಜರಿ, ಸೆಕ್ಷನ್ 340 ಅಕ್ರಮ ಬಂಧನ, ಸೆಕ್ಷನ್ 351 ಇತರರಿಗೆ ಹಾನಿಯನ್ನುಂಟು ಮಾಡುವುದು ಸೇರಿದಂತೆ ಹಲವು ಪ್ರಕರಣಗಳು ದಾಖಲಾಗುವ ಸಾಧ್ಯತೆಯಿದೆ.

ಈ ಮಧ್ಯೆ, ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ಧ ನೀಡಿರುವ ದೂರಿಗೆ ಎಫ್‌ಐಆರ್ ದಾಖಲಿಸಬೇಕು ಅಥವಾ ಹಿಂಬರಹ ನೀಡಬೇಕೆಂದು ಜೆಡಿಎಸ್ ವಕ್ತಾರ ಎಸ್.ಪಿ.ಪ್ರದೀಪ್ ಕುಮಾರ್‌ ನೇತೃತ್ವದ ನಿಯೋಗ ಬುಧವಾರ ಮೈಸೂರು ಲೋಕಾಯುಕ್ತ ಎಸ್ಪಿ ಕಚೇರಿಯಲ್ಲಿ ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿದ ವಕೀಲ ಪ್ರದೀಪ್ ಕುಮಾರ್, ಹೈಕೋರ್ಟ್ ಆದೇಶ ಪ್ರತಿಯೊಂದಿಗೆ ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ ಅವರಿಗೆ ದೂರು ನೀಡಿ ಎಫ್‌ಐಆರ್‌ ದಾಖಲಿಸುವಂತೆ ಮನವಿ ಮಾಡಿದರು. ಈ ಹಿಂದೆ ಇದೇ ವಿಚಾರವಾಗಿ ನೀಡಿದ್ದ ಎರಡು ದೂರಿನ ಕುರಿತು ಏನು ಕ್ರಮ ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ಹಿಂಬರಹ ನೀಡಿ ಎಂದು ಪಟ್ಟುಹಿಡಿದರು.

ಮುಖ್ಯಮಂತ್ರಿ ವಿರುದ್ದ ನಾವು ನೀಡಿರುವ ದೂರಿಗೆ ಎಫ್‌ಐಆರ್‌ ದಾಖಲಿಸಬೇಕು. ಅಥವಾ ಹಿಂಬರಹ ನೀಡಬೇಕು. ಇಲ್ಲದಿದ್ದರೆ ಕಚೇರಿ ಎದುರು ಪ್ರತಿಭಟಿಸುವುದಾಗಿ ಎಚ್ಚರಿಸಿದರು. ಇದರಿಂದ ಕಚೇರಿಯಲ್ಲಿ ಕೆಲ ಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.

ಈ ನಡುವೆ, ಕಾನೂನು ಹೋರಾಟದಲ್ಲಿ ಸಿಎಂಗೆ ಹಿನ್ನಡೆಯಾದ ಹಿನ್ನೆಲೆಯಲ್ಲಿ ಕಾನೂನು ತಜ್ಞರ ತಂಡವನ್ನು ಬದಲಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ಎಮಿರೇಟ್ಸ್ ವಿಮಾನದಲ್ಲಿ ಹೊಗೆ, ಚೆನ್ನೈ ಏರ್‌ಪೋರ್ಟ್‌ನಲ್ಲಿ ಆತಂಕಕ್ಕೀಡಾದ 280‌ ಪ್ರಯಾಣಿಕರು

59 ತುಂಡು ಮಾಡಿ ಮಹಿಳೆ ಕೊಂದಿದ್ದ ಆರೋಪಿ ಡೆತ್ ನೋಟ್ ಪತ್ತೆ..!

ಜಪಾನ್ ಹಿಂದಿಕ್ಕಿ ಏಷ್ಯಾದ ಮೂರನೇ ಶಕ್ತಿಶಾಲಿ ರಾಷ್ಟ್ರವಾದ ಹೆಮ್ಮೆಯ ಭಾರತ

TAGGED:hydrama in Mysore lokayukthaMuda's trouble gets tighter: FIR likely to be filed against CM in more than 10 sections
Share This Article
Facebook Twitter Copy Link Print
Previous Article ಈ ದಿನ- ಪಂಚಾಂಗ, ರಾಶಿ ಭವಿಷ್ಯ, 26-09-2024, ಗುರುವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article ರೀಲ್ಸ್ ಮಾಡಲು ಓಡುತ್ತಿದ್ದ ರೈಲಿನ ಮೇಲೆ ಸಾಹಸ, ಯುವಕನಿಗೆ ವಿದ್ಯುತ್ ಶಾಕ್, ಗಂಭೀರ ಗಾಯ, ವೈರಲ್ ವಿಡಿಯೋ ನೋಡಿ

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?